Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ : ಚುನಾವಣಾ ಹಿನ್ನೆಲೆ ಪರೇಡ್‌ , ಭದ್ರತಾ ಸಿಬ್ಬಂದಿಗೆ ಭವ್ಯ ಸ್ವಾಗತ

ಸುದ್ದಿಮೂಲವಾರ್ತೆ,

ಕೊಪ್ಪಳ ಏ ೦೫: ಮೇ ೧೦ ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ. ಸುವ್ಯವಸ್ಥಿತ, ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಬಿಗಿ ಭದ್ರತೆಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು. ಜಿಲ್ಲೆಯ ವಿವಿಧ ಪೊಲೀಸ್, ಹೋಂ ಗಾರ್ಡ್ ಗಳನ್ನು ಬಳಸಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಚುನಾವಣೆಯ ಭದ್ರತೆ ಗೆ ಆಗಮಿಸಿದ ಸಿಬ್ಬಂದಿಯನ್ನು ಕೊಪ್ಪಳ ನಗರದ ಜನತೆ ಅದ್ದೂರಿಯಾಗಿ ಸ್ವಾಗತಿಸಿದರು. ಹೂ ಮಳೆಗೆರೆದು. ಭದ್ರತೆಯ ಸಿಬ್ಬಂದಿಗೆ ಗೌರವ ಪೂರ್ವಕವಾಗಿ ಕೈ ಮುಗಿದು ಸ್ವಾಗತಿಸಿದರು. ಇನ್ನೂ ೩೫ ದಿನದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ. ಚುನಾವಣೆಗೆ ರಾಜಕೀಯ ಪಕ್ಷಗಳು ಒಂದು ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿವೆ. ಇನ್ನೂ ಸುಗಮ, ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಸಹ ಸಿದ್ದತೆ ಮಾಡಿಕೊಂಡಿದೆ. ಚುನಾವಣೆಯಲ್ಲಿ ಭದ್ರತೆ ಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು ಸಹ ಆಗಮಿಸಿವೆ.

ತಲಾ ೯೦ ಜನರನ್ನು ಹೊಂದಿರುವ ೩ ಪ್ಯಾರಾ ಮಿಲಿಟರಿ ಪಡೆಗಳು ಈಗಾಗಲೇ ಕೊಪ್ಪಳಕ್ಕೆ ಆಗಮಿಸಿವೆ. ಇದೇ ತಂಡದೊAದಿಗೆ ಕೆಎಸ್ ಆರ್ಪಿ, ಡಿಆರ್, ಸಿವಿಲ್ ಪೊಲೀಸರು ಸೇರಿ ಇಂದು ಕೊಪ್ಪಳದಲ್ಲಿ ಪಥ ಸಂಚಲನ ಮಾಡಿದರು.ಸುಮಾರು ನೂರಾರು ಭದ್ರತಾ ಸಿಬ್ಬಂದಿ ಇಂದು ತಮ್ಮ ಸಶಸ್ತ್ರಗಳೊಂದಿಗೆ ಪ್ರಮುಖ ಬೀದಿಯಲ್ಲಿ ಸಂಚರಿಸಿದರು. ಕೊಪ್ಪಳದ ಬಸ್ ನಿಲ್ದಾಣದ ಮುಂದಿನಿಂದ ಆರಂಭವಾದ ಪಥ ಸಂಚಲನವು ಆರಂಭವಾಗಿ ಅಶೋಕಾ ವೃತ್ತ, ಗಡಿಯಾರ ಕಂಬ, ಜವಾಹಾರ ರಸ್ತೆ, ಸಾಲರಜಂಗ್ ರಸ್ತೆ ಮೂಲಕ ಈಶ್ವರ ಪಾರ್ಕವರೆಗೂ ಪಥ ಸಂಚಲನ ನಡೆಯಿತು.

ನಗರದ ಪ್ರಮುಖ ಬೀದಿಯಲ್ಲಿ ಪಥ ಸಂಚಲನ ಹೊರಟಾಗ ಹರ್ಷ ಕಟ್ಟಿಮನಿ ಎಂಬ ಬಾಲಕ ಭದ್ರತಾ ಸಿಬ್ಬಂದಿಗೆ ಕೈಕುಲುಕಿ ಸ್ವಾಗತಿಸಿದರು. ಜವಾಹಾರ ರಸ್ತೆಯಲ್ಲಿ ಹಲವರು ಹೂವುವನ್ನು ರಸ್ತೆಯುದ್ದಕ್ಕೂ ಹಾಗು ಸಿಬ್ಬಂದಿಗಳ ಮೇಲೆ ಎಸೆದು ಸ್ವಾಗತಿಸಿದರು. ಕೆಲವರು ಅವರಿಗೆ ಗೌರವ ಪೂರ್ವಕವಾಗಿ ಕೈ ಮುಗಿದು ಸ್ವಾಗತಿಸಿದ್ದು ಒಂದು ಕಡೆಯಾದರೆ ಕೆಲವರು ಹೂವು ಮಾಲೆ ಮಿಲಿಟರಿಯನ್ನು ಸ್ವಾಗತಿಸಿದರು.
ಪಥ ಸಂಚಲನದಲ್ಲಿ ಜಿಲ್ಲಾಧಿಕಾರಿ ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಸಿಇಒ ರಾಹುಲ ರತ್ನಂ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ ಭಾಗವಹಿಸಿದ್ದರು. ಚುನಾವಣೆಯಲ್ಲಿ ಅಕ್ರಮ ತಡೆಯಲು. ಕಾನೂನು ಉಲ್ಲಂಘನೆ ಮಾಡುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಜನರು ನಿರ್ಭೀತಿಯಿಂದ ಮತದಾನ ಮಾಡಿ ಎಂಬ ಸಂದೇಶ ಸಾರಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ