Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸಬೇಕು- ಎಂ.ಶಿವಣ್ಣ

ಸುದ್ದಿಮೂಲ ವಾರ್ತೆ

ತುಮಕೂರು, ಮಾ.28: ಪೌರಕಾರ್ಮಿಕರು ಹಣದ ಆಸೆಗೆ ಒಳಗಾಗಿ ಮ್ಯಾನ್‌ಹೋಲ್ ಚೇಂಬರ್ ಒಳಗೆ ಇಳಿಯಬಾರದು ಹಾಗೂ ಪೌರಕಾರ್ಮಿಕರು ತಮ್ಮ ಸುರಕ್ಷತೆ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಇವರ ಸಹಯೋಗದಲ್ಲಿ ಸಫಾಯಿ ಕರ್ಮಚಾರಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಂ.ಎಸ್ ಕಾಯ್ದೆ 2013ರಂತೆ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸೋಮವಾರ ನಗರದ ಜಿಲ್ಲಾ ಬಾಲ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರು ಕೆಲಸ ಮಾಡುವ ಸಮಯದಲ್ಲಿ ಕೈಗಳಿಗೆ ಹ್ಯಾಂಡ್ ಗ್ಲೌಜ್ ಹಾಗೂ ಶೂ ಗಳನ್ನು ಧರಿಸಬೇಕು. ಪೌರಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಉದ್ದೇಶವೆಂದರೆ ಅವರ ಮಕ್ಕಳು ಸಹಾ ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ತೆಗೆದುಕೊಳ್ಳಬೇಕು. ಚಾಲಕರನ್ನು ನೇರ ಪಾವತಿಯ ಮೂಲಕ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುವುದು ಎಂದರು.

ಕೆಲಸ ಮಾಡುವ ಪೌರ ಕಾರ್ಮಿಕರು ನೆಮ್ಮದಿಯಾಗಿ ಕುಳಿತುಕೊಂಡು ತಿಂಡಿ ಮಾಡಲು ಸ್ಥಳ ಸಿಗುವುದಿಲ್ಲ ಆದ್ದರಿಂದ ಅವರಿಗಾಗಿ ವಿಶ್ರಾಂತಿ ಗೃಹಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದೇವೆ ಎಂದು ಹೇಳಿದರು.

ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ದಯಾನಂದ ಅವರು ಮಾತನಾಡಿ, ಪೌರಕಾರ್ಮಿಕರು ಕೆಲಸದ ಜೊತೆ ತಮ್ಮ ಆರೋಗ್ಯದ ಕಡೆಯು ಗಮನ ಕೊಡಬೇಕು ಹಾಗೂ ಕಾಲ ಕಾಲಕ್ಕೆ ಸರಿಯಾದ ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಕೆಲಸದ ಸಮಯದಲ್ಲಿ ಹೆಚ್ಚಿನದಾಗಿ ನೀರನ್ನು ಕುಡಿಯುವುದರಿಂದ ಯಾವುದೇ ಕಾಯಿಲೆಗಳು ಬರುವುದಿಲ್ಲ ಎಂದರಲ್ಲದೆ ಕಾರ್ಮಿಕರು ಹೆಚ್ಚಾಗಿ ಗುಟ್ಕಾ ಹಾಗೂ ಮದ್ಯಪಾನ ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಆದ್ದರಿಂದ ದುಶ್ಚಟಗಳಿಗೆ ಬಲಿಯಾಗಬೇಡಿ ಎಂದು ಹೇಳಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಮಹಾನಗರ ಪಾಲಿಕೆ ಆಯುಕ್ತ ಹೆಚ್.ವಿ.ದರ್ಶನ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಅಂಜನಪ್ಪ, ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್. ಮಂಜುನಾಥ್ ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿಯ ಸದಸ್ಯ ಕದುರಪ್ಪ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ