Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಡತಿ ಬಸ್ ನಿಲ್ದಾಣ ಅವ್ಯವಸ್ಥೆಯ ಆಗರ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ ಸೆ.11:ಪ್ರಯಾಣಿಕರ ಹಿತದೃಷ್ಟಿಯಿಂದ ಮಹದೇವಪುರ ಕ್ಷೇತ್ರದ ಕೊಡತಿ ಗ್ರಾಮದಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣ ಅವ್ಯವಸ್ಥೆಯ ಆಗರವಾಗಿ ಉಪಯೋಗಕ್ಕೆ ಬಾರದಾಗಿದೆ.

ಈ ಹಿಂದೆ ಶಾಸಕರಾಗಿದ್ದ ಅರವಿಂದ ಲಿಂಬಾವಳಿ ಅವರು ತಮ್ಮ ಅನುದಾನದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲಾಗಿತ್ತು. ನಂತರದ ದಿನಗಳಲ್ಲಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೆ ಇರುವುದರಿಂದ ಕೋಳಿ ಗೂಡಾಗಿ ಸ್ವಚ್ಛ ಕಾಣದಾಗಿದೆ. ಪೌರ ಕಾರ್ಮಿಕರು ಬಸ್ ನಿಲ್ದಾಣವನ್ನು ಸ್ವಚ್ಛ ಮಾಡದೆ ಇರುವುದು ಕಾರಣವಾಗಿದೆ ಎಂದು ಕೊಡತಿ ಗ್ರಾಮಸ್ಥರು ದೂರಿದರು.

ಬಸ್ ನಿಲ್ದಾಣದಿಂದ ಕೇವಲ 50 ಮೀಟರ್ ಅಡಿಗಳ ಅಂತರದಲ್ಲಿ ಇರುವ ಗ್ರಾಮ ಪಂಚಾಯತಿ ಕಾರ್ಯಾಲಯವಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಬಸ್ ನಿಲ್ದಾಣ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ಇದರ ಕುರಿತು ಕ್ರಮ ವಹಿಸುತ್ತಿಲ್ಲ ಎಂದು ಪ್ರಯಾಣಿಕ ಶ್ರೀನಾಥ್ ದೂರಿದರು.

ಕೊಡತಿ ಗ್ರಾಮದಿಂದ ನಿತ್ಯ ನೂರಾರು ಪ್ರಯಾಣಿಕರು ಇದೇ ನಿಲ್ದಾಣದಿಂದ ತೆರಳಬೇಕಿದೆ. ಮಳೆ ಗಾಳಿಗೆ ನಿಲ್ದಾಣದಲ್ಲಿ ನಿಲ್ಲಲು ಆಗುವುದಿಲ್ಲ. ಸ್ವಚ್ಚತೆ ಎನ್ನುವುದು ಮರಿಚಿಕೆಯಾಗಿದೆ. ಸರಿಯಾದ ನಿರ್ವಹಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಬೇಕು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ