Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆದಿಚುಂಚನಗಿರಿ ಮಠದ ನೂತನ ಕಟ್ಟಡ, ಉಚಿತ ವಿದ್ಯಾರ್ಥಿನಿಲಯ ಲೋಕಾರ್ಪಣೆ

ಸುದ್ದಿಮೂಲ ವಾರ್ತೆ,

ಮೈಸೂರು, ಸೆ.11:ಧರ್ಮವಿರುವುದು ಮನುಷ್ಯನ ಒಳಿತಿಗಾಗಿ, ಅವನ ಉತ್ತಮ ಬದುಕಿಗಾಗಿ. ಧರ್ಮಕ್ಕಾಗಿ ಮನುಷ್ಯ ಇಲ್ಲ. ಈ ಬಗ್ಗೆ ನಾವು ಸ್ಪಷ್ಟತೆ ಹೊಂದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಹಾಗೂ ಬಿಜಿಎಸ್ ಸಾಂಸ್ಕೃತಿಕ ಭವನ ಹಾಗೂ ಉಚಿತ ವಿದ್ಯಾರ್ಥಿ ನಿಲಯವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕೆಲವರು ಮನುಷ್ಯ, ಮನುಷ್ಯರಲ್ಲಿ ಬೆಂಕಿ ಇಡುವ ಕೆಲಸ ಮಾಡುತ್ತಾರೆ. ಅದಕ್ಕೆ ಬಲಿಯಾಗದೆ, ಮನುಷ್ಯ, ಮನುಷ್ಯನನ್ನು ಪ್ರೀತಿಸಬೇಕು. ಧರ್ಮ ಅಂದರೆ ಬದುಕಿನ ಮಾರ್ಗ. ಬಸವಾದಿ ಶರಣರು ದಯವೇ ಧರ್ಮದ ಮೂಲವಯ್ಯಾ ಎಂದಿದ್ದಾರೆ. ದಯೆ ಇಲ್ಲದ ಧರ್ಮ ಅದ್ಯಾವುದಯ್ಯ ಎಂದಿದ್ದಾರೆ. ಮನುಷ್ಯ ಮನುಷ್ಯನನ್ನು ದಯೆ, ಕರುಣೆಯಿಂದ ಕಾಣುವುದೇ ಧರ್ಮ. ಯಾವ ಧರ್ಮದಲ್ಲಿ ದಯೆ, ಪ್ರೀತಿ, ಕರುಣೆ ಇಲ್ಲವೋ , ಅದು ಧರ್ಮವಲ್ಲ ಎಂದು ವ್ಯಾಖ್ಯಾನಿಸಿದರು.

ವಿದ್ಯೆ ಕಲಿತು ಜಾತಿವಾದಿಗಳಾದರೆ ಪ್ರಯೋಜನವಿಲ್ಲ

ವಿದ್ಯೆ ಕಲಿತು ಜಾತ್ಯಾತೀತವಾಗಿ ಯೋಚಿಸುವುದನ್ನು ಬಿಟ್ಟು, ಜಾತಿವಾದಿಗಳಾದರೆ ಏನು ಪ್ರಯೋಜನವಿಲ್ಲ. ನಮ್ಮ ದೇಶದಲ್ಲಿ ಅನೇಕ ಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳನ್ನು ಹೊಂದಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ನಾವೆಲ್ಲರೂ ಆಕಸ್ಮಿಕವಾಗಿ ಯಾವುದೋ ಜಾತಿ, ಧರ್ಮಗಳಲ್ಲಿ ಹುಟ್ಟಿರುತ್ತೇವೆ. ರಾಷ್ಟ್ರ ಕವಿ ಕುವೆಂಪು ಬಯಸಿದ್ದು ಎಲ್ಲರೂ ವಿಶ್ವ ಮಾನವರಾಗಬೇಕು ಎಂಬುದನ್ನು. ಅವರ ಕನಸನ್ನು ನನಸು ಮಾಡಲು ವೈಚಾರಿಕತೆ, ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ಕೆಂಪೇಗೌಡರ ಜಯಂತಿ ಕೆಲವೇ ಧಾರ್ಮಿಕ ಕ್ಷೇತ್ರಗಳಲ್ಲಿ ಆದಿಚುಂಚನಗಿರಿ ಕ್ಷೇತ್ರ ಕೂಡ ಬಹಳ ಪ್ರಸಿದ್ಧವಾದ ಕ್ಷೇತ್ರ. ಆ ಜವಾಬ್ದಾರಿಯನ್ನು ಹೊತ್ತು ಧಾರ್ಮಿಕ ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ನಿರ್ಮಲಾನಂದನಾಥ ಸ್ವಾಮಿಗಳು ಸಾಧನೆ ಮಾಡಿದ್ದಾರೆ. ನಮ್ಮ ಸರ್ಕಾರ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಕೆಂಪೇಗೌಡ ಪ್ರಾಧಿಕಾರವನ್ನು ಕೂಡ ನಮ್ಮ ಸರ್ಕಾರವೇ ಸ್ಥಾಪಿಸಿತು. ನಾಡಪ್ರಭು ಕೆಂಪೇಗೌಡ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದು ಕೂಡ ನಮ್ಮ ಸರ್ಕಾರವೇ. ಕೆಂಪೇಗೌಡರ ಹೆಸರು ಚಿರಸ್ಥಾಯಿ ಎಂಬ ಕಾರಣದಿಂದ ಕೆಂಪೇಗೌಡ ಜಯಂತಿ ಆಚರಿಸಲು ತೀರ್ಮಾನ ಮಾಡಿದೆವು ಎಂದು ಹೇಳಿದರು.

ಶ್ರೀಮಠದಿಂದ ಮಾನವೀಯ ಸಮಾಜ ನಿರ್ಮಾಣ

ಆದಿಚುಂಚನಗಿರಿ 1800 ವರ್ಷಗಳ ಇತಿಹಾಸವಿರುವ ಪ್ರಾಚೀನವಾದ ಕ್ಷೇತ್ರವಾಗಿದ್ದು, ಈಶ್ವರನ ತಪೋಭೂಮಿ. ಅನೇಕ ಸಾಧುಸಂತರನ್ನು ಕಂಡಿರುವ ಆದಿಚುಂಚನಗಿರಿ ಕ್ಷೇತ್ರ ಹೆಮ್ಮರವಾಗಿ ಬೆಳವಣಿಗೆಯಾಗುವಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಪಾತ್ರ ಬಹಳ ದೊಡ್ಡದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಸಚಿವ ಚೆಲುವರಾಯಸ್ಸ್ವಾಮಿ, ಶಾಸಕರಾದ ತನ್ವೀರ್‌ಸೇಠ್‌, ಕೆ. ಹರೀಶ್‌ಗೌಡ, ಸಿ.ಎನ್.ಮಂಜೇಗೌಡ ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ