Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಟಿಡಿಗೆ ಶಾಸಕ ಎಸ್. ಆರ್. ವಿಶ್ವನಾಥ್ ಮರು ನೇಮಕ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.26: ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಂನ ಆಡಳಿತ ಮಂಡಳಿ ಸದಸ್ಯರನ್ನಾಗಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಎರಡನೇ ಅವಧಿಗೆ ನೇಮಕ ಮಾಡಲಾಗಿದೆ. ಈ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಕಚೇರಿ ಆದೇಶ ಹೊರಡಿಸಿದೆ.

ಮತ್ತೊಂದು ಅವಧಿಗೆ ಆಡಳಿತ ಮಂಡಳಿ ಸದಸ್ಯರನ್ನಾಗಿ ನೇಮಕವಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಎಸ್.ಆರ್.ವಿಶ್ವನಾಥ್ ಅವರು, ಈ ನೇಮಕಕ್ಕೆ ಕಾರಣರಾದ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಹಿರಿಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ತಿರುಪತಿ ಶ್ರೀ ವೆಂಕಟೇಶ್ವರ ದೇವರ ಸೇವೆ ಮಾಡಲು ನನಗೆ ಇಂತಹ ಅವಕಾಶ ಸಿಕ್ಕಿರುವುದು ಅತೀವ ಸಂತಸ ತಂದಿದೆ. ಇದಕ್ಕೆ ನನ್ನ ಮತ ಕ್ಷೇತ್ರದ ಜನತೆ, ಅಪಾರ ಸಂಖ್ಯೆಯ ಭಕ್ತರ ಆಶೀರ್ವಾದ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಮೊದಲ ಬಾರಿಗೆ ಸದಸ್ಯನಾಗಿ ನೇಮಕವಾಗಿ ಕಳೆದ ಎರಡು ವರ್ಷಗಳಲ್ಲಿ ಯಲಹಂಕ ಕ್ಷೇತ್ರವಷ್ಟೇ ಅಲ್ಲ, ಕರ್ನಾಟಕ ರಾಜ್ಯದ ವಿವಿಧ ಮೂಲೆಗಳ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನದ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದೇನೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ತಿರುಮಲದಲ್ಲಿ ಕರ್ನಾಟಕದ ಭಕ್ತರು ಉಳಿದುಕೊಳ್ಳಲು ವಿಶಾಲವಾದ ವಸತಿ ಗೃಹವನ್ನು ಪುನರ್ ನಿರ್ಮಾಣ ಮಾಡುವ ಯೋಜನೆಗೆ ಅನುಮೋದನೆ ಪಡೆದುಕೊಳ್ಳಲಾಗಿತ್ತು. ಇದರ ಕಾಮಗಾರಿ ಪೂರ್ಣಗೊಳ್ಳುವ ಹಂತ ತಲುಪಿದ್ದು, ಸದ್ಯದಲ್ಲೇ ಕರ್ನಾಟಕದ ಯಾತ್ರಾರ್ಥಿಗಳು ಉಳಿದುಕೊಳ್ಳಲು ಸಾಧ್ಯವಾಗಲಿದೆ ಎಂದರು.

ಕರ್ನಾಟಕದ ಭಕ್ತರಿಗೆ ಯಾವುದೇ ತೊಂದರೆ ಇಲ್ಲದಂತೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಇನ್ನೂ ಹಲವಾರು ಕ್ರಮಗಳನ್ನು ಕೈಗೊಳ್ಳಲು ನಾನು ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇನೆ. ಈ ಮೂಲಕ ಟಿಟಿಡಿ ಮತ್ತು ಕರ್ನಾಟಕದ ಭಕ್ತರ ನಡುವಿನ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಲಿದ್ದೇನೆ ಎಂದು ಅವರು ತಿಳಿಸಿದರು.

ಎಲ್ಲರಿಗೂ ಇಂತಹ ಅದೃಷ್ಠ ಒಲಿಯುವುದಿಲ್ಲ. ನನ್ನ ಮತ ಕ್ಷೇತ್ರದ ಜನತೆ ಮತ್ತು ಹಿರಿಯರ ಆಶೀರ್ವಾದದಿಂದ ಹತ್ತಿರದಿಂದ ಎರಡನೇ ಬಾರಿ ಶ್ರೀ ವೆಂಕಟೇಶ್ವರನ ಸೇವೆಯನ್ನು ಸಲ್ಲಿಸಲು ಅವಕಾಶ ನನಗೆ ಲಭಿಸಿದೆ. ಈ ಅವಕಾಶವನ್ನು ಶ್ರದ್ಧಾಭಕ್ತಿಯಿಂದ ಬಳಸಿಕೊಂಡು ದೇವರ ಕಾಯಕ ಮಾಡುವುದಾಗಿ ಅವರು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ