Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ.5: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಮಾಜಿ ಮುಖ್ಯಮಂತ್ರಿಗಳು ಉತ್ತರಿಸಿದರು.

ಈಗ ಸತ್ಯ ಹೊರಗೆ ಬಂತಲ್ಲ, ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಮಂಡ್ಯದಲ್ಲಿ, ತುಮಕೂರಿನಲ್ಲಿ ಏನೀನು ಮಾಡಿದರು ಅನ್ನುವುದು ಈಗ ಅವರ ಬಾಯಿಂದಲೇ ಸತ್ಯ ಹೊರಗೆ ಬಂದಿದೆ. ಈಗ ಅದೆಲ್ಲ ಮುಗಿದು ಹೋದ ಅಧ್ಯಾಯ. ನನ್ನ ಸರಕಾರ ತೆಗೆದವರರೇ ಅವರು ಎಂದು ಅವರು ಹೇಳಿದರು.

ಶಾಸಕರನ್ನೇ ನೋಡಿಲ್ಲ, ಭೇಟಿ ಮಾಡಿಲ್ಲ ಅಂತ ಹೇಳುತ್ತಾರೆ ಇವರು. 19,000 ಕೋಟಿ ಅನುದಾನವನ್ನು ಕಾಂಗ್ರೆಸ್ ಪಕ್ಷದ 78 ಜನ ಶಾಸಕರಿಗೆ ನೀಡಿದ್ದೇನೆ. ಶಾಸಕರನ್ನು ಭೇಟಿ ಮಾಡದೇ ಇಷ್ಟು ಅನುದಾನ ನೀಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದರು.

ಕೃಷ್ಣ ಕಚೇರಿಯಲ್ಲಿ ದಿನಕ್ಕೆ 5 ಸಾವಿರ ಜನ ಸೇರಿರುತ್ತಿದ್ದರು. ಸಾವಿರಾರು ಜನರನ್ನು ಭೇಟಿಯಾದ ಮೇಲೆ ಶಾಸಕರನ್ನು ಕೂಡ ಭೇಟಿಯಾಗಿ 10-15 ಅಭಿವೃದ್ಧಿ ಸಭೆಗಳನ್ನು ನಡೆಸುತ್ತಿದ್ದೆ. ನಾನೇನು ನಿದ್ದೆ ಮಾಡುತ್ತಿದೀನಾ? ತಪ್ಪು ಮಾಡಿದವರು ಅವರು, ಈಗ ನನ್ನ ಮೇಲೆ ಅಪಾದನೆ ಮಾಡ್ತಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು ಮಾಜಿ ಮುಖ್ಯಮಂತ್ರಿಗಳು.

ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಸಮಸ್ಯೆ ಚರ್ಚೆ ಮಾಡುವ ಅಂಶಗಳನ್ನು ಇಟ್ಟುಕೊಂಡಿಲ್ಲ. ಕೇವಲ ಭಾವನಾತ್ಮಕ ವಿಷಯಗಳನ್ನು ಕೆದಕಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಎಂದ ಅವರು; ಸ್ವಲ್ಪ ದಿನ ವಿಷಕನ್ಯೆ, ವಿಷಸರ್ಪ ಇತ್ತು, ಈಗ ಬಜರಂಗಿ ವಿಚಾರ ತಗೊಂಡು ಹೋಗ್ತಿದ್ದಾರೆ. ವೋಟಿಂಗ್ ದಿನ ಈ ವಿಷಯ ಮುಗಿಯುತ್ತದೆ. ಇವರು ಜನರನ್ನು ಯಾಮಾರಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ನಾನು ವಿಷಯಧಾರಿತವಾಗಿ ಚುನಾವಣೆ ಎದುರಿಸುತ್ತೇನೆ. ನನಗೆ ಆರ್ಥಿಕ ಶಕ್ತಿ ಇದ್ದಿದ್ದರೆ 130 ರಿಂದ 140 ಸೀಟು ಗೆಲ್ಲುತ್ತಿದ್ದೆ. ಹಣ ಇಲ್ಲದೆ ಹಿನ್ನೆಡೆ ಆಗಿದೆ. ಜನ ದುಡ್ಡಿಗೆ ಮರಳಾಗುವುದಿಲ್ಲ ಎಂಬ ವಿಶ್ವಾಸವಿದೆ. ಮುಖ್ಯಮಂತ್ರಿ ತವರು ಕ್ಷೇತ್ರ ಶಿಗ್ಗಾವಿ ಕ್ಷೇತ್ರದಲ್ಲೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನತಾದಳಕ್ಕೆ ಉತ್ತಮ ಸ್ಪಂದನೆ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್, ಬಿಜೆಪಿ ನಾಯಕರು ಜೆಡಿಎಸ್ ಅಭ್ಯರ್ಥಿಗಳನ್ನು ಸಂಪರ್ಕ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂಬ ಪ್ರಶ್ನೆಗೆ ಉತ್ತರ ಕೊಟ್ಟ ಮಾಜಿ ಮುಖ್ಯಮಂತ್ರಿ, ಅದರಲ್ಲಿ ಸಂಶಯವೇ ಇಲ್ಲ. ಸಮೀಕ್ಷೆಗಳು ಏನೇ ಇದ್ದರೂ ಅದು ಕೃತಕವಾದುದು. ಸಮೀಕ್ಷೆಗಳಲ್ಲಿ ಯಾವುದೇ ಸತ್ಯಾಂಶಗಳಿಲ್ಲ. ಎರಡೂ ಪಕ್ಷಗಳು ಯಾವುದೇ ಕಾರಣಕ್ಕೂ 100 ಸ್ಥಾನ ದಾಟೋಕೆ ಸಾಧ್ಯವಾಗಿಲ್ಲ ಎಂದರು ಅವರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ