Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರ ಕಾರ್ಮಿಕರನ್ನು ಖಾಯಂಗೊಳಸಿ

ಬೆಂಗಳೂರು, ಜು, 13; ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೌರಕಾರ್ಮಿಕರ ಮಹಾಸಂಘದ ಬೆಂಗಳೂರು ನಗರ ಅಧ್ಯಕ್ಷ ಬಿ.ಎಂ. ಸುರೇಶ್ ಬಾಬು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಂಜನೇಯಲು. ಬಜೆಟ್ ನಲ್ಲಿ ಖಾಯಂ ಬಗ್ಗೆ ಏನನ್ನೂ ಹೇಳಿಲ್ಲ. ನೇರ ವೇತನ ಪೌರಕಾರ್ಮಿಕರಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ದಲಿತರು ಮತ್ತು ಶೋಷಿತರ ಬೆಂಬಲದಿಂದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರಾಜ್ಯದ ಪೌರ ಕಾರ್ಮಿಕರ ಹಿತ ರಕ್ಷಣೆಗೆ ಯಾವುದೇ ಕಾರ್ಯಕ್ರಮ ಪ್ರಕಟಿಸಿಲ್ಲ. ಸ್ವಚ್ಛತಾ ರಾಯಭಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವವರ ಹಿತ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದರು.

ಪೌರಕಾರ್ಮಿರ ಪರವಾಗಿ ನಿರಂತರ ಹೋರಾಟ ಮಾಡುತ್ತಿರುವ ಸಂಘದ ರಾಜ್ಯಾಧ್ಯಕ್ಷ ನಾರಾಯಣ(ಮೈಸೂರು) ಅವರನ್ನು ವಿಧಾನಪರಿಷತ್ತಿಗೆ ನಾಮಕರಣ ಮಾಡಬೇಕು. ಇಲ್ಲವಾದಲ್ಲಿ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿದರೆ ಪೌರ ಕಾರ್ಮಿಕರ ಹಿತ ರಕ್ಷಣೆ ಸಾಧ್ಯವಾಗಲಿದೆ. ನಾರಾಯಣ ಅವರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯೆ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪೌರಕಾರ್ಮಿಕರ ಮಹಾಸಂಘದ ರಾಜ್ಯ ಕಾರ್ಯಧ್ಯಕ್ಷ ಎಂ.ನಾಗರಾಜು (ಹೆಬ್ಬಾಳ), ಉಪಾಧ್ಯಕ್ಷರು, ಬೆಂ. ನಗರ ಎಂ.ಜಿ. ಶ್ರೀನಿವಾಸ್ ಉಪಾಧ್ಯಕ್ಷರು, ಬೆಂ. ನಗರ ಡಿ.ಸುಧಾಕರ್, ಕಾರ್ಯಾಧ್ಯಕ್ಷರು, ಬೆಂ.ನಗರ ಎಸ್.ವೆಂಕಟೇಶ್ವರಲು, ಕಾರ್ಯಧ್ಯಕ್ಷರು, ಬೆಂ.ನಗರ ಹೆಚ್.ಬಿ.ಶೇಖರ್, ಮಹಿಳಾ ಅಧ್ಯಕ್ಷರು, ಬೆಂ.ನಗರ ಶ್ರೀಮತಿ.ಲಕ್ಷಮ್ಮ, ಸಹ ಪ್ರಧಾನ ಕಾರ್ಯದರ್ಶಿ ಗಂಗಣ್ಣ ಕಾರ್ಯದರ್ಶಿ, ಬೆಂ.ನಗರ ಬಿ. ಆನಂದಕುಮಾರ್, ಸಂಘನಾ ಕಾರ್ಯದರ್ಶಿ, ಬೆಂ.ನಗರ ಎಸ್.ಆರ್.ವೆಂಕಟೇಶ್ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ