Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷದಿಂದ ಮನರೇಗಾ ಬಚಾವ್ ಅಭಿಯಾನ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.12:
ಯುಪಿಎ ಸರಕಾರ ಜಾರಿಗೆ ತಂದ ಮನರೇಗಾ ಯೋಜನೆ ರದ್ದು ಮಾಡಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಬಡಜನರ ಉದ್ಯೋೋಗದ ಹಕ್ಕು ಕಸಿದು ಕೊಳ್ಳಲು ಹುನ್ನಾಾರ ನಡೆಸಿದ್ದು, ಇದನ್ನು ವಿರೋಧಿಸಿದ ಕಾಂಗ್ರೆೆಸ್ ಪಕ್ಷದಿಂದ ’ಮನರೇಗಾ ಬಚಾವ್ ಜನಾಂದೋಲನ ರೂಪಿಸಲಾಗುತ್ತಿಿದೆ ಎಂದು ವಿಧಾನಪರಿಷತ್ ಶಾಸಕ ಬಸನಗೌಡ ಬಾದರ್ಲಿ ಹೇಳಿದರು.
ಸೋಮವಾರ ನಗರದ ಪತ್ರಿಿಕಾಭವನದಲ್ಲಿ ಸುದ್ದಿಗೋಷ್ಠಿಿನಡೆಸಿ ಅವರು ಮಾತನಾಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಾಮೀಣ ಉದ್ಯೋೋಗ ಖಾತರಿ ಯೋಜನೆ ಮತ್ತೆೆ ಜಾರಿಗೆ ತರುವಂತೆ ಒತ್ತಾಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲು ಮುಖ್ಯಮಂತ್ರಿಿಗಳು, ಉಪಮುಖ್ಯಮಂತ್ರಿಿ ತೀರ್ಮಾನಿಸಿದ್ದಾಾರೆ.
ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಾಮೀಣ ಉದ್ಯೋೋಗ ಖಾತರಿ ಯೋಜನೆ ಜಾರಿಗೆ ತಂದು, ಕೋಟ್ಯಾಾಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದರು. ಮನರೇಗಾ ಗ್ರಾಾಮೀಣ ಪ್ರದೇಶದಲ್ಲಿ ಉದ್ಯೋೋಗ ಸೃಷ್ಟಿಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋೋಗ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ.
ಇದರಿಂದ ವರ್ಷದಲ್ಲಿ ನೂರು ದಿನ ಕಡ್ಡಾಾಯವಾಗಿ ಉದ್ಯೋೋಗ ಸಿಗುತ್ತಿಿತ್ತು. ಈಗ ಈ ಉದ್ಯೋೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆೆ ಕೇಂದ್ರ ಸರ್ಕಾರ ಕೈ ಹಾಕಿದೆ ಎಂದು ಆರೋಪಿಸಿದರು.
ಎಐಸಿಸಿ, ಕೆಪಿಸಿಸಿ ಆದೇಶದ ಮೇರೆಗೆ ತಾಲ್ಲೂಕು ಕಾಂಗ್ರೆೆಸ್ ಸಮಿತಿಯಿಂದ ಉಪವಾಸ ಸತ್ಯಾಾಗ್ರಹ, ಜನಸಂಪರ್ಕ ಸಭೆಗಳನ್ನು ಆಯೋಜಿಸಿ ಜಾಗೃತಿ ಮೂಡಿಸಲಾಗುವುದು. ಜ.16 ರಂದು ಉಪವಾಸ ಸತ್ಯಾಾಗ್ರಹ, ಜ.18 ರಿಂದ 29ರವರೆಗೆ ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆ ಮಾಡಿ ಜಾಗೃತಿ ಮೂಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆೆಸ್ ಮುಖಂಡರಾದ ವೆಂಕಟೇಶ ನಾಯಕ, ಶಿವಕುಮಾರ ಜವಳಿ, ಶರಣಯ್ಯಸ್ವಾಾಮಿ ಕೋಟೆ, ಹಬೀಬ್ ಖಾಜಿ, ಅಮರೇಶ ಗಿರಿಜಾಲಿ, ಶೈಬಾಜ್ ಉಸ್ತಾಾದ್, ಯುಸ್‌ೂ ಎತ್ಮಾಾರಿ, ಹನುಮೇಶ ಕರ್ನಿ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ