Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಸಮಾಜದ ನೂತನ ಅಧ್ಯಕ್ಷರಿಂದ ಶಾಸಕ ಶರಣಗೌಡ ಕಂದಕೂರಿಗೆ ಸನ್ಮಾನ

 ಸುದ್ದಿಮೂಲ ವಾರ್ತೆ ಗುರುಮಠಕಲ, ನ.30:
ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆೆಯಾದ ಶಿವಾನಂದ ಬೂದಿ ಅವರು ಪದಾಧಿಕಾರಿಗಳು ಹಾಗೂ ಸಮಾಜದ ಗಣ್ಯರೊಂದಿಗೆ ಶನಿವಾರ ಶಾಸಕ ಶರಣಗೌಡ ಕಂದಕೂರು ಅವರ ನಿವಾಸಕ್ಕೆೆ ಭೇಟಿ ನೀಡಿ ಗೌರವಪೂರ್ಣವಾಗಿ ಸನ್ಮಾಾನಿಸಿದರು.
ಈ ವೇಳೆ ಮಾತನಾಡಿದ ಅವರು ಕಂದಕೂರು ಕುಟುಂಬವು ಹಲವು ದಶಕಗಳಿಂದ ಗುರುಮಠಕಲ್ ವೀರಶೈವ ಸಮಾಜದ ಪರವಾಗಿ ಪ್ರತ್ಯಕ್ಷ-ಪರೋಕ್ಷವಾಗಿ ಅನನ್ಯ ಬೆಂಬಲ ನೀಡುತ್ತಿಿದೆ. ವೀರಭದ್ರೇೇಶ್ವರ ದೇವಸ್ಥಾಾನದಲ್ಲಿ ನವಮೂರ್ತಿಗಳ ಪ್ರತಿಷ್ಠಾಾಪನೆಗೆ ನೀಡಿದ ಸಂಪೂರ್ಣ ಕೊಡುಗೆ, ಕೊಡ್ಲಿಿಮಠದ ತಡೆಗೋಡೆ ನಿರ್ಮಾಣಕ್ಕೆೆ ಒದಗಿಸಿದ ಅನುದಾನ-ಇವು ಸಮಾಜದ ಅಭಿವೃದ್ಧಿಿಯತ್ತ ನೀಡಿದ ಅಮೂಲ್ಯ ಸಹಾಯಗಳು, ಎಂದು ಸ್ಮರಿಸಿದರು. ಸಮಾಜದ ಪ್ರಗತಿ, ಏಳ್ಗೆೆ ಮತ್ತು ಸಂಘಟನೆಯ ಬಲವರ್ಧನೆಗಾಗಿ ಶಾಸಕರ ನಿರಂತರ ಸಹಕಾರ ಅಗತ್ಯವಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಸಮಾಜದ ಪ್ರತಿನಿಧಿಗಳು ಮಾತನಾಡಿ, ನಿರ್ಮಾಣ ಹಂತದಲ್ಲಿರುವ ಸಮಾಜದ ಸಮುದಾಯ ಭವನದ ಪ್ರಗತಿಯನ್ನು ಶಾಸಕರಿಗೆ ವಿವರಿಸಿದರು. ಭವನದ ಮುಂದಿನ ಹಂತಗಳಿಗೆ ಅನುದಾನ ಮತ್ತು ಸಹಕಾರ ನೀಡುವಂತೆ ಮನವಿ ಪತ್ರವನ್ನು ಶಾಸಕರಿಗೆ ಸಲ್ಲಿಸಿದರು.
ಈ ಕುರಿತು ಪ್ರತಿಕ್ರಿಿಯಿಸಿದ ಶಾಸಕ ಶರಣಗೌಡ ಕಂದಕೂರು ಅವರು, ವೀರಶೈವ ಸಮಾಜದ ಅಭಿವೃದ್ಧಿಿ ಮತ್ತು ಕಲ್ಯಾಾಣಕ್ಕಾಾಗಿ ಸಾಧ್ಯವಾದ ಎಲ್ಲ ರೀತಿಯ ಸಹಕಾರ ನೀಡುವುದಕ್ಕೆೆ ನಾನು ಸದಾ ಬದ್ಧ. ಸಮಾಜದ ಬೇಡಿಕೆಗಳನ್ನು ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ. ಸಮುದಾಯ ಭವನ ನಿರ್ಮಾಣದ ಅಗತ್ಯ ಯೋಜನೆಗಳಿಗೆ ಸರ್ಕಾರದಿಂದ ಸಹಾಯವನ್ನು ಒದಗಿಸಲು ಪ್ರಯತ್ನಿಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಈ ವೇಳೆ ವೀರಶೈವ ಸಮಾಜದ ಪದಾಧಿಕಾರಿಗಳು, ವಿವಿಧ ಘಟಕಗಳ ಮುಖಂಡರು, ಯುವಕರು ಹಾಗೂ ಅಕ್ಕನ ಬಳಗದ ಮಹಿಳೆಯರು ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ