Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಮಾರು 1000 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು

ಸುಮಾರು 1000 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು

ಹಿಂದಿಗಿಂತ ಉತ್ತಮ ಸಾಧನೆ ತೋರಿದ ಪರಿಶ್ರಮ ನೀಟ್ ಅಕಾಡೆಮಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.14: ದಕ್ಷಿಣ ಭಾರತದ ಸಾವಿರಾರು ವಿದ್ಯಾರ್ಥಿಗಳಿಗೆ ಕಬ್ಬಿಣ ಕಡಲೆಯಾಗಿರುವ ನೀಟ್ ಎನ್ನುವುದು ಪರಿಶ್ರಮ ವಿದ್ಯಾರ್ಥಿಗಳಿಗೆ ಸುಲಭದ ತುತ್ತಾಗಿದೆ. ಇದಕ್ಕೆ ಕಾರಣ ಪರಿಶ್ರಮ ಅಕಾಡೆಮಿಯಲ್ಲಿನ ಮಾರ್ಗದರ್ಶನ. ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿರುವ ಪರಿಶ್ರಮ ನೀಟ್ ಅಕಾಡೆಮಿಯ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರದ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆಯಲಿದ್ದಾರೆ ಎಂದು ಪರಿಶ್ರಮ ನೀಟ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ಪ್ರದೀಪ್ ಈಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ಪರಿಶ್ರಮ ನೀಟ್ ಅಕಾಡೆಮಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 1532 ವಿದ್ಯಾರ್ಥಿಗಳು ನಮ್ಮ ಅಕಾಡೆಮಿಯಲ್ಲಿ ಲಾಂಗ್ ಟರ್ಮ್ ಕೋರ್ಸ್‌ಗೆ ಸೇರ್ಪಡೆಯಾಗಿದ್ದರು. ಇವರಲ್ಲಿ 800ರಿಂದ 1000 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಈ ಸಾಧನೆ ಕೇವಲ ಪರಿಶ್ರಮ ಅಕಾಡೆಮಿಯದ್ದು ಎನ್ನುವುದಕ್ಕಿಂತ, ಕನ್ನಡಿಗರದ್ದು. ಕನ್ನಡದ ಹುಡುಗನೊಬ್ಬ ಸ್ಥಾಪಿಸಿದ ಈ ಸಂಸ್ಥೆ ಇಂದು ರಾಷ್ಟ್ರ ಮಟ್ಟದಲ್ಲಿ ಹೆಸರಾಗುವುದಕ್ಕೆ ಕಾರಣ ಕರ್ನಾಟಕದ ಜನ ನೀಡಿದ ಸಹಕಾರ ಎಂದು ಹೇಳಿದರು.

ಶ್ರದ್ಧೆಯಿಂದ 10 ತಿಂಗಳ ಕಾಲ ಪರಿಶ್ರಮ ಹಾಕಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಆದರೆ ಹೋಂ ಸಿಕ್ ಆಗಿ ಮನೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಇಲ್ಲಿಗೆ ಬರುವ ವಿದ್ಯಾರ್ಥಿಗಳು ಅದಾಗಲೇ ಎರಡು ವರ್ಷ ಶ್ರಮ ಪಟ್ಟು ಓದಿರುತ್ತಾರೆ. ಆದರೆ ಮೆಡಿಕಲ್ ಸೀಟು ಪಡೆಯುವುದಕ್ಕೆ ಸಾಧ್ಯವಾಗಿರುವುದಿಲ್ಲ. ಅಂತವರು ನಮ್ಮಲ್ಲಿ 10 ತಿಂಗಳ ಕಾಲ ಶ್ರದ್ಧೆಯಿಂದ ಓದುತ್ತಾರೆ. ಅವರನ್ನು ಸಂಪೂರ್ಣವಾಗಿ ಇದೇ ವಿಷಯದಲ್ಲಿ ತೊಡಗುವಂತೆ ಮಾಡುವುದರಿಂದಲೇ, ನಾವು ಉತ್ತಮ ಫಲಿತಾಂಶ ಸಿಗಲು ಸಾಧ್ಯ. ಈ ಬಾರಿ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಸಿಗುತ್ತದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.

ಪರಿಶ್ರಮ ನೀಟ್ ಅಕಾಡೆಮಿ ಕೇವಲ ಕೆಂಗೇರಿಯಲ್ಲಿ ಮಾತ್ರವಿದೆ. ರಾಜ್ಯದ ಯಾವ ಭಾಗದಲ್ಲಿಯೂ ಶಾಖೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಅಂಕಿ-ಅಂಶ

ವರ್ಷ ವಿದ್ಯಾರ್ಥಿಗಳು ತೇರ್ಗಡೆಯಾದವರು

2020 130 88

2021 240 220

2022 730 503

2023 1532 800-1000

ಈ ಬಾರಿ ವಿದ್ಯಾರ್ಥಿಗಳ ಸಾಧನೆ

ನಾರಾಯಣಸ್ವಾಮಿ ಟಿ.ಎ. 658

ಉಜ್ವಲ್ ಕೆ. 676

ಸಚಿನ್ ಕೆ.ಎಸ್. 675

ರೋಹಿತ್ ಆರ್.ಕೆ. 675

ಪ್ರಜ್ವಲ್ ಆರ್. 670

ತಯಾಬ್ 665

ಹೃಷಿಕೇಶ್ ನಾರಾಯಣ್ 655

 

ವಿನೋದ್ ಎಸ್. ಗಾಣಗಿ 655
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ