Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವೀಸ್ ರಸ್ತೆ ನಿರ್ಮಿಸದೆ ಟೋಲ್ ವಸೂಲಿ ಮಾಡಬಾರದು: ಕೆ.ಎನ್. ರಾಜಣ್ಣ

ಸುದ್ದಿಮೂಲ ವಾರ್ತೆ

ತುಮಕೂರು, ಮೇ 26: ಜಿಲ್ಲೆಯಲ್ಲಿ ನಂಜುಂಡಪ್ಪ ವರದಿ ಪ್ರಕಾರ ಅತಿ ಹಿಂದುಳಿದಿರುವ ತಾಲ್ಲೂಕುಗಳಾಗಿರುವ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ಜನರು ಸಂಚರಿಸುವ ರಾಜ್ಯ

ಹೆದ್ದಾರಿಯಲ್ಲಿ ಸ್ಥಾಪಿಸಲಾಗಿರುವ ಟೋಲ್‌ನಲ್ಲಿ ಸರ್ವೀಸ್ ರಸ್ತೆ ನಿರ್ಮಿಸದೆ ಶುಲ್ಕ ವಸೂಲಿ ಮಾಡಬಾರದು ಎಂದು ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರಟಗೆರೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಎರಡು ಟೋಲ್‌ಗಳನ್ನು ಸ್ಥಾಪಿಸಲಾಗಿದೆ. ಈ ಟೋಲ್‌ಗಳಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿರುವುದರಿಂದ ಮಧುಗಿರಿ,

ಕೊರಟಗೆರೆ ಹಾಗೂ ಪಾವಗಡ ತಾಲ್ಲೂಕಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮಧುಗಿರಿ, ಕೊರಟಗೆರೆ ಹಾಗೂ ಪಾವಗಡ ಈ ಮೂರು ತಾಲ್ಲೂಕುಗಳು ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲ್ಲೂಕು ಎಂದು ನಮೂದಾಗಿದೆ. ಸರ್ಕಾರ ಟೋಲ್ ಹಾಕುವುದಾದರೆ ಪಕ್ಕದಲ್ಲಿ ಸರ್ವೀಸ್ ರಸ್ತೆ ನಿರ್ಮಿಸಿ ಟೋಲ್ ಸ್ಥಾಪಿಸಬೇಕಾಗಿತ್ತು. ನಾವು ಓಡಾಡುವ ರಸ್ತೆಯಲ್ಲಿ ನಮಗೆ ಉಚಿತವಾಗಿ ಓಡಾಡುವ ಅವಕಾಶ ಇದ್ದೇ ಇರುತ್ತದೆ. ಸರ್ವೀಸ್ ರಸ್ತೆ ಮಾಡದೆ ಟೋಲ್ ಹಾಕಿರುವುದರಿಂದ ಈ ಭಾಗದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರೆ ಟೋಲ್ ತೆಗೆಸುತ್ತೇವೆ ಎಂದು ಜನರಿಗೆ ನಾನು, ಡಾ. ಜಿ. ಪರಮೇಶ್ವರ್ ಹಾಗೂ ವೆಂಕಟೇಶ್ ಅವರು ಮನವಿ ಮಾಡಿದ್ದೇವು. ಮೇ 30ಕ್ಕೆ ಈ ಟೋಲ್‌ನಲ್ಲಿ ಹಣ ವಸೂಲಿ ಮಾಡುವ ಗುತ್ತಿಗೆ ಅವಧಿ ಮುಗಿಯುತ್ತಿದೆ. ಹಾಗಾಗಿ ಜೂ.1 ರಿಂದ ಮತ್ತೆ ಈ ಟೋಲ್‌ಗಳ ಗುತ್ತಿಗೆ ಅವಧಿಯನ್ನು ನವೀಕರಿಸಿ ಶುಲ್ಕ ವಸೂಲಿ ಮಾಡಬಾರದು ಎಂಬುದು ನಾನೂ ಸೇರಿದಂತೆ ಡಾ. ಜಿ. ಪರಮೇಶ್ವರ್, ವೆಂಕಟೇಶ್ ಅವರ ಒತ್ತಾಯವಾಗಿದೆ ಎಂದಿದ್ದಾರೆ.

ಒಂದು ವೇಳೆ ಟೋಲ್ ಹಾಕುವುದಾದರೆ ಸರ್ವೀಸ್ ರಸ್ತೆ ಮಾಡಿ ಹಾಕಿಕೊಳ್ಳಲಿ. ಇದಕ್ಕೆ ನಮ್ಮ ಅಡ್ಡಿಯಿಲ್ಲ. ಸರ್ವೀಸ್ ರಸ್ತೆ ನಿರ್ಮಿಸದೇ ಟೋಲ್ ಹಣ ವಸೂಲಿ ಮಾಡುವುದು ಅವೈಜ್ಞಾನಿಕ. ಹಾಗಾಗಿ ಜೂ. 1 ರಿಂದ

ಟೋಲ್‌ನಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಜನರ ಭಾವನೆಗಳಿಗೆ ಸ್ಪಂದಿಸದೆ ವ್ಯತಿರಿಕ್ತವಾಗಿ ನಡೆದರೆ ಅದಕ್ಕೆ ಜನರು ಅವರದೇ ಆದ ರೀತಿಯಲ್ಲಿ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಇದಕ್ಕೆ ನಾವ್ಯಾರು ಕಾರಣರಾಗುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು

ಗಮನಹರಿಸಬೇಕು ಎಂದಿರುವ ಶಾಸಕ ಕೆ.ಎನ್. ರಾಜಣ್ಣ ಅವರು, ಜೂ. 1ರಿಂದ ಟೋಲ್ ಹಣವನ್ನು ಜನರಿಂದ ಪಾವತಿ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ