Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದಗುಡಿ ಗ್ರಾ.ಪಂ.ನಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ

ಹೊಸಕೋಟೆ, ,ನ.20: ರಾಷ್ಟ್ರದ ಸ್ವಾತಂತ್ಯ್ರ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕೆಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆಂಪಣ್ಣ ಹೇಳಿದರು.

ಹೊಸಕೋಟೆ ತಾಲೂಕು ನಂದಗುಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು 12ನೇ ಶತಮಾನದಲ್ಲಿಯೇ ಬಸವಣ್ಣನವರು ಭೋದಿಸಿದ ಧರ್ಮ ನಿರಪೇಕ್ಷತೆಯನ್ನು ಪಾಲಿಸಬೇಕಾಗಿದ್ದು ನಮ್ಮ ಸಂವಿಧಾನದಲ್ಲಿಯೂ ವಿಶೇಷಾಧ್ಯತೆ ಮೇರೆಗೆ ಅದನ್ನು ಅಳವಡಿಸಲಾಗಿದ್ದು ಸಂವಿಧಾನಕ್ಕೆ ಎಲ್ಲರೂ ಗೌರವಕೊಡಬೇಕು.

ನಮ್ಮ ದೇಶದಲ್ಲಿ ವಿವಿಧ ಜಾತಿ ಧರ್ಮಗಳು ಇದ್ದು ಐಕ್ಯತೆಯನ್ನು, ಸೌಹಾರ್ದತೆಯನ್ನು ಕಾಯ್ದುಕೊಂಡು ಹೋಗಬೇಕಾದ ಅವಶ್ಯಕತೆ ಇದೆ ಎಂದ ಅವರು ಮಾನವೀಯ ಮೌಲ್ಯಗಳನ್ನು ಉಳಿಸಬೇಕಾದರೆ ಮೊದಲು ಮಾನವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೆಕೆಂದು ಹೇಳಿದರು.

ಮಾಜಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಂಜುಳಾ ನಾಗೇಶ್ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಮುಂದುವರೆದಿರುವ ಈಗಿನ ಸಮಯದಲ್ಲ್ಲಿ ಧರ್ಮದ ಹೆಸರಿನಲ್ಲಿ ಸಮಾಜದ ಶಾಂತಿಯನ್ನು ಕದಡುವದರಿಂದ ಅಭಿವೃದ್ಧಿಯ ವೇಗ ಕುಂಟಿತವಾಗುತ್ತದೆ. ಶೋಷಿತ ವರ್ಗಗಳ ಕುರಿತು ಹಾಗೂ ದುರ್ಬಲವರ್ಗದವರ ಏಳಿಗೆಗಾಗಿ, ಪರಿಸರ ರಕ್ಷಣೆಗಾಗಿ ಹೆಚ್ಚು ಮಹತ್ವವನ್ನು ಕೊಡಬೇಕೆಂದ ಅವರು

ಪರಸ್ಪರ ಸೋದರತ್ವವನ್ನು ಕಾಪಾಡುವ ಮೂಲಕ ದೇಶವನ್ನು ಅಭಿವೃದ್ದಿಪಥತದಲ್ಲಿ ಮುನ್ನಡೆಸಲು ಅನುವುಮಾಡಿಕೊಟ್ಟಂತಾಗುತದೆ ಯಾವುದೇ ಧರ್ಮಗಳು ಅಹಿಂಸೆಯನ್ನು ಭೋಧಿಸುವದಿಲ್ಲ. ಧರ್ಮವನ್ನು ಸರಿಯಾಗಿ ಅರ್ಥಮಾಡಿಕೊಳ್ಳುವ ಅವಶ್ಯಕತೆ ಇದ್ದು, ಸಮಾಜ ಸುಧಾರಕರ, ಸ್ವಾಂತಂತ್ರ್ಯ ಹೋರಾಟಗಾರರ, ಮಹಾಪುರುಷರ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.

ಪಿಡಿಓ ಕೆಂಪಣ್ಣ ಅವರು ಎಲ್ಲರಿಗೂ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಭೋಧಿಸಿದರು. ಈ ರಾಷ್ಟ್ರೀಯ ಐಕ್ಯತಾ ಸಪ್ತಾಹ ರಾಜ್ಯಾದ್ಯಂತ ನ.19ರಿಂದ 25ವರೆಗೆ ನಡೆಯಲಿದ್ದು ನ.20ರಂದು ಅಲ್ಪ ಸಂಖ್ಯಾತರ

ಕಲ್ಯಾಣ ದಿನ, ನವೆಂಬರ ೨೧ ಭಾಷಾ ಸೌಹಾರ್ಧತಾ ದಿನ, ನವೆಂಬರ 22 ರಂದು ದುರ್ಬಲ ವರ್ಗಗಳ ದಿನ ನವೆಂಬರ 23 ರಂದು ಸಾಂಸ್ಕೃತಿಕ ಏಕತಾ ದಿನ, ನವೆಂಬರ 24 ಮಹಿಳಾ ದಿನ ನವೆಂಬರ 25 ರಂದು ಪರಿಸರ ರಕ್ಷಣಾ ದಿನ ಹೀಗೆ ಪ್ರತಿ ವಿಷಯಗಳ ಮೇಲೆ 7 ದಿನಗಳ ಕಾಲ ನಂದಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಕಾಲೇಜು ಸಪ್ತಾಹ ಕಾರ್ಯಕ್ರಮ ನಡೆಯಲಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎನ್ ವಿ ಮುನಿರಾಜು, ಪಂಚಾಯಿತಿ ಕಾರ್ಯದರ್ಶಿ ವೆಂಕಟೇಶ್, ಲೆಕ್ಕಾಧಿಕಾರಿ ಸಂಪತ್ ಕುಮಾರ್, ಕರ ವಸೂಲಿಗಾರ ಮನೋಜ್ ಕುಮಾರ್, ನಯನ, ಜಯಪ್ರಕಾಶ್ ಹಾಜರಿದ್ದರು.20,rastriya saptaha,1.jpg
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ