Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಜಾಪುರ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸಭೆ

ಸುದ್ದಿಮೂಲ ವಾರ್ತೆ

ಆನೇಕಲ್, ಸೆ. 25 :: ಸರ್ಜಾಪುರ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ಸರ್ವ ಸದಸ್ಯರ ಸಹಕಾರದಿಂದ ಸಿಬ್ಬಂದಿ ವರ್ಗದ ಶ್ರಮದಿಂದ ಸುಮಾರು 2 ಕೋಟಿ 54 ಲಕ್ಷ ರೂಪಾಯಿ ವಾರ್ಷಿಕ ನಿವ್ವಳ ಲಾಭಾಂಶವನ್ನು ಗಳಿಸಿದ್ದು, ಸಂಘದ ಪ್ರತಿ ಶೇರುದಾರರಿಗೆ ಶೇ.18 ರಷ್ಟು ಲಾಭಂಶವನ್ನು ನೀಡಲಾಗುತ್ತಿದೆ ಎಂದು ಸರ್ಜಾಪುರ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಆರ್ ಗೋಪಾಲರೆಡ್ಡಿ ರವರು ತಿಳಿಸಿದರು.

ಸರ್ಜಾಪುರ ಪಟ್ಟಣದ ದಿ ಪ್ಯಾಲೇಸ್ ಗಾರ್ಡನ್ ಸಭಾಂಗಣದಲ್ಲಿ ಸಂಘದ 47ನೇ ವಾರ್ಷಿಕ ಸರ್ವ ಸದಸ್ಯರ ಮಹಾ ಸಬೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಸರ್ಜಾಪುರ, ದೊಮ್ಮಸಂದ್ರ, ಮುತ್ತನಲ್ಲೂರು, ಮುಗಳೂರು ಗ್ರಾಮಗಳಲ್ಲಿ ಸಂಘದ ಶಾಖೆಯಿದ್ದು, ನೂತನವಾಗಿ ನೆರಿಗಾ ಗ್ರಾಮದಲ್ಲಿ ಇನ್ನೊಂದು ಶಾಖೆಯನ್ನು ಆರಂಭ ಮಾಡಲು ತಯಾರಿ ನಡೆಸಲಾಗುತ್ತಿದೆ. ಮುಂದಿನ ತಿಂಗಳಿನಲ್ಲಿ ಬಡ ಜನರಿಗೆ ಅನುಕೂಲವಾಗಬೇಕು ಎಂಬ ದೃಷ್ಠಿಕೋನದಿಂದ ಜನೌಷದಿ ಕೇಂದ್ರ ಸ್ಥಾಪನೆ ಮಾಡುತ್ತೇವೆ ಎಂದರು.

ಸದಸ್ಯರ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತಸಹ ಮಾಡಬೇಕು ಎಂಬ ದೃಷ್ಟಿಕೋನದಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಸುಮಾರು 150 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಅಬಿನಂಧಿಸಲಾಯಿತು.

ಕಾರ್ಯಕ್ರಮದಲ್ಲಿ ಸರ್ಜಾಪುರ ರೇಷ್ಮೇ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ ನಂಜಪ್ಪ, ಉಪಾಧ್ಯಕ್ಷರಾದ ವೆಂಕಟರೆಡ್ಡಿ, ನಿದೇಶಕರಾದ ಮುತ್ತಾನಲ್ಲೂರು ವಿಶ್ವನಾಥ್ ರೆಡ್ಡಿ, ಎಸ್.ವಿ.ಟಿ. ಮಂಜುನಾಥ್ ರೆಡ್ಡಿ, ನಂದಕುಮಾರ್, ರಾಮಸಾಗರ ಮಂಜುನಾಥ್, ಸಂಪಂಗಪ್ಪ, ಅಂಬರೀಶ್, ವೆಂಕಟೇಶ್, ಕಲಾ, ವಿನೋದ, ಕೆ.ವಿ.ಕೇಶವ, ಸಿಬ್ಬಂದಿ ಕೃಷ್ಣ ಮೂರ್ತಿ ಮತ್ತು ಸಂಘದ ಸದಸ್ಯರು ಹಾಗೂ ಸಿಬ್ಬದಿ ವರ್ಗದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ