Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಗೆ ಬಹುಮತ ಖಚಿತ- ನಳಿನ್‍ಕುಮಾರ್ ಕಟೀಲ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.15: ಬಿಜೆಪಿಗೆ ಬಹುಮತ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣಾ ಅಖಾಡದ ಬಿಸಿ ಏರುತ್ತಿದೆ. ಎಲ್ಲ ರಾಜಕೀಯ ಪಾರ್ಟಿಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಡಿಸೆಂಬರ್ ತಿಂಗಳಿನಿಂದ ಅಭ್ಯರ್ಥಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದು, ಕಷ್ಟದಿಂದ ಇವತ್ತು ಕೆಲವು ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಕಾಂಗ್ರೆಸ್ ಪಕ್ಷದ್ದು 2 ಬಾರಿ ಗಜಪ್ರಸವ ಆಗಿದೆ ಎಂದು ಟೀಕಿಸಿದರು.



ಬಿಜೆಪಿ ಕಾರ್ಯಕರ್ತರ ಆಧರಿತ ಪಾರ್ಟಿ. ಪ್ರಜಾಪ್ರಭುತ್ವದ ಆಧಾರದಲ್ಲಿ ನಮ್ಮ ಸಂಘಟನೆ ಮಾಡುತ್ತಿದ್ದೇವೆ. ಹಾಗಾಗಿ ಬಿಜೆಪಿಯಲ್ಲಿ 3 ವರ್ಷಕ್ಕೆ ಒಮ್ಮೆ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರ ಆಯ್ಕೆ, ಕಾರ್ಯಕರ್ತರಿಗೆ ಗೌರವ ನೀಡುತ್ತಿದ್ದೇವೆ ಎಂದರು.

31ರಂದು ಚುನಾವಣಾ ಪ್ರಕ್ರಿಯೆ ನಡೆದಿದೆ. ಶಕ್ತಿಕೇಂದ್ರ ಬೂತ್ ಪ್ರಮುಖರ ಜೊತೆ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ. 10 ದಿನಗಳ ಪ್ರಕ್ರಿಯೆಯಲ್ಲಿ 212 ಅಭ್ಯರ್ಥಿಗಳ ಘೋಷಣೆ ಆಗಿದೆ. ಮತಗಟ್ಟೆ ಅಧ್ಯಕ್ಷರಿಂದ ರಾಷ್ಟ್ರೀಯ ಅಧ್ಯಕ್ಷರವರೆಗೆ ಅಭಿಪ್ರಾಯ ಸಂಗ್ರಹದ ಮೂಲಕ ಅಭ್ಯರ್ಥಿಗಳನ್ನು ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

ಸುಮಾರು 60 ಹೊಸ ಮುಖಗಳಿವೆ. ವೈದ್ಯರು, ಐಎಎಸ್, ಐಪಿಎಸ್ ಅಧಿಕಾರಿಗಳ ಪಟ್ಟಿ ಇದಾಗಿದೆ. ಪಕ್ಷಕ್ಕಾಗಿ ದುಡಿದವರು, ರಾಷ್ಟ್ರ ವಿಚಾರಧಾರೆಯಲ್ಲಿ ಗುರುತಿಸಿಕೊಂಡ ಸಾಮಾನ್ಯರಲ್ಲಿ ಸಾಮಾನ್ಯರನ್ನೂ ಗುರುತಿಸಿದ್ದೇವೆ. ಕಡು ಬಡತನದ ಹಿನ್ನೆಲೆ ಇರುವ ಭಾಗೀರಥಿ ಮುರುಳ್ಯ, ಪಕ್ಷದ ಹಿನ್ನೆಲೆಯ ಸಮರ್ಪಣಾ ಮನೋಭಾವದ ಗುರುರಾಜ್, ಈಶ್ವರ ಸಿಂಗ್ ಠಾಕೂರ್ ಅವರಂಥ ಕಾರ್ಯಕರ್ತರಿಗೂ ಅವಕಾಶ ನೀಡಿದ್ದೇವೆ ಎಂದು ತಿಳಿಸಿದರು.

ಯುವಕರ ತಂಡ, ವಿದ್ಯಾವಂತರ ತಂಡ, ಸಾಮಾಜಿಕ ಕಾರ್ಯಕರ್ತರ ತಂಡ ನಮ್ಮದು. 9 ವೈದ್ಯರು, 52 ಜನ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುವವರು, ಮಹಿಳೆಯರು ಸೇರಿ ಮುಂದಿನ ಕರ್ನಾಟಕದ ಅಭಿವೃದ್ಧಿ ಸಾಕಾರಕ್ಕಾಗಿ ಹೊಸ ತಂಡ ಸಿದ್ಧವಾಗಿದೆ ಎಂದರು.

ಬಿಜೆಪಿ, ಮೋದಿಜಿ ಪರ ಅಲೆ ಕರ್ನಾಟಕದಲ್ಲಿದೆ. ದೇಶದ ಮೋದಿ ನೇತೃತ್ವದ ಸರಕಾರದ ಅಭಿವೃದ್ಧಿ ಕಾರ್ಯ, ಪರಿಶ್ರಮವನ್ನು ಕರ್ನಾಟಕದ ಜನ ಒಪ್ಪಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿಯವರ ಕಾರ್ಯಶೈಲಿ ಡಬಲ್ ಎಂಜಿನ್ ಸರಕಾರದ ಕಾರ್ಯಶೈಲಿಯನ್ನು ಜನತೆ ಮೆಚ್ಚಿದ್ದಾರೆ ಎಂದು ತಿಳಿಸಿದರು.

ನೂರಾರು ಜನ ಫಲಾನುಭವಿಗಳು ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. ಅಂಬೇಡ್ಕರರ ಆಶಯದಂತೆ ಸಾಮಾಜಿಕ ಸಮತೋಲನ ಕಾಪಾಡುವ ಕೆಲಸ ಮಾಡುತ್ತೇವೆ. ಕಾರ್ಯಕರ್ತರ ಆಧಾರಿತ ಪಾರ್ಟಿ ನಮ್ಮದು. ಮಾದರಿ ಸರಕಾರ ನೀಡಲು ಪೂರಕವಾಗಿ ಅಭ್ಯರ್ಥಿಗಳ ಆಯ್ಕೆ ನಡೆದಿದೆ ಎಂದರು.

34 ಜನ ಹಿಂದುಳಿದ ವರ್ಗದವರು, 34 ಜನ ಪರಿಶಿಷ್ಟ ಜಾತಿಯವರು, 17 ಜನ ಪರಿಶಿಷ್ಟ ಪಂಗಡದವರು, 126 ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅವಕಾಶ ಕೊಡಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್‍ನ ಸ್ಥಿತಿ ಚಿಂತಾಜನಕ, ಕಷ್ಟದಾಯಕವಾಗಿದೆ. ಬೇರೆ ಪಕ್ಷದಿಂದ ಬಂದವರಿಗಾಗಿ ಕಾಯುವ ಸ್ಥಿತಿ ಇತ್ತು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಖರ್ಗೆ ತಂಡಕ್ಕೆ ಸೀಟು ಹಂಚಬೇಕಾದ ದುಸ್ಥಿತಿ ಇತ್ತು. ಕಾಂಗ್ರೆಸ್ಸಿಗೆ ಅಭ್ಯರ್ಥಿಗಳ ಕೊರತೆ ಕಾಡುತ್ತಿದೆ. ಜೆಡಿಎಸ್ ಹಾಸನ ಪೈಪೋಟಿಯ ಬಳಿಕ ಕೊನೆಗೂ ಅಭ್ಯರ್ಥಿ ಘೋಷಣೆ ಆಗಿದೆ. ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ. ಕಾಂಗ್ರೆಸ್‍ಗೆ ಭಯ ಹೆಚ್ಚಾಗಿದೆ. ಕಾಂಗ್ರೆಸ್ ಪಕ್ಷದ ಜಗಳ ಮುಂದಿನ ದಿನಗಳಲ್ಲಿ ಬೀದಿಕಾಳಗವಾಗಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರರಿಗೆ ಸೋಲುವ ಆತಂಕ ಹೆಚ್ಚಾಗಿದೆ ಎಂದು ತಿಳಿಸಿದರು.

ಟಿಕೆಟ್ ಸಿಗದವರ ಆಕ್ರೋಶ ಸಹಜ. ಅವರನ್ನು ಬಿಜೆಪಿಗೆ ಜೋಡಿಸುವ ಶಕ್ತಿ ನಮಗಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಪಕ್ಷ ಬಿಟ್ಟ ಲಕ್ಷ್ಮಣ ಸವದಿ ಯಾವ ಸ್ಥಿತಿಗೆ ತಲುಪುತ್ತಾರೆ ಎಂದು ಕಾದುನೋಡಿ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಜಗದೀಶ ಶೆಟ್ಟರ್ ಅವರ ಜೊತೆ ಪ್ರಲ್ಹಾದ ಜೋóಷಿಯವರು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ಯಡಿಯೂರಪ್ಪ ಅವರ ಮಾರ್ಗದರ್ಶನ ಮತ್ತು ಬೊಮ್ಮಾಯಿಯವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. 12 ಉಳಿಕೆ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಒಂದು ಮನೆಯ ಒಳಗಿನವರು ಪ್ರಧಾನಿ, ಮುಖ್ಯಮಂತ್ರಿ, ಸಂಸದ, ಶಾಸಕ ಆಗಿದ್ದಾರೆ. ಅದು ಕುಟುಂಬ ರಾಜಕಾರಣ. ಅಂಥ ರಾಜಕೀಯ ನಮ್ಮದಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ