Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ ಮೋಡಿ ಮಾಡದ ಮೋದಿ!

ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಇದ್ದುದು ಚುನಾವಣಾ ಫಲಿತಾಂಶದ ಮೂಲಕ ಸ್ಪಷ್ಟವಾಗಿದೆ. ಜನರ ಅಸಮಾಧಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಮೋಡಿ ಮಾಡಿದರೂ ಅದು ಮತದಾನರ ಮುಂದೆ ಕಮಾಲ್ ಮಾಡಲು ಸಾಧ್ಯವಾಗಿಲ್ಲ ಎಂಬುದು ನಿಜವಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಬಿಜೆಪಿಗೆ ಅತ್ಯಂತ ದೊಡ್ಡ ಧೈರ್ಯ ಮತ್ತು ಸ್ಥೈರ್ಯ. ಎಂತಹದ್ದೇ ಸಂದರ್ಭ ಇದ್ದರೂ ಅಹ ಕೊನೆಯಲ್ಲಿ ಅವರು ಬಂದು ಎಲ್ಲವನ್ನೂ ಸರಿ ಮಾಡುತ್ತಾರೆ ಎಂದು ಎಲ್ಲರೂ ಬಲವಾಗಿ ನಂಬಿದ್ದಾರೆ. ಅದರಂತೆ ಮೋದಿ ಅವರು ಈ ಬಾರಿ ಹಲವು ಸಮಾವೇಶಗಳು, ರೋಡ್ ಶೋ ಮಾಡಿದರೂ ಸಹ ರಾಜ್ಯದಲ್ಲಿ ಅದು ಪ್ರಭಾವ ಬೀರಿಲ್ಲ.

ಸದ್ಯ 70ರ ಆಸುಪಾಸಿನಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 10ಕ್ಕೂ ಹೆಚ್ಚು ಹಾಲಿ ಸಚಿವರು ಸೋಲಿನ ಭೀತಿಯಲ್ಲಿದ್ದಾರೆ. ಇದು ಬಿಜೆಪಿ ಬಗ್ಗೆ ಇದ್ದ ಜನರ ಅಸಮಾಧಾನ ಇರುವುದು ಈ ಮೂಲ ಸ್ಪಷ್ಟವಾಗುತ್ತಿದೆ.

ಪ್ರಧಾನಿ ಮೋದಿ ಅವರು ಚುನವಣೆಗೆ ಇನ್ನೂ ಮೂರು ವಾರ ಬಾಕಿ ಇರುವಾಗಲೇ ರಾಜ್ಯ ಪ್ರವಾಸ ಆರಂಭಿಸಿದರು. ಹಿಂದೆಲ್ಲಾ ಪ್ರಧಾನಿಯಾದವರು ಕೇವಲ ಒಂದು ಅಥವಾ ಹೆಚ್ಚೆಂದರೆ ಎರಡು ಬಾರಿ ಬೆಂಗಳೂರಿಗೆ ಬಂದು ಹೋಗುತ್ತಿದ್ದರು.

ಆದರೆ, ಪ್ರಧಾನಿ ನರೇಂದ್ರ ಮೋದಿ ಅದನ್ನು ಸುಳ್ಳು ಮಾಡಿದರು. ಚುನಾವಣೆಗೆ ಇನ್ನೂ ಮೂರು ವಾರ ಬಾಕಿ ಇರುವಾಗಲೇ ರಾಜ್ಯ ಪ್ರವಾಸ ಪ್ರಾರಂಭಿಸಿದರು. ಹಳೆ ಮೈಸೂರು ಭಾಗದಿಂದ ಪ್ರವಾಸ ಆರಂಭಿಸಿದ ಪ್ರಧಾನಿ ಬಳಿಕ ಬೆಂಗಳೂರು, ಕಿತ್ತೂರು ಕರ್ನಾಟಕ, ಹೈದರಾಬಾದ್ ಕರ್ನಾಟಕ, ಕರಾವಳಿ, ಹೀಗೆ ಎಲ್ಲಾ ಪ್ರದೇಶಗಳು ಮತ್ತು ಬಹುತೇಜ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದರು.

ಪ್ರಧಾನಿ ರೋಡ್ ಶೋ ಮಾಡಿದರೆ ಅದನ್ನು ನೋಡಲು ಲಕ್ಷೋಪಲಕ್ಷ ಜನ ಸೇರುತ್ತಿದ್ದರೂ ಸಹ ಅದು ಮತಗಳಾಗಿ ಪರಿವರ್ತನೆ ಆಗಿಲ್ಲ. ಕೇವಲ ಮೋದಿಯವನರನ್ನು ನೋಡಲು ಮಾತ್ರ ಜನ ಸೇರುತ್ತಿದ್ದರು ಎಂಬುದು ಈ ಮೂಲಕ ಸ್ಪಷ್ಟವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ