Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಲೂರು: ಪಕ್ಷೇತರ ಅಭ್ಯರ್ಥಿಯಾಗಿ ನಂಬಿಗಾನಹಳ್ಳಿ ನಾರಾಯಣಮ್ಮ ನಾಮಪತ್ರ

ಸುದ್ದಿಮೂಲ ವಾರ್ತೆ

ಮಾಲೂರು, ಏ.18 : ತಾಲೂಕಿನಲ್ಲಿ ಸುಮಾರು 15 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗದೆ ಭ್ರಷ್ಟಾಚಾರ, ಲಂಚಗುಳಿತನ ತಾಂಡವಾಡುತ್ತಿದ್ದು, ಅದನ್ನು ಹೋಗಲಾಡಿಸಿ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಮಾಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಂಬಿಗಾನಹಳ್ಳಿ ನಾರಾಯಣಮ್ಮ ತಿಳಿಸಿದರು.

ನಾಮಪತ್ರ ಸಲ್ಲಿಸಲು ತಮ್ಮ ಸ್ವ ಗ್ರಾಮದಿಂದ ಎತ್ತಿನ ಗಾಡಿಯಲ್ಲಿ ಮೆರವಣಿಗೆಯ ಮೂಲಕ ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಲೂಕಿನಲ್ಲಿ ಬಡವರು, ದೀನದಲಿತರು, ರೈತರ ಕಷ್ಟಗಳಿಗೆ ಇದುವರೆಗೂ ಚುನಾಯಿತರಾಗಿರುವ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲಿ ಲಂಚ ನೀಡದೆ ಯಾವುದೇ ಸಾರ್ವಜನಿಕ ಕೆಲಸ ಕಾರ್ಯಗಳು ಆಗುತ್ತಿಲ್ಲ. ರೈತರ ಪಿ ನಂಬರ್ ದುರಸ್ತಿ, ಪಾವತಿ ಖಾತೆ ಸೇರಿದಂತೆ ಹಲವಾರು ಸಮಸ್ಯೆಗಳು ಎದ್ದು ಕಾಣುತ್ತಿದ್ದು. ಕೂಲಿ ನಾಲಿ ಮಾಡುವ ಸಾಮಾನ್ಯ ಜನರು ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಕಂಗಾಲಾಗಿದ್ದಾರೆ. ಇದನ್ನು ಗಮನಿಸಿದ ನಾನು ಈ ಚುನಾವಣೆಯಲ್ಲಿ ಜನರ ಕಷ್ಟಗಳನ್ನು ನಿವಾರಿಸಲು ಬದಲಾವಣೆಯಗೋಸ್ಕರ ನಾನು ವಿಧಾನಸಭಾ ಚುನಾವಣೆಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು . ತಾಲೂಕಿನ ಎಲ್ಲಾ ಜನರು ಆಶೀರ್ವಾದ ಮಾಡಿ ಶಾಸಕರನ್ನಾಗಿ ಮಾಡುವಂತೆ ಕೋರಿದರು.

 

ಈ ಸಂದರ್ಭದಲ್ಲಿ ಕೃಷ್ಣಪ್ಪ, ನಾರಾಯಣಸ್ವಾಮಿ, ನಿರ್ಮಲ, ಮೋಹನ್ ಸೇರಿದಂತೆ ಇನ್ನಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ