Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಜನತೆ ಸ್ವಯಂಪ್ರೇರಿತವಾಗಿ ಸ್ವಚ್ಛತೆಯಲ್ಲಿ ಪಾಲ್ಗೊಳ್ಳಲಿ

ಸುದ್ದಿಮೂಲ ವಾರ್ತೆ

ಹೊಸಕೋಟೆ,ಅ.1:ಯುವಜನತೆ ಸ್ವಯಂಪ್ರೇರಿತವಾಗಿ ಸ್ವಚ್ಛತೆಯಲ್ಲಿ ಪಾಲ್ಗೊಳ್ಳಬೇಕು. ಕಸ ಮುಕ್ತ ಗ್ರಾಮವನ್ನಾಗಿಸಲು ಸಹಕರಿಸಬೇಕು. ಸ್ವಚ್ಛತೆಗಾಗಿ ಕೆಲ ಸಮಯವನ್ನು ಮೀಸಲಿಟ್ಟರೆ, ಪ್ರತಿಯೊಬ್ಬರೂ ಆರೋಗ್ಯದಿಂದ ಜೀವನ ಸಾಗಿಸಲು ಸಾಧ್ಯ ಎಂದು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೆಂಕಟೇಶ್ ತಿಳಿಸಿದರು.

ಹೊಸಕೋಟೆ ತಾಲೂಕಿನ ನಂದಗುಡಿ ಗಾಂಧಿ ಪಾರ್ಕ್ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಹಾಗೂ ನಂದಗುಡಿ ಗ್ರಾಮ ಪಂಚಾಯಿತಿ ಸ್ವಚ್ಛತಾ ಇ ಸೇವಾ ಕಾರ್ಯಕ್ರಮದಡಿ ಶ್ರಮದಾನಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

ಕಸವನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡದೆ ವಿಲೇವಾರಿ ಮಾಡಿ, ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗದೆ. ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಬಹುದು. ಪ್ಲಾಸ್ಟಿಕ್ ಚೀಲವನ್ನಾಗಲಿ, ಅನುಪಯುಕ್ತ ವಸ್ತುಗಳನ್ನಾಗಲಿ ರಸ್ತೆಗಳ ಮೇಲೆ ಬಿಸಾಡದೇ ತಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಸ್ವಚ್ಛ ಭಾರತ ನಿರ್ಮಾಣವಾಗಲಿದೆ.

ಗ್ರಾಮಸ್ಥರು ಆರೋಗ್ಯವನ್ನು ಕಾಪಾಡುವ ಹಿತ ದೃಷ್ಟಿಯಿಂದ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಎಸ್‌ಡಿಎ ಸಂಪತ್‌ಕುಮಾರ್, ಕರವಸೂಲಿಗಾರ ಮನೋಜ್, ಗಣಕ ಯಂತ್ರ ನಿರ್ವಾಹಕಿ ನಯನ, ಸಿಬ್ಬಂದಿಗಳಾದ ಶಾಮಲ, ನಟರಾಜಪ್ಪ, ವೆಂಕಟೇಶಪ್ಪ, ರಮೇಶ್, ಮುನೇಗೌಡ, ಸುಬ್ಬರಾಯಪ್ಪ, ನಂದೀಶ, ಸುರೇಶ್ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ