Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗೇಪಲ್ಲಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ 

ಸುದ್ದಿಮೂಲ ವಾರ್ತೆ

ಬಾಗೇಪಲ್ಲಿ,ಅ.28: ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಾಲ್ಮೀಕಿ ನಾಯಕ ನೌಕರರ ಸಂಘದ ವತಿಯಿಂದ ಆಚರಿಸಲಾಯಿತು.

ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ಮಹಾಕಾವ್ಯ ರಾಮಾಯಣವನ್ನು ಪ್ರಪಂಚಕ್ಕೆ ನೀಡಿದವರು. ಅಂತಹ ಮಹಾನ್ ವ್ಯಕ್ತಿಯು ಒಂದು ಕಾಲದಲ್ಲಿ ದರೋಡೆ ಮಾಡುತ್ತಿದ್ದನಂತೆ, ನಂತರ ತನ್ನ ಪಾಪದ ಪಾಲನ್ನು ಕುಟುಂಬಸ್ಥರೇ ಹಂಚಿಕೊಳ್ಳುವುದಿಲ್ಲ ಎಂದಾಗ ಮನಸ್ಸು ಪರಿವರ್ತನೆಯಾಗಿ ಮಾಡಿದ ತಪ್ಪುಗಳನ್ನು ತಿದ್ದಿಕೊಂಡು ಮಹಾತ್ಮನಾಗಿ ಆದಿಕವಿಯಾದವರು ಎಂದು ತಿಳಿಸಿದರು.

ನಮ್ಮಂತಹ ಬರನಾಡು, ಕೈಗಾರಿಕೆಗಳಿಲ್ಲದ, ಶಾಶ್ವತ ನೀರಾವರಿ ಇಲ್ಲದ ಪ್ರದೇಶಗಳಲ್ಲಿ ಶಿಕ್ಷಣವೊಂದೇ ಉತ್ತಮ ಸಾಧನ. ಈ ಶಿಕ್ಷಣದ ಮೂಲಕ ಅಭಿವೃದ್ಧಿಯನ್ನು ಸಾಧಿಸಬಹುದು. ಹಾಗಾಗಿ ಪೋಷಕರು ತಪ್ಪದೆ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ ಎಂದು ತಿಳಿಸಿದರು.

ತಹಶೀಲ್ದಾರ್ ಪ್ರಶಾಂತ್ ಕೆ. ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಶೇ. 6 ರಷ್ಟು ವಾಲ್ಮೀಕಿ ಸಮುದಾಯವನ್ನು ಹೊಂದಿದ್ದು, ನಾವು ವಾಲ್ಮೀಕಿ ಮಹರ್ಷಿ ತತ್ವ ಸಿದ್ದಾಂತ, ಅವರ ಕೃಷಿ. ಜ್ಞಾನ ಎಲ್ಲವನ್ನು ಪ್ರತಿಯೊಬ್ಬರು ಮೈಗೂಡಿಸಕೊಳ್ಳಬೇಕು. ಮುಖ್ಯವಾಗಿ ಮಕ್ಕಳು ತಮ್ಮ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ವಿದ್ಯಾಭ್ಯಾಸ ಪಡೆಯಬೇಕು. ಸಮುದಾಯದಲ್ಲಿ ಶಿಕ್ಷಣದ ಬಗ್ಗೆ ತಾತ್ಸಾರ ಮನೋಭಾವ ಸಲ್ಲದು, ಹಾಗಾಗಿ ಸಾಧಿಸುವ ಛಲವಿದ್ದರೆ ಉತ್ತಮ ಸ್ಥಾನಮಾನಗಳನ್ನು ಗಳಿಸಬಹುದು ಎಂದರು.

ಈ ಸಂಧರ್ಭದಲ್ಲಿ ಕಳೆದ ವರ್ಷ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನ ಮಾಡಲಾಯಿತು.

ಈ ಸಂಧರ್ಭದಲ್ಲಿ ವಾಲ್ಮೀಕಿ ನಾಯಕ ನೌಕರರ ಸಂಘದ ಪದಾಧಿಕಾರಿಗಳಾದ ಎಂ.ಸಿ ನಂಜುಂಡಪ್ಪ, ತಾಲೂಕು ವೈದ್ಯಧಿಕಾರಿಗಳಾದ ಡಾ. ಸತ್ಯನಾರಾಯಣ ರೆಡ್ಡಿ. ಶಿವಪ್ಪ, ನಿವೃತ್ತ ಉಪ ವಿಭಾಗಾಧಿಕಾರಿ ರಾಮಾಂಜಿನಪ್ಪ, ಜಿಲ್ಲಾ ಪಂಚಾಯತಿ‌ ಮಾಜಿ‌ ಸದಸ್ಯ ಬೂರಗಮಡುಗು ನರಸಿಂಹಪ್ಪ ಸೇರಿದಂತೆ ಹಲವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ