Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಅ.28: ನಗರದ ಮಿನಿ ವಿಧಾನಸೌಧದ ಬಳಿಯ ಆವರಣದಲ್ಲಿ ರಾಷ್ಟ್ರೀಯ ನಾಡ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 14ನೇ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಶಾಸಕ ಬಿ. ಎನ್ ರವಿಕುಮಾರ್ ಮಾತನಾಡಿ, ಹಿಂದೂಗಳ ಪವಿತ್ರ ಗ್ರಂಥ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹಾಕವಿ ಮಹರ್ಷಿ ವಾಲ್ಮೀಕಿ, ರಾಮನ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕೆಂದು ಹಾಗೂ ಅವರು ಕಳ್ಳತನ ಮಾಡಿ ಜೀವನ ಸಾಗಿಸುತ್ತಿದ್ದ ರತ್ನಾಕರನಿಗೆ ನಾರದ ಮುನಿಗಳ ಉಪದೇಶದಿಂದ ತಪ್ಪಸ್ಸು ಮಾಡಿ ವಾಲ್ಮೀಕಿ ಮಹರ್ಷಿಯಾದ ನಂತರ ರಾಮಾಯಣವನ್ನು ರಚನೆ ಮಾಡಿದ್ದು,ರಾಮಾಯಣದಲ್ಲಿ ಬರುವ ಪ್ರತಿಯೊಂದು ಕತೆಯಲ್ಲೂ ಜೀವನದ ಮೌಲ್ಯಗಳು,ಗುರು ಹಿರಿಯರಿಗೆ ಯಾವ ರೀತಿ ಗೌರವ ನೀಡಬೇಕು ಮತ್ತಿತರ ವಿಷಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದ್ದು,ಇಂದಿನ ಮಕ್ಕಳು ಮೊದಲು ಕಲಿಯಬೇಕಾಗಿರುವುದು ಗುರು ಹಿರಿಯರನ್ನು,ತಂದೆ ತಾಯಿಗಳನ್ನು ಗೌರವಿಸುವುದು ಎಂದು ತಿಳಿಸಿದರು.

ಇ.ಓ ಮುನಿರಾಜು ಮಾತನಾಡಿ, ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣದಲ್ಲಿ ರಾಮನು ನಡೆದುಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದ್ದು, ಶ್ರೀರಾಮನ ವ್ಯಕ್ತಿತ್ವವನ್ನು ಇಂದಿನ ಯುನಜನತೆ ರೂಡಿಸಿಕೊಳ್ಳಬೇಕೆಂದು ತಿಳಿಸಿದರು.

ಇದಕ್ಕೂ ಮುನ್ನ ವಾಡಿಕೆಯಂತೆ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ಮೊದಲು ಪೂಜೆ ಸಲ್ಲಿಸಿ ನಂತರ ನಗರದ ಮಯೂರ ವೃತ್ತದ ಬಳಿ ಇರುವ ಮಹರ್ಷಿ ವಾಲ್ಮೀಕಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ತಾಲ್ಲೂಕಿನ ನಗರ, ಗ್ರಾಮಗಳಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಹೊತ್ತ ಪಲ್ಲಕಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿದವು.

ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮುನಿಸ್ವಾಮಿರೆಡ್ಡಿ,ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್,ಕಾರ್ಯನಿರ್ವಣಾಧಿಕಾರಿ ಮುನಿರಾಜು,ಆರಕ್ಷಕ ವೃತ್ತ ನಿರೀಕ್ಷಕರು ಶ್ರೀನಿವಾಸ್ ,ಸಮಾಜ ಕಲ್ಯಾಣ ಇಲಾಖೆಯ ಜಗದೀಶ್ , ವಕೀಲರಾದ ವಿಜಯ ಶಂಕರ್ ಸೇರಿದಂತೆ ಮುಂತಾದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ