Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿವಿಸಿಗೆ ಮಂಜುಳಾ ಕರಡಿ ಉತ್ತರ

ಸಿವಿಸಿಗೆ ಮಂಜುಳಾ ಕರಡಿ ಉತ್ತರ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.23;ಸಂಸದ ಕರಡಿ ಸಂಗಣ್ಣ ಅವರು ಜಿಲ್ಲೆ ಕಂಡ ನಿಷ್ಪಕ್ಷಪಾತ ಹಾಗೂ ಜಾತ್ಯತೀತ ನಾಯಕ. ಇವರ ಬಗ್ಗೆ ಮಾತನಾಡಲು ಸಿ.ವಿ.ಚಂದ್ರಶೇಖರ್ ಅವರಿಗೆ ಏನಿದೆ ನೈತಿಕತೆ ಎಂದು ಬಿಜೆಪಿ ಮುಖಂಡರಾದ ಮಂಜುಳಾ ಅಮರೇಶ್ ಕರಡಿ ಪ್ರಶ್ನಿಸಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಂಸದರಾದ ಸಂಗಣ್ಣ ಕರಡಿ ಅವರು ಬ್ಲಾಕ್‌ಮೇಲೆ ಮಾಡಿ ಟಿಕೆಟ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ ಸಿ.ವಿ.ಚಂದ್ರಶೇಖರ್ ಗೆ ನೈತಿಕತೆ ಇಲ್ಲ. ಬಿಜೆಪಿ ಸಿವಿಸಿಗೆ ಎಂಎಲ್‌ಸಿ ಟಿಕೆಟ್ ನೀಡಿತ್ತು. ಪಕ್ಷದಲ್ಲಿ ರಾಷ್ಟ್ರೀಯ ಪರಿಷತ್ ಸದಸ್ಯ ಸ್ಥಾನ ನೀಡಿತ್ತು. ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲು ಪಕ್ಷ ಸಿದ್ಧವಿತ್ತು. ಆದರೆ, ಪಕ್ಷದಿಂದ ಹೊರಬಂದು ಜೆಡಿಎಸ್ ಸೇರಿದರು. ಉಂಡ ಮನೆಗೆ ಕನ್ನ ಹಾಕಿದ್ದಾರೆ. ಅವರು ಸಂಸದರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವಾಗಿದೆ ಎಂದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 2013 ಮತ್ತು 2018 ರಲ್ಲಿ ಬಿಜೆಪಿಗೆ ಸೋಲಾಗಲು ಸಿವಿಸಿ ಪರೋಕ್ಷವಾಗಿ ಕಾರಣಿಕರ್ತರಾಗಿದ್ದಾರೆ. ಬಿಜೆಪಿಯಲ್ಲಿ ಸ್ಥಾನಮಾನ ಪಡೆದು ಪ್ರಾದೇಶಿಕ ಪಕ್ಷಕ್ಕೆ ಸೇರಿರುವ ಅವರು ಪಕ್ಷ ನಿಷ್ಠೆ ಬಗ್ಗೆ ಮಾತನಾಡುವುದು ಸರಿಯಲ್ಲ. ಸಂಸದ ಕರಡಿ ಸಂಗಣ್ಣ ಅವರು ನಾಲ್ಕು ಬಾರಿ ಶಾಸಕರಾಗಿ ಎರಡು ಬಾರಿ ಸಂಸದರಾಗಿ ಕೊಪ್ಪಳ ಜಿಲ್ಲೆ ಅಭಿವೃದ್ಧಿ ಮಾಡಿದ್ದಾರೆ. ಅಂತಹ ಧೀಮಂತ ನಾಯಕನ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇರಲಿ. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು.

ನಮ್ಮ ಮಾವನವರು 2004 ರಲ್ಲಿ ರಾಷ್ಟ್ರೀಯ ಪಕ್ಷವಾದ ಬಿಜೆಪಿ ಸೇರಿದರು. ಅವತ್ತಿನ ಆತಂರಿಕ ಕಚ್ಚಾಟದಿಂದ ಜೆಡಿಎಸ್ ಗೆ ಹೋಗುವ ಸಂದರ್ಭ ಬಂದಿತು. ಪುನಃ 2010ರಲ್ಲಿ ಬಿಜೆಪಿ ಸೇರಿದ ಸಂಸದರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಭದ್ರ ಬುನಾದಿ ಹಾಕಲು ಸಾಕಷ್ಟು ಶ್ರಮವಹಿಸಿದ್ದಾರೆ. 2004 ಮತ್ತು 2013 ರಲ್ಲಿ ಸಂಸದರು ಬಿಜೆಪಿಯಿಂದ ಪರಾಭವಗೊಂಡ ನಂತರವೂ ಪಕ್ಷ ಸಂಘಟನೆಗೆ ಒತ್ತು ನೀಡಿ ಪಕ್ಷ ಬಲಿಷ್ಠಗೊಳಿಸಿದ್ದಾರೆ. 2018 ಮತ್ತು 2023 ರಲ್ಲಿ ನಮ್ಮ ಕುಟುಂಬದ ಸದಸ್ಯರು ಪರಾಭವಗೊಂಡರೂ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಣೆ ಮಾಡಲಾಗುತ್ತಿದೆ ಎಂದರು.

ನಮ್ಮ ಸಾಂಪ್ರದಾಯಿಕ ಎದುರಾಳಿ ಎನ್ನಲಾದ ಹಿಟ್ನಾಳ್- ಕರಡಿ ಕುಟುಂಬಗಳ ನಡುವೆ 1994, 1999, 2004, 2008, 2011, 2013, 2018, 2023ರ ವಿಧಾನಸಭಾ ಚುನಾವಣೆ ಹಾಗೂ 2014, 2019 ರ ಲೋಕಸಭೆಯಲ್ಲಿ ಸ್ಪರ್ಧೆ ನಡೆದಿದೆ. ಇದರಲ್ಲಿ ನಾಲ್ಕು ಬಾರಿ ವಿಧಾನಸಭೆ ಹಾಗೂ ಎರಡು ಬಾರಿ ಲೋಕಸಭೆಗೆ ಕರಡಿ ಸಂಗಣ್ಣ ಅವರು ಆಯ್ಕೆಯಾಗಿದ್ದಾರೆ. ಇನ್ನು ನಾಲ್ಕು ಬಾರಿ ಹಿಟ್ನಾಳ್ ಕುಟುಂಬದವರು ಶಾಸಕರಾಗಿದ್ದಾರೆ. ಕೊಪ್ಪಳದಲ್ಲಿ ಕರಡಿ- ಹಿಟ್ನಾಳ್ ಕುಟುಂಬ‌ ನಡುವೆ ಸ್ಪರ್ಧೆ ಇದೆಯೇ ಹೊರೆತು ನಿನ್ನೆ ಮೊನ್ನೆ ಬಂದ ಸಿವಿಸಿಗೆ ಜೊತೆ ಅಲ್ಲ ಎಂದು ತೀಕ್ಷ್ಣ ವಾಗಿ ಉತ್ತರಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ