Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರು ಅಧಿಕಾರ ತ್ಯಾಗಕ್ಕೆ ಸಜ್ಜಾಗಬೇಕು

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.14: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಂಪುಟದಲ್ಲಿರುವ ಕೆಲ ಸಚಿವರು ಮುಂದಿನ ದಿನಗಳಲ್ಲಿ ಅಧಿಕಾರ ತ್ಯಾಗಕ್ಕೆ ಸಜ್ಜಾಗುವಂತೆ ಸಿಗ್ನಲ್ ನೀಡಲಾಗಿದೆ.

ಈ ಕುರಿತು ಬೆಂಗಳೂರಿನಲ್ಲಿ ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಇದನ್ನು ಸೂಚ್ಯವಾಗಿ ಹೇಳಿದ್ದು ಈ ಬೆಳವಣಿಗೆ ರಾಜಕೀಯ ವಲಯಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಮಾತನಾಡಿ, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಹಲವರು ದುಡಿದಿದ್ದಾರೆ. ಹೀಗಾಗಿ ನನ್ನನ್ನು ಸೇರಿದಂತೆ ಈಗ ಸಚಿವರಾಗಿರುವವರು ಎರಡೂವರೆ ವರ್ಷಗಳ ನಂತರ ಅಧಿಕಾರ ತ್ಯಾಗಕ್ಕೆ ಸಜ್ಜಾಗಬೇಕು ಎಂಬ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ತಳಹಂತದಿಂದ ಹಿಡಿದು ಮೇಲು ಹಂತದವರೆಗೆ ಅಧಿಕಾರ ಹಂಚಿಕೆಯ ಕೆಲಸವಾಗಬೇಕು, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸುವ ಕೆಲಸವಾಗಬೇಕು ಎಂದು ವಿವರಿಸಿದರು.

ಇವತ್ತು ಮಂತ್ರಿಗಳಾಗಿರುವವರು ಅಧಿಕಾರ ತ್ಯಾಗಕ್ಕೆ ಸಜ್ಜಾಗಬೇಕು. ಯಾಕೆಂದರೆ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾದ ಉಳಿದವರಿಗೂ ಮಂತ್ರಿಗಿರಿ ಸಿಗಬೇಕು ಎಂದು ಮುನಿಯಪ್ಪ ಅವರು ಹೇಳಿದಾಗ ಸಭೆಯಲ್ಲಿದ್ದವರು ಚಪ್ಪಾಳೆ ತಟ್ಟಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅವರು ಮುನಿಯಪ್ಪ ಅವರ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ಮಾತನಾಡಿ, ಮುಂದಿನ ದಿನಗಳಲ್ಲಿ ಹಲವು ಮಂತ್ರಿಗಳನ್ನು ಬದಲಿಸಬೇಕಾಗುತ್ತದೆ ಎಂದರು.

ಅಧಿಕಾರ ಹಂಚಿಕೆ ಎಂಬುದು ಎಲ್ಲ ಹಂತಗಳಲ್ಲಿ ನಡೆಯಬೇಕು ಎಂದ ಅವರು, ಇದಕ್ಕೆ ಪೂರಕವಾಗಿ ಅಧಿಕಾರ ತ್ಯಾಗಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ನುಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವಂತೆ ಅವರು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.

ನ್ಯಾಯಾಲಯದ ಆದೇಶ ಬಂದ ನಂತರ ಯಾವುದೇ ಕ್ಷಣದಲ್ಲಿ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವುದು ಅನಿವಾರ್ಯ ಎಂದು ನುಡಿದರು.

ನಾವು 2028 ರ ವಿಧಾನಸಭಾ ಚುನಾವಣೆಯಲ್ಲೂ ಗೆದ್ದು ಅಧಿಕಾರ ಹಿಡಿಯಬೇಕು. ಈ ಗುರಿಯೊಂದಿಗೆ ನಾವು ಪ್ರತಿ ಚುನಾವಣೆಗಳನ್ನು ಎದುರಿಸಬೇಕು ಎಂದು ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ