Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷೇತ್ರದಲ್ಲಿ ಶ್ರಮಪಟ್ಟು ಕೆಲಸ ಮಾಡಿದ್ದೇನೆ: ಶಾಸಕಿ ರೂಪಕಲಾ

ಸುದ್ದಿಮೂಲ ವಾರ್ತೆ

ಕೆಜೆಎಫ್, ಮೇ 5: ಕೇಂದ್ರ ಹಾಗೂ ರಾಜ್ಯದಲ್ಲಿ ವಿರೋಧ ಪಕ್ಷ ಆಡಳಿತದಲ್ಲಿದ್ದರು ಸಹ ಕೆಜಿಎಫ್ ಜನತೆಯ ಸರ್ವಾಂಗೀಣ ಅಭಿವೃದ್ದಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ಕೆಲಸ ಮಾಡಿದ್ದೇನೆ ಎಂದು ಶಾಸಕಿ ರೂಪಕಲಾ ವ್ಯಕ್ತಪಡಿಸಿದರು.

ಪಟ್ಟಣದ ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಬಡಮಾಕನಹಳ್ಳಿ, ಕಂಗಾನಲ್ಲೂರು ಗ್ರಾಮಗಳಿಗೆ

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಶ್ರೀ ಭಕ್ತಕನಕದಾಸರು ಮತ್ತು ಡಾ,ಬಿಆರ್ ಅಂಬೇಡ್ಕರ್ ಅವರ ಪುಥ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಬಿಜೆಪಿ ಪಕ್ಷ ನಿರುದ್ಯೋಗಿಗಳಿಗೆ ಉದ್ಯೋಗವನ್ನು ನೀಡುತ್ತೇವೆಂದು ಸುಳ್ಳು ಪ್ರಚಾರ ಮಾಡಿ ಯಾವುದೇ ರೀತಿಯ ಉದ್ಯೋಗವಕಾಶ ಕಲ್ಪಿಸಲಿಲ್ಲ. ಬಡವರ ಖಾತೆಯಲ್ಲಿರುವ ಹಣವನ್ನು ಜಪ್ತಿ ಮಾಡಿ ಕಾರ್ಪೋರೇಟ್ ಕಂಪನಿಗಳಿಗೆ ಬ್ಯಾಂಕ್ ಮುಖಾಂತರ ಸಾಲಗಳನ್ನು ನೀಡುತ್ತಿದ್ದಾರೆ ಎಂದರು.

ಕ್ಷೇತ್ರದ ಜನರ ಸುಗಮ ಜೀವನಕ್ಕಾಗಿ ಸತತವಾಗಿ 5 ವರ್ಷಗಳಿಂದ ಗ್ರಾಮೀಣ ಹಾಗೂ ನಗರ ಭಾಗದಲ್ಲಿ

ಉಚಿತ ಹೈಮಾಸ್ಕ್ ದೀಪ, ಶುದ್ದನೀರಿನ ಘಟಕ, ಸುಸಜ್ಜಿತ ಆಸ್ಪತ್ರೆ, ಸಿಸಿ ರಸ್ತೆಗಳು, ಕೆಜಿಎಫ್ ಮತ್ತು ವಿಕೋಟೆ ಮುಖ್ಯರಸ್ತೆ, ಆಂಧ್ರ ಗಡಿ ಭಾಗದಲ್ಲಿ ರೈತರಿಗಾಗಿ ಎಪಿಎಂಸಿ ಮಾರುಕಟ್ಟೆಯನ್ನು ನಿರ್ಮಿಸಲು ಜಾಗ ಮೀಸಲು, ಟಿ,ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ದೇವರಾಜ ಅರಸ್ ಯೋಜನೆಯಡಿಯಲ್ಲಿ 30 ಜನಕ್ಕೆ ಉಚಿತ ಲೋನ್, ಮತ್ತು ಡಿಸಿಸಿ ಬ್ಯಾಂಕ್ ಮೂಲಕ ಮಹಿಳೆಯರಿಗೆ ಹಾಗೂ ರೈತರಿಗೆ ಶೂನ್ಯ ಬಡ್ಡಿದರಲ್ಲಿ ಉಚಿತ ಸಾಲ ವಿತರಣೆ, ಇನ್ನೂ ಮುಂತಾದ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಅದ್ಯಕ್ಷ ಪವಿತ್ರಗೋಪಾಲ್, ಉಪಾದ್ಯಕ್ಷ ಶ್ರೀರಾಮಪ್ಪ, ಸದಸ್ಯರಾದ ಮಂಜುನಾಥ, ಚೌಡಪ್ಪ, ಮುನಿವೆಂಕಟಪ್ಪ, ಪದ್ಮಕ್ಕ, ಮುಖಂಡರಾದ ವೆಂಕಟರಾಮ್, ವೆಂಕಟಾಚಲಪತಿ, ನಲ್ಲುರು

ಶಂಕರ್, ನಾಗರಾಜ್, ಕೃಷ್ಣಪ್ಪ ಸೇರಿದಂತೆ 200 ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ