Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಬೈ ಎಸ್‌ಆರ್‌ಎ ವಸತಿ ಸಂಕೀರ್ಣ ವೀಕ್ಷಿಸಿದ ಸಚಿವ ಜಮೀರ್

ಮುಂಬೈ, ಆ.6: ಮುಂಬೈ ಕೊಳೆಗೇರಿ ಪುನರ್ ವಸತಿ ಪ್ರಾಧಿಕಾರದ ವತಿಯಿಂದ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗಿರುವ ವಸತಿ ಸಂಕೀರ್ಣವನ್ನು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವೀಕ್ಷಿಸಿದರು.

ಮುಂಬೈ ಅಂಧೇರಿ ಈಸ್ಟ್ ನಲ್ಲಿರುವ ಸಾಯಿಬಾಬಾ ನಗರದ ಟೀಚರ್ಸ್ ಕಾಲೋನಿಯಲ್ಲಿ ನಿರ್ಮಾಣ ಮಾಡಲಾಗಿರುವ ವಸತಿ ಸಂಕೀರ್ಣ ವೀಕ್ಷಿಸಿ ಮಾಹಿತಿ ಪಡೆದರು.

ಮುಂಬೈ ಕೊಳೆಗೇರಿ ಪುನರ್ ವಸತಿ ಪ್ರಾಧಿಕಾರದ ವತಿಯಿಂದ ಕೊಳೆಗೇರಿ ಪ್ರದೇಶ ವಾಸಿಗಳ ಸಹಕಾರ ಸಂಘ ಸ್ಥಾಪಿಸಿ ಗುತ್ತಿಗೆದಾರರ ಜತೆ ಒಪ್ಪಂದ ಮಾಡಿಕೊಂಡು ವಸತಿ ಸಂಕೀರ್ಣ ನಿರ್ಮಾಣ ಮಾಡಲಾಗುತ್ತಿದೆ.

ಒಟ್ಟಾರೆ ಪ್ರದೇಶದ ಶೇ. 50 ರಷ್ಟು ಜಾಗ ಗುತ್ತಿಗೆ ಸಂಸ್ಥೆಗೆ ನೀಡಲಾಗುತ್ತದೆ. ಒಂದೊಮ್ಮೆ ಯೋಜನೆಯಡಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲದ ವ್ಯವಸ್ಥೆ ಬೇಕಾದರೂ ಗುತ್ತಿಗೆ ಸಂಸ್ಥೆಯೇ ಬ್ಯಾಂಕ್ ಮುಖ್ಯಸ್ಥರ ಜತೆ ಸಂಪರ್ಕ ಸಾಧಿಸಿ ವ್ಯವಸ್ಥೆ ಮಾಡಿಸುತ್ತದೆ.

ಅಷ್ಟೇ ಅಲ್ಲದೆ ಕೊಳೆಗೇರಿ ಪ್ರದೇಶದಲ್ಲಿ ವಸತಿ ಸಂಕೀರ್ಣ ನಿರ್ಮಾಣ ಮಾಡುವವರೆಗೆ ಅಲ್ಲಿನ ನಿವಾಸಿಗ ಬೇರೆಡೆಗೆ ಶಿಫ್ಟ್ ಮಾಡುವುದು ಅಥವಾ ಬೇರೆ ಕಡೆ ವಾಸಿಸಲು ಮನೆ ಬಾಡಿಗೆ ಸಹ ಪಾವತಿಸುತ್ತದೆ.

ಇದೇ ಮಾದರಿ ಕರ್ನಾಟಕದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ ಯೋಜನೆಗಳಲ್ಲಿ ಜಾರಿ ಮಾಡಬಹುದೇ ಎಂಬ ಬಗ್ಗೆ ಅಧ್ಯಯನ ನಡೆಸುವಂತೆಯೂ, ಸಾಧಕ ಬಾಧಕ ಕುರಿತು ಪರಿಶೀಲನೆ ಮಾಡುವಂತೆ ಸಚಿವರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

ಮುಂಬೈ ಕೊಳೆಗೇರಿ ಪುನರ್ ವಸತಿ ಪ್ರಾಧಿಕಾರದ ಅಧಿಕಾರಿಗಳನ್ನು ಕರ್ನಾಟಕಕ್ಕೆ ಭೇಟಿ ನೀಡುವಂತೆ ಸಚಿವರು ಆಹ್ವಾನ ನೀಡಿದರು.

ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಮಾಜಿ ಸಂಸದ ಹರ್ಬನ್ ಸಿಂಗ್, ಪ್ರಾಧಿಕಾರದ ಅಧಿಕಾರಿಗಳಾದ ಆಶೀಶ್ ಚೌದರಿ , ಬಾಲಾಜಿ ಮುಂಡೆ, ಅಭಯ್ ರಾಮ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಚಿವರು ನವಿ ಮುಂಬೈ ನ ತಲೋಜ ಪ್ರದೇಶದಲ್ಲಿ ಶಿರ್ಕೆ ಸಂಸ್ಥೆ ಯ ಸಿಮೆಂಟ್ ಪ್ರೀಕಾಸ್ಟ್ ಸೆಂಟರ್ ಹಾಗೂ ವಸತಿ ಸಂಕೀರ್ಣ ವೀಕ್ಷಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ