Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ನಗರಸಭೆ ಮುತ್ತಿಗೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಅ. 21 :ಹದೆಗೆಟ್ಟಿರುವ ರಸ್ತೆ ,ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ವಿರುದ್ದ ಸ್ಥಳೀಯ ನಿವಾಸಿಗಳು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ19 ನೇ ವಾರ್ಡಿನ ತಿಮ್ಮಯ್ಯ ಲೇಔಟ್ ನಲ್ಲಿ ಸುಮಾರು 20 ವರ್ಷದಿಂದ ರಸ್ತೆಗೆ ಸಿಸಿ ರಸ್ತೆ ಅಥವಾ ಡಾಂಬಾರು ರಸ್ತೆ ನಿರ್ಮಾಣ ಮಾಡದ ಕಾರಣ ನಗರಸಭೆಯ ಅಧಿಕಾರಿಗಳ ನಿರ್ಲಕ್ಷತನದಿಂದ ನಾಗರೀಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ದಿನ ನಿತ್ಯ ಹದಗೆಟ್ಟಿರುವ ರಸ್ತೆಯಲ್ಲಿ ಓಡಾಡಲು ತುಂಬಾ ತೊಂದರೆಯಾಗಿದ್ದು , ಬಹು ಮುಖ್ಯವಾಗಿ ವಯೋ ವೃದ್ದರು ಆ ರಸ್ತೆಯಲ್ಲಿ ಓಡಾಡಲು ಹರ ಸಹಾಸ ಪಡುವಂತಾಗಿದೆ.

ಈ ಬಗ್ಗೆ ಅನೇಕ ಬಾರಿ ವಾರ್ಡಿನ ನಗರ ಸಭೆ ಸದಸ್ಯೆ ಫರೀದ್ ಉನ್ನಿಸಾ ಅವರ ಗಮನಕ್ಕೂ ತರಲಾಗಿದೆ. ನಗರಸಭೆಗೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿಗಳು ನೀಡಿದ್ದರೂ ಸಹ ಇದುವರೆಗೂ ನಮ್ಮ ಸಮಸ್ಯೆಗಳು ಬಗೆಹರಿಸಲಿಲ್ಲ. ಆದ್ದರಿಂದ ನಮ್ಮ ಸಮಸ್ಯೆಗಳು ಬಗೆ ಹರಿಯುವ ತನಕ ಇಲ್ಲಿಂದ ತೆರಳುವುದಿಲ್ಲವೆಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಪ್ರತಿಭಟಿಸಿದರು.

ವಾರ್ಡಿನಲ್ಲಿ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರಸಿಡೆಸ್ಸಿ ಖಾಸಗಿ ಶಾಲೆಗಳಿವೆ. ಈ ಮೂರು ಶಾಲೆಗಳ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ದಿನ ನಿತ್ಯ ಓಡಾಡುತ್ತಾರೆ. ಮಳೆಗಾಲದಲ್ಲಂತೂ ಬಹಳ ಅವ್ಯವಸ್ಥೆಗಳು ಪಟ್ಟು ಆ ಹದೆಗೆಟ್ಟ ರಸ್ತೆಯಲ್ಲಿ ಓಡಾಡುವಂತ ದುಸ್ಥಿತಿ ಎದುರಾಗಿದೆ.

ಇಲ್ಲಿನ ಎಲ್ಲಾ ಮನೆಯವರು ಕಾಲ ಕಾಲಕ್ಕ ನಗರಸಭೆಗೆ ಕಂದಾಯವನ್ನು ಸಹ ಕಟ್ಟುತ್ತಿದ್ದೇವೆ. ಆದರೂ ಕೂಡ ಮೂಲಭೂತ ಸೌಲಭ್ಯಗಳಿಂದ ವಂಚಿರಾಗಿದ್ದೇವೆ. ಹೀಗಿರುವಾಗ ನಗರಸಭೆ ಯಾತಕ್ಕೆ ಬೇಕಾಗಿದೆ ಎಂದು ನಗರಸಭೆಯ ವಿರುದ್ಧ ದಿಕ್ಕಾರಗಳು ಕೂಗಿ ನಗರದ ಪ್ರಮುಖ ರಸ್ತೆಯೇ ದುಸ್ಥಿತಿಯಲ್ಲಿ ಅನೇಕ ವರ್ಷಗಳಿಂದ ಇರುವಂತಾಗಿದೆ. ಆ ಹದಗೆಟ್ಟ ರಸ್ತೇಲಿ ನಾಗರೀಕರು ಓಡಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ನಗರಸಭೆಯ ಪೌರಾಯುಕ್ತ ಆಂಜಿನೇಯಲು ಮಾತನಾಡಿ, ಈಗಾಗಲೇ ನಗರಕ್ಕೆ ಬಂದು ಪರಿವೀಕ್ಷಣೆ ಮಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮಂಜೂಳ ರವರು ಸಹ ಈ ರಸ್ತೆಯ ಬಗ್ಗೆ ಗಮನಕ್ಕೆ ತಂದಿದ್ದಾರೆ. ಇದೀಗ ತಾವು ಕೂಡ ತಮ್ಮ ಸಮಸ್ಯೆಗಳನ್ನು ತಿಳಿಸಿದ್ದೀರಿ. 19 ನೇ ವಾರ್ಡಿಗೆ ಅವರೊಂದಿಗೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ವೀಕ್ಷಣೆ ಮಾಡಿ 2 ತಿಂಗಳ ಒಳಗೆ ನಿಮ್ಮ ಬೇಡಿಕೆಗಳು ಈಡೇರಿಸುವುದಾಗಿ ಭರವಸೆ ನೀಡಿದರು. ನಂತರ ಅವರ ಭರವಸೆಯಂತೆ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟರು.

ಈ ಸಂದರ್ಭದಲ್ಲಿ ಹಾರೀಫ್, ನವಾಜ್, ಬಾಬಾ, ಝಬೀ, ಲಡ್ಡು ನಾಸೀನ್, ಬಿ.ಎ ಸೆಮಿ, ಫಾರೂಕ್, ಹಾಜಿ ಸಮೀಉಲ್ಲಾ, ಇಮ್ರಾನ್ ಹಾಗೂ ಮುಂತಾದವರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ