Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ರಾಣಿ ಚೆನ್ನಮ್ಮ ಹೋರಾಟ, ಮಹಿಳಾ ಸಬಲೀಕರಣಕ್ಕೆ ಸ್ಫೂರ್ತಿ

ಸುದ್ದಿಮೂಲ ವಾರ್ತೆ

ತುಮಕೂರು, ಅ.13 : ಕಿತ್ತೂರು ರಾಣಿ ಚೆನ್ನಮ್ಮಳ ಹೋರಾಟ ಇಂದಿನ ಮಹಿಳಾ ಸಬಲೀಕರಣಕ್ಕೆ ಸ್ಫೂರ್ತಿ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದ ಕಿತ್ತೂರು ಉತ್ಸವ ವೀರಜ್ಯೋತಿ ಯಾತ್ರೆಯನ್ನು ತುಮಕೂರಿನಲ್ಲಿ ಜಿಲ್ಲಾಡಳಿತದಿಂದ ಭವ್ಯವಾಗಿ ಸ್ವಾಗತಿಸಿದ ನಂತರ ಮಾತನಾಡಿದ ಅವರು, ಚೆನ್ನಮ್ಮ ಬ್ರಿಟೀಷರ ವಿರುದ್ಧ ಕರನಿರಾಕರಣೆ ಚಳವಳಿ ಮಾಡಿದರಲ್ಲದೆ, ಸಾಮ್ರಾಜ್ಯ ಸಂರಕ್ಷಣೆಗೆ ಹೋರಾಟ ಮಾಡಿದ ಕೆಚ್ಚೆದೆಯ ಮಹಿಳೆ. ಇಂದಿಗೂ ಕೂಡ ಚೆನ್ನಮ್ಮ ಅವರ ಧೈರ್ಯ ಮತ್ತು ಸಾಹಸದ ಬಗ್ಗೆ ಶಾಲಾ-ಕಾಲೇಜಿನ ಪಠ್ಯದಲ್ಲಿ ಕಾಣಬಹುದು. ಚೆನ್ನಮ್ಮ ಅವರ ಹೋರಾಟ ನಮ್ಮೆಲ್ಲರಿಗೂ ದಾರಿ ದೀಪವಾಗಿದೆ ಎಂದು ತಿಳಿಸಿದರು.

ಬೆಳಗಾವಿಯ ಕಿತ್ತೂರಿನಲ್ಲಿ ಅ. 23, 24 ಹಾಗೂ 25ರಂದು ಹಮ್ಮಿಕೊಂಡಿರುವ ಮೂರು ದಿನಗಳ ಕಿತ್ತೂರು ಉತ್ಸವವು ನಾಡು-ನುಡಿಯನ್ನು ಬಿಂಬಿಸುವ, ಸ್ವಾತಂತ್ರ್ಯ ಕಹಳೆಯನ್ನು ನೆನಪಿಸುವ ಕಾರ್ಯಕ್ರಮವಾಗಬೇಕು ಎಂದು ಆಶಿಸಿದರು.

ತಹಶೀಲ್ದಾರ್ ಸಿದ್ದೇಶ್ ಮಾತನಾಡಿ, ಬ್ರಿಟೀಷರ ವಿರುದ್ಧ ಹೋರಾಟ ಮಾಡುವ ಮೂಲಕ ಸ್ವಾತಂತ್ರ್ಯಕ್ಕೆ ಮುನ್ನುಡಿ ಬರೆದ ವೀರ ಮಹಿಳೆ ಎಂದು ಕಿತ್ತೂರು ರಾಣಿ ಚೆನ್ನಮ್ಮ ಸಾಹಸದ ಬಗ್ಗೆ ಬಣ್ಣಿಸಿದರು.

ಕಿತ್ತೂರು ಉತ್ಸವ ವೀರಜ್ಯೋತಿ ಯಾತ್ರೆಯನ್ನು ನಗರದ ಕನ್ನಡ ಭವನದ ಬಳಿ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡುವ ಮೂಲಕ ಚಿತ್ರದುರ್ಗ ಜಿಲ್ಲೆಗೆ ಬೀಳ್ಕೊಡಲಾಯಿತು.

ಕಾರ್ಯಕ್ರಮದಲ್ಲಿ ರೇಷ್ಮೆ ಇಲಾಖೆಯ ಉಪನಿರ್ದೇಶಕ ವೈ.ಕೆ.ಬಾಲಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ