Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

60 ಉದ್ಯಮಿಗಳೊಂದಿಗೆ ಸಭೆ ನಡೆಸಿದ ಸಚಿವ ಎಂ.ಬಿ. ಪಾಟೀಲ

ಸುದ್ದಿಮೂಲ ವಾರ್ತೆ

ಆಸ್ಟಿನ್, ಸೆ.30: `ಅಕ್ಕ’ (ಅಮೆರಿಕ ಕನ್ನಡ ಕೂಟಗಳ ಆಗರ) ಸಂಘಟನೆ ಮತ್ತು ಯುಎಸ್- ಇಂಡಿಯಾ ಚೇಂಬರ್ ಆಫ್ ಕಾಮರ್ಸ್ ಶುಕ್ರವಾರದಂದು ಸಂಯುಕ್ತವಾಗಿ ಏರ್ಪಡಿಸಿದ್ದ ಉದ್ಯಮಿಗಳ ದುಂಡು ಮೇಜಿನ ಸಭೆಯಲ್ಲಿ ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭಾಗವಹಿಸಿದ್ದರು.

60ಕ್ಕೂ ಹೆಚ್ಚು ಉದ್ಯಮಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಹೆಚ್ಚಿನವರು ಕರ್ನಾಟಕದಲ್ಲಿ ತಮ್ಮ ವಹಿವಾಟು ಮತ್ತು ನೆಲೆಯನ್ನು ವಿಸ್ತರಿಸಿಕೊಳ್ಳುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಟೈ ಆಸ್ಟಿನ್ ಮತ್ತು ಆಸ್ಟಿನ್ ಚೇಂಬರ್ ಆಫ್ ಕಾಮರ್ಸ್ ಸಂಸ್ಥೆಗಳು ಕೂಡ ಈ ಸಭೆಯಲ್ಲಿ ಸಕ್ರಿಯವಾಗಿದ್ದವು.

ಈ ಸಭೆಯಲ್ಲಿ ಪಾಲ್ಗೊಂಡಿದ್ದ ಹೆಚ್ಚಿನ ಕಂಪನಿಗಳು ಈಗಾಗಲೇ ಕರ್ನಾಟಕದಲ್ಲಿ ತಮ್ಮ ವಹಿವಾಟು ನಡೆಸುತ್ತಿದ್ದು, ಕಚೇರಿ ಹೊಂದಿವೆ. ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಇರುವ ಉತ್ತೇಜನವನ್ನು ಕಂಡು, ಅವು ತಮ್ಮ ವ್ಯಾಪ್ತಿಯನ್ನು ಮತ್ತಷ್ಟು ಹಿಗ್ಗಿಸಿಕೊಳ್ಳಲು ಉತ್ಸುಕವಾಗಿವೆ. ಜೊತೆಗೆ, ಇತ್ತೀಚಿನ ವರ್ಷಗಳಲ್ಲಿ ಪ್ರವರ್ಧಮಾನಕ್ಕೆ ಬಂದಿರುವ ನವೋದ್ಯಮಗಳ ಕಾರ್ಯಪರಿಸರಕ್ಕೆ ಮತ್ತಷ್ಟು ಇಂಬು ಕೊಡಬೇಕಾದ ಅಗತ್ಯವಿದೆ. ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು, ಉದ್ಯಮಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಅಮೆರಿಕದ ಕಂಪನಿಗಳು ಭಾರತ ಮತ್ತು ಕರ್ನಾಟಕದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ತ್ವದ ಪಾತ್ರ ವಹಿಸಿಕೊಂಡು ಬಂದಿವೆ. ಇತ್ತೀಚಿನ ದಶಕಗಳಲ್ಲಿ ಎರಡೂ ದೇಶಗಳು ನಿಕಟವಾಗಿದ್ದು, ಪರಸ್ಪರ ಮಾರುಕಟ್ಟೆಯನ್ನು ಆವಿಷ್ಕರಿಸುತ್ತಲೇ ಇವೆ. ಇದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬೇಕೆನ್ನುವುದು ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯಾಗಿದೆ. ಈ ನಿಟ್ಟಿನಲ್ಲಿ ನಾವು ರೂಪಿಸುತ್ತಿರುವ ವಿನೂತನ ಕೈಗಾರಿಕಾ ಉಪಕ್ರಮಗಳನ್ನು ಮನದಟ್ಟು ಮಾಡಿಕೊಡಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ಲೋಬಲ್ ಫೌಂಡ್ರೀಸ್ ಜತೆ ಮಾತುಕತೆ:

ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ಗ್ಲೋಬಲ್ ಫೌಂಡ್ರೀಸ್ ಕಂಪನಿಯು 2025ರ ವೇಳೆಗೆ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಶೇಕಡ 25ರಷ್ಟು ಹೆಚ್ಚಿಸಲು ತೀರ್ಮಾನಿಸಿದೆ. ಇದಕ್ಕೆ ಪೂರಕವಾಗಿ ಸರಕಾರವು ಸುಸಜ್ಜಿತ ಮಾನವ ಸಂಪನ್ಮೂಲವನ್ನು ಒದಗಿಸಲು ಬದ್ಧವಾಗಿದೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.

ಕಂಪನಿಯ ಉನ್ನತ ಪ್ರತಿನಿಧಿಗಳೊಂದಿಗೆ ಶುಕ್ರವಾರ ನಿರ್ಣಾಯಕ ಮಾತುಕತೆ ನಡೆಸಲಾಗಿದೆ. 30 ಬಿಲಿಯನ್ ಡಾಲರ್ ಮೌಲ್ಯದ ಗ್ಲೋಬಲ್ ಫೌಂಡ್ರೀಸ್ ಕಂಪನಿಯು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಿದೆ. ರಾಜ್ಯದಲ್ಲಿ ಇದು ತನ್ನ ನೆಲೆಯನ್ನು ವಿಸ್ತರಿಸಿಕೊಳ್ಳಲು ಬಯಸಿದ್ದು, ಇದಕ್ಕೆ ಸರಕಾರದ ವತಿಯಿಂದ ಅಗತ್ಯ ನೆರವು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ರಕ್ಷಣೆ ಮತ್ತು ವೈಮಾಂತರಿಕ್ಷ ವಲಯಗಳಲ್ಲಿ ಛಾಪು ಮೂಡಿಸಲು ಕಂಪನಿಯು ಒಲವು ಹೊಂದಿದೆ. ಇದಕ್ಕೆ ಅಗತ್ಯವಾದ ವ್ಯಾಪಾರ ಕಾರ್ಯತಂತ್ರವನ್ನು ಅದು ಅಭಿವೃದ್ಧಿ ಪಡಿಸಲಿದೆ. ಈ ಮೂಲಕ ರಾಜ್ಯದಲ್ಲಿ ಹೂಡಿಕೆ ಹೆಚ್ಚಳ ಮತ್ತು ಉದ್ಯೋಗಸೃಷ್ಟಿ ಎರಡೂ ಸಾಧ್ಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಈ ಮಾತುಕತೆಯಲ್ಲಿ ಕಂಪನಿಯ ಪರವಾಗಿ ಸಿಐಒ ಮೈಕ್ ಕ್ಯಾಡಿಗಾನ್ ಮತ್ತು ಭಾರತದ ವ್ಯವಹಾರಗಳ ಮುಖ್ಯಸ್ಥ ಜಿತೇಂದ್ರ ಛಡ್ಡಾ ಪಾಲ್ಗೊಂಡಿದ್ದರು. ರಾಜ್ಯ ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ