Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೈವ ಚಿಂತನೆಯಿಂದ ಬದುಕು ಸರಳ : ಟಿ.ಎಲ್.ಆನಂದ್

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ,ಅ.15: ಬಹಿರಂಗದ ಯಶಸ್ಸಿಗಿಂತ ಅಂತರಂಗದ ಶಾಂತಿ ಮುಖ್ಯವಾದುದು. ದೈವ ಚಿಂತನೆಯಿಂದ ಬದುಕು ಸರಳವಾಗುತ್ತದೆ ಎಂದು ಪ್ರವಚನಕಾರ ತಳಗವಾರ ಟಿ.ಎಲ್.ಆನಂದ್ ಅಭಿಪ್ರಾಯಪಟ್ಟರು.

ಜಿಲ್ಲೆಯ ಕೈವಾರದ ಶ್ರೀಯೋಗಿನಾರೇಯಣ ಮಠದಲ್ಲಿ ಬೆಂಗಳೂರಿನ ಬಸವ ಬಳಗದ ಸದಸ್ಯರು ಆಯೋಜಿಸಿದ್ದ ಧಾರ್ಮಿಕ ಶಿಬಿರದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ನೂರಾರು ವರ್ಷಗಳ ಹಿಂದೆ ಇದ್ದಂತಹ ಸಾಧು- ಸಂತ-ದಾಸರನ್ನು ಇಂದಿಗೂ ನೆನೆಸಿಕೊಳ್ಳುತ್ತೇವೆ.

ಕಾರಣವೆಂದರೆ ಸಾಧುಸಂತರು ತಮಗಾಗಿ ಬದುಕಲಿಲ್ಲ. ಇಡೀ ಸಮಾಜಕ್ಕಾಗಿ ಜೀವನ ಸವೆಸಿದರು ಅವರ ಬದುಕು ನಮಗೆ ಪಾಠವಾಗಬೇಕು ಮನಸ್ಸಿನ ನಿಯಂತ್ರಣವಿಲ್ಲದೆ ಬದುಕಿನಲ್ಲಿ ಸುಖವಾಗಿರಲು ಸಾಧ್ಯವಿಲ್ಲ ಎಂದು ಸಾರಿದ ಕೈವಾರ ಯೋಗಿನಾರೇಯಣ ತಾತಯ್ಯನವರ ಬೋಧನೆಗಳು ನಮಗೆ ಮಾರ್ಗದರ್ಶನ ಎಂದರು.

ಬಸವ ಬಳಗದ ಅಧ್ಯಕ್ಷ ಉದಯಶಂಕರ್ ಮಾತನಾಡಿ, ಧಾರ್ಮಿಕ ಕ್ಷೇತ್ರಗಳಲ್ಲಿ ಶಿಬಿರಗಳನ್ನು ಆಯೋಜಿಸುವುದರಿಂದ ಹಲವಾರು ಮಾನಸಿಕ ಲಾಭಗಳನ್ನು ಪಡೆದುಕೊಳ್ಳಬಹುದಾಗಿದೆ.

ಮಾನಸಿಕವಾದ ಸದೃಢತೆಗೆ ಇಂತಹ ಪ್ರವಾಸ ಸ್ಥಳಗಳು ಪೂರಕವಾಗಿದೆ. ಕಾಲಜ್ಞಾನಿ ಕೈವಾರ ತಾತಯ್ಯನವರ ಚಿಂತನೆಗಳು ನಮಗೆ ಸದಾ ದಾರಿದೀಪ ಎಂದರು.

ಕಾರ್ಯಕ್ರಮದಲ್ಲಿ ಬಳಗದ ಕಾರ್ಯದರ್ಶಿ ಶ್ರೀಧರ್ ಹಿರೇಮಠ್, ಸದಸ್ಯರುಗಳಾದ ಶಿವಶಂಕರ್,ಶಿವಾನಂದ್, ಬಸವರಾಜು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ