Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದುರ್ಗಾ ಪೂಜೆಗೆ ಚಾಲನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಸುದ್ದಿಮೂಲ ವಾರ್ತೆ

ಆನೇಕಲ್,ಅ.27:ಸರ್ಜಾಪುರದ ಸುಕೃತಿ ಕಲ್ಚರಲ್ ಅಸೋಸಿಯೇಶನ್ ವತಿಯಿಂದ 8 ನೇ ವರ್ಷದ ದುರ್ಗಾ ಪೂಜಾ ಕಾರ್ಯಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

ಸರ್ಜಾಪುರ ಗ್ರಾಮದಲ್ಲಿರುವ ರಾಜ್ ಗೋಪಾಲ್ ಕಲ್ಯಾಣ ಮಂಟಪದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದುರ್ಗಾ ಪೂಜೆಯು ಉತ್ತರ ಭಾರತ ಭಾಗದಲ್ಲಿ ಅತೀ ಹೆಚ್ಚಾಗಿ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಮತ್ತು ಬೆಂಗಳೂರು ಹೊರವಲಯ ಪ್ರದೇಶದಲ್ಲಿ ಉದ್ಯೋಗ ಮತ್ತು ಶಿಕ್ಷಣವನ್ನು ಅರಿಸಿ ಬಂದು ಇಲ್ಲೇ ನೆಲೆಸಿರುವವರು ಅವರ ಅಚಾರ-ವಿಚಾರ, ಸಂಸ್ಕೃತಿಯನ್ನು ಸಹ ಮುಂದುವರೆಸಿಕೊಂಡು ಆಚಾರಿಸುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಸ್ಥಳೀಯ ಜನರನ್ನು ಒಟ್ಟುಗೊಡಿಸಿಕೊಂಡು ಇಂತಹ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಿದಲ್ಲಿ ಇಂತಹ ಕಾರ್ಯಗಳಿಗೆ ಇನ್ನಷ್ಟು ಮೆರಗು ಸಿಗಲಿದೆ ಎಂದರು.

ಇದೇ ವೇಳೆ ಸರ್ಜಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ದುರ್ಗಾ ಪೂಜಾ ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಅಸೋಸಿಯೇಶನ್ ಅಧ್ಯಕ್ಷ ಸುಮಾಂತ್ ಬಾಸು, ಕಾರ್ಯದರ್ಶಿ ಅಭಿಷೇಕ್, ಸರ್ಜಾಪುರ ಸಿಟಿಜನ್ ಪೋರಂ ಅಧ್ಯಕ್ಷ ಎಸ್.ವಿ ಭರತ್ ಗೌಡ, ಸರ್ಜಾಪುರ ಗ್ರಾ. ಪಂ ಸದಸ್ಯ ಕಿಟಿಕಿ ಶ್ರೀನಿವಾಸ್, ಪಧಾಧಿಕಾರಿಗಳಾದ ರಾಜೀವ್, ರಾಜೇಶ್, ಅಯ್ಯನ್, ಪ್ರಸೂನ್, ಜ್ಯೋತಾ, ಸಮೀರ್, ಪೂಜಾ ಚಂದ್ರ ಮತ್ತಿತರರು ಹಾಜರಿದ್ದರು

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ