Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಕಾರ್ಮಿಕ ಮುಖಂಡರ ಬೆಂಬಲ

ಸುದ್ದಿಮೂಲ ವಾರ್ತೆ

ತುಮಕೂರು, ನ. 29 : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಧರಣಿ 7ನೇ ದಿನಕ್ಕೆ ಕಾಲಿಟ್ಟಿದ್ದು, ಕಾರ್ಮಿಕ ಮುಖಂಡರು ಪ್ರತಿಭಟನಾ ಸ್ಥಳಕ್ಕೆ ಧಾವಿಸಿ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸೈಯದ್ ಮುಜೀದ್, ಅತಿಥಿ ಉಪನ್ಯಾಸಕರ ಸಮಸ್ಯೆ ಇಂದು ನಿನ್ನೆಯದಲ್ಲ.ಈ ಹೋರಾಟವನ್ನು ತಾರ್ಕಿಕ ಅಂತ್ಯ ಕಾಣುವವರೆಗೂ ನಿಮ್ಮ ಹೋರಾಟಕ್ಕೆ ನಿಲ್ಲಿಸಬಾರದು. ನೀವು ವಿಭಿನ್ನವಾಗಿ ಹೋರಾಟಗಳನ್ನು ಮಾಡುತ್ತಿದ್ದೀರಿ, ಆದರೆ ನಿಮ್ಮ ಹೋರಾಟ ಸೌಮ್ಯ ಸ್ವಭಾವದಲ್ಲಿದೆ.

ಈ ರೀತಿ ಹೋರಾಟ ಮಾಡಿದರೆ ಯಾವ ಸರ್ಕಾರಗಳು ಕಿವಿಗೊಡುವುದಿಲ್ಲ. ಹೋರಾಟದ ಸ್ವರೂಪವನ್ನು ತೀವ್ರಗೊಳಿಸಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ. ನಿಮ್ಮ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದರು.

ಗ್ರಾಮ ಪಂಚಾಯಿತಿ ದಿನಗೂಲಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯಮಾತನಾಡಿ, ಅತಿಥಿ ಉಪನ್ಯಾಸಕರು ಈ ರೀತಿಯಾಗಿ ಸೌಮ್ಯವಾಗಿ ಧರಣಿ ಪ್ರತಿಭಟನೆ ನಡೆಸಿದರೆ, ಸರ್ಕಾರಗಳು ಕಿವಿಗೊಡುವುದಿಲ್ಲ.

ನಿಮ್ಮ ಹೋರಾಟಗಳು ತೀವ್ರ ರೂಪದಲ್ಲಿದ್ದಾಗ ಮಾತ್ರ ನ್ಯಾಯ ದೊರೆಯುತ್ತದೆ. ಇಲ್ಲವಾದಲ್ಲಿ ಸರ್ಕಾರ ನಿಮ್ಮ ಬೇಡಿಕೆಗಳನ್ನು ಗಮನ ಹರಿಸುವುದಿಲ್ಲ ಎಂದು ಹೋರಾಟಗಾರರಿಗೆ ಕಿವಿಮಾತು ಹೇಳಿದರು.

ಜಿಲ್ಲಾಧ್ಯಕ್ಷ ಡಾ. ಧರ್ಮವೀರ್ ಮಾತನಾಡಿ, ಸಿಪಿಐ(ಎಂ) ಸಂಘಟನೆಯಿಂದ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ದೊರೆತಿದ್ದು, ಮುಂದಿನ ದಿನಗಳಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದರು.

ಸರ್ಕಾರ ಇನ್ನಾದರೂ ನಮ್ಮ ನ್ಯಾಯ ಸಮ್ಮತ ಬೇಡಿಕೆಯನ್ನು ಈಡೇರಿಸದಿದ್ದರೆ ಹೋರಾಟದ ರೂಪವನ್ನು ಬದಲಿಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಜತೆಗೆ ಇಂದು ಅತಿಥಿ ಉಪನ್ಯಾಸಕರು ಬೋಂಡ ಬಜ್ಜಿ ಮಾರಾಟ ಮಾಡುವ ಮೂಲಕ ಅತಿಥಿ ಉಪನ್ಯಾಸಕರು ಧರಣಿಯನ್ನು ಮಾಡುತ್ತಿದ್ದು, ನಾಳೆ ಮತ್ತೊಂದು ರೀತಿಯಲ್ಲಿ ವಿಭಿನ್ನವಾಗಿ ನಾವು ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರುಗಳಾದ ಸಿದ್ದಲಿಂಗು, ಗಿರೀಶ್, ಎರ್ರಿಸ್ವಾಮಿ,ಹರ್ಷಿತ, ಶಂಕರ್ ಹಾರೋಗೆರೆ ,ಸವಿತಾ, ಮಹೇಶ್, ಕಾಂತರಾಜು ಸೇರಿದಂತೆ ನೂರಾರು ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ