Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಕ್ಕೆ ಬರಲು ಟೆಸ್ಲಾ ಕಂಪನಿಗೆ ಸಚಿವ ಎಂ.ಬಿ. ಪಾಟೀಲ ಆಹ್ವಾನ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.23: ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೋರಿದ್ದಾರೆ.

ಟೆಸ್ಲಾ ಕಂಪನಿಯು ತನ್ನ ಉದ್ಯಮವನ್ನು ಭಾರತದಲ್ಲಿ ವಿಸ್ತರಿಸಲು ಇಷ್ಟಪಡುವುದಾದರೆ ಕರ್ನಾಟಕ ರಾಜ್ಯವು ಅದಕ್ಕೆ ಪ್ರಶಸ್ತ ತಾಣವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಸೌರಫಲಕಗಳು ಮತ್ತಿತರ ಪರ್ಯಾಯ ಇಂಧನ ಉತ್ಪನ್ನಗಳನ್ನು ತಯಾರಿಸುತ್ತದೆ. ಅಲ್ಲದೇ, ಸ್ಪೇಸ್- ಎಕ್ಸ್ ಕಂಪನಿ ಮೂಲಕ ಉಪಗ್ರಹ ಅಂತರ್ಜಾಲ ಸೇವೆ (ಸ್ಟಾರ್ ಲಿಂಕ್) ಒದಗಿಸುತ್ತಿದೆ. ಈ ಕಂಪನಿಗಳನ್ನು ಮುನ್ನಡೆಸುತ್ತಿರುವ ಉದ್ಯಮಿ ಎಲಾನ್ ಮಸ್ಕ್ ಅವರು ಕರ್ನಾಟಕದಲ್ಲಿ ಯಾವುದೇ ಉದ್ಯಮ ಸ್ಥಾಪಿಸುವುದಾದರೆ ಸಹಕಾರ ಕೊಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಪಾಟೀಲ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯವು ತಂತ್ರಜ್ಞಾನ ಮತ್ತು ತಯಾರಿಕಾ ಕ್ಷೇತ್ರದಲ್ಲಿ 5.0 ಪ್ರಮಾಣೀಕೃತ ಮಟ್ಟ ಅಳವಡಿಸಿಕೊಂಡು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ಹೊಂದಿದೆ. ಹೀಗಾಗಿ, ಟೆಸ್ಲಾ ಘಟಕ ತೆರೆಯಲು ಇದು ಸೂಕ್ತ ನೆಲೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕಾ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿ ಅವರು ಎಲಾನ್‌ ಮಸ್ಕ್ ಅವರನ್ನು ಭೇಟಿ‌ ಮಾಡಿ ದೇಶದಲ್ಲಿ ಬಂಡವಾಳ ಹೂಡುವಂತೆ ಕೋರಿದ್ದರು. ಆ ಹಿನ್ನೆಲೆಯಲ್ಲಿ ಪಾಟೀಲ ಅವರು ಟ್ವೀಟ್ ಮಾಡಿ ಕರ್ನಾಟಕಕ್ಕೇ ಬನ್ನಿ ಎನ್ನುವ ಮನವಿ‌ ಮಾಡಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ