Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಸಿರು ಕೈಗಾರಿಕೆಗಳಿಗೆ 30 ದಿನದಲ್ಲೇ ಎನ್‌ಓಸಿ: ಈಶ್ವರ ಖಂಡ್ರೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.16: ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರಾಕ್ಷೇಪಣಾ ಪತ್ರ (ಎನ್.ಓ.ಸಿ) ಕೋರಿ ಬರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥ ಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಸಿರು ಪ್ರವರ್ಗದ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಅನುಮತಿ ಕೋರಿ ಸಲ್ಲಿಸಲಾಗುವ ಅರ್ಜಿಗಳು ನಿಯಮಾನುಸಾರ ಇದ್ದಲ್ಲಿ 30 ದಿನಗಳ ಒಳಗೆ, ಕೇಸರಿ ಅಂದರೆ ಆರೆಂಜ್ ಪ್ರವರ್ಗದ ಅರ್ಜಿಗಳನ್ನು 45 ದಿನಗಳ ಒಳಗೆ ಮತ್ತು ಕೆಂಪು ಪ್ರವರ್ಗದ ನಿರಾಕ್ಷೇಪಣಾ ಪತ್ರ ಕೋರಿ ಸಲ್ಲಿಸುವ ಅರ್ಜಿಗಳನ್ನು 90 ದಿನಗಳ ಒಳಗೆ ಇತ್ಯರ್ಥ ಪಡಿಸಬೇಕು ಎಂದು ಆದೇಶ ನೀಡಿದರು.

ಮಂಡಳಿಯಲ್ಲಿ 1400ಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಉಳಿದಿದ್ದು, ಈ ರೀತಿ ವಿಳಂಬ ಮಾಡುವುದು ಸರಿಯಲ್ಲ, ಹೀಗಾಗಿ ಕಾಲಮಿತಿಯೊಳಗೆ ಅರ್ಜಿಗಳ ವಿಲೇವಾರಿ ಆಗಬೇಕು, ಅನಗತ್ಯವಾಗಿ ವಿಳಂಬವಾದರೆ ಸಂಬಂಧಿತ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹಸಿರು ಪಟಾಕಿಗೆ ಉತ್ತೇಜನ:

ಪರಿಸರಕ್ಕೆ ಹಾನಿಕಾರಕವಾದ ಪಟಾಕಿಗಳ ತಯಾರಿಕೆ, ಸಾಗಾಟ, ದಾಸ್ತಾನು ಮತ್ತು ಮಾರಾಟವನ್ನು ನ್ಯಾಯಾಲಯವೇ ನಿಷೇಧಿಸಿದೆ. ಇದನ್ನು ಮಂಡಳಿ ಮತ್ತು ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.

ನೆರೆ ರಾಜ್ಯಗಳಿಂದ ಪಟಾಕಿ ರಾಜ್ಯಕ್ಕೆ ಬರುತ್ತಿದೆ ಇದಕ್ಕೆ ಕಡಿವಾಣ ಹಾಕಲಾಗುವುದೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದ ಗಡಿಯಲ್ಲಿ ತಪಾಸಣೆ ನಡೆಯುತ್ತಿದೆ. ಹಸಿರು ಪಟಾಕಿಗಳ ಮೇಲೆ ಕ್ಯು.ಆರ್. ಕೋಡ್ ಇರುತ್ತದೆ. ಇದನ್ನು ಸ್ಕ್ಯಾನ್ ಮಾಡಿದರೆ ಹಸಿರು ಪಟಾಕಿ ತಿಳಿಯುತ್ತದೆ ಎಂದು ತಿಳಿಸಿದರು.

ಜನರಲ್ಲಿ ಜಾಗೃತಿ ಮೂಡಿಸಿದರೆ, ಪಟಾಕಿಗಳಿಂದ ಆಗುವ ಅಪಾಯದ ಬಗ್ಗೆ ತಿಳಿಯ ಹೇಳಿದರೆ ಹಸಿರು ಪಟಾಕಿ ಉತ್ತೇಜಿಸಲು ಮತ್ತು ಹೊಗೆ ಉಗುಳುವ, ಅಪಾಯಕಾರಿ ಅಂಶ ಒಳಗೊಂಡ ಪಟಾಕಿ ನಿರ್ಬಂಧಿಸಲು ಸಾಧ್ಯ. ಹೀಗಾಗಿ ಆಬಾಲವೃದ್ಧರಾದಿಯಾಗಿ ಎಲ್ಲರಿಗೂ ಈ ಬಗ್ಗೆ ಜಾಗೃತಿ ಮೂಡಿಸಲು ಶ್ರಮಿಸುವಂತೆ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

58 ಸಮುಚ್ಚಯಗಳಿಗೆ ತಲಾ 3 ಕೋಟಿ ದಂಡ: ಬೆಂಗಳೂರು ನಗರದ ಬೆಳ್ಳಂದೂರು ಕೆರೆಯ ಸುತ್ತಮುತ್ತ ತ್ಯಾಜ್ಯ ನೀರನ್ನು ಕರೆಗೆ ನೇರವಾಗಿ ಹರಿಸುತ್ತಿರುವ ಬೃಹತ್ ವಸತಿ ಸಮುಚ್ಚಯಗಳಿಂದ ಸುಮಾರು 200 ಕೋಟಿ ರೂ. ದಂಡ ವಸೂಲಿ ಮಾಡಿ, ತ್ಯಾಜ್ಯ ಜಲ ಸಂಸ್ಕರಣೆಗೆ ಘಟಕ (ಎಸ್.ಟಿ.ಪಿ.) ನಿರ್ಮಿಸಲು ಎನ್.ಜಿ.ಟಿ. ಆದೇಶ ನೀಡಿದೆ. 2024ರ ಡಿಸೆಂಬರ್ ಒಳಗೆ ಈ ಎಸ್.ಟಿ.ಪಿ. ಕಾರ್ಯ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ಸುಮಾರು 58 ಕಟ್ಟಡ ಸಮುಚ್ಚಯಗಳಿಗೆ ತಲಾ 3 ಕೋಟಿ ರೂ. ದಂಡ ವಿಧಿಸಲಾಗಿದೆ. ಆದರೆ ಈವರೆಗೆ 4 ಕೋಟಿ ರೂ. ಮಾತ್ರವೇ ಸಂಗ್ರಹವಾಗಿದೆ ಎಂದು ತಿಳಿಸಿದರು.

ಕಟ್ಟಡ ನಿರ್ಮಾಣ ಮಾಡಿದ ಬಿಲ್ಡರ್ ಗಳು ಮನೆಗಳನ್ನು ಮಾರಾಟ ಮಾಡಿ ಹೋಗಿದ್ದಾರೆ. ಆದರೆ ಈಗ ಮನೆ ಖರೀದಿಸಿರುವ ಮಧ್ಯಮವರ್ಗದ ಜನರಿಂದ ದಂಡ ವಸೂಲಿ ಮಾಡುವುದು ಕಷ್ಟವಾಗಿದೆ ಆದರೂ ಕಾನೂನಿನ ಮಿತಿಯಲ್ಲಿ ದಂಡ ವಸೂಲಿ ಮಾಡಿ ಕೆರೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ ತಿಳಿಸಿದರು.

ಸಭೆಯಲ್ಲಿ ಮಂಡಳಿಯ ಅಧ್ಯಕ್ಷ ಶಾಂತ ತಿಮ್ಮಯ್ಯ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಜಾವೇದ್ ಅಖ್ತರ್ ಮತ್ತಿತರರು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ