Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಮೋಹನ ದಾಸರಿ ಅವರಿಂದ ನಾಮಪತ್ರ ಸಲ್ಲಿಕೆ

 

ಸುದ್ದಿಮೂಲ ವಾರ್ತೆ


ಬೆಂಗಳೂರು.ಏ.15: ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಅವಧಿ ಆರಂಭವಾಗಿದ್ದು, ಬೆಂಗಳೂರಿನ ಸಿವಿ ರಾಮನ್ ನಗರ ಕ್ಷೇತ್ರದ ಅಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿರುವ ಮೋಹನ ದಾಸರಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.



ಇಂದು ಬೆಳಿಗ್ಗೆ 12 ಗಂಟೆಗೆ ಸಿವಿ ರಾಮನ್ ನಗರ ಕ್ಷೇತ್ರದ ಆಪ್ ಅಭ್ಯರ್ಥಿ ಮೋಹನ ದಾಸರಿ ಅವರು ನಾವಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಬೈಕ್ ರ್ಯಾಲಿಯನ್ನ ಮಾಡಿದ್ದಾರೆ. ಈ ವೇಳೆ ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರ ಹೂವಿನ ಹಾರವನ್ನ ಹಾಕಿ ಮೆರವಣಿಗೆ ಬರಮಾಡಿಕೊಂಡಿದ್ದು. ಈ ಸೇರಿದಂತೆ ಅಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.


ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೋಹನ ದಾಸರಿ ಅವರು ಬೃಹತ್ ಬೈಕ್ ರ್ಯಾಲಿ ಮತ್ತು ಮೆರವಣಿಗೆ ಮಾಡುವ ಮುಖಾಂತರ ಹಳೇ ಏರ್ಪೋಟ್ ರಸ್ತೆಯ ವಿಂಡ್ ಟನಲ್ ರಸ್ತೆ, ತಿಪ್ಪಸಂದ್ರ ರಸ್ತೆ, ಜೀವನ್ ಬೀಮ್‌ನಗರ ಮಾರ್ಗವಾಗಿ ಕೋಡ…


ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಶಾಂತಲಾ ದಾಮ್ಲೆ ಅವರಿಂದ ನಾಮಪತ್ರ ಸಲ್ಲಿಕೆ


ರಾಜ್ಯದಲ್ಲಿ ಈಗಾಗಲೇ ನಾಮಪತ್ರ ಸಲ್ಲಿಕೆ ಅವಧಿ ಶುರುವಾಗಿದ್ದು, ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಅಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿರುವ ಶಾಂತಲಾ ದಾಮ್ಲೆ ಅವರು ಇಂದು ನಾಮಪತ್ರ ಸಲ್ಲಿಕೆಯನ್ನ ಮಾಡಿದ್ದಾರೆ.


ಇಂದು ಬೆಳಿಗ್ಗೆ 10 ಗಂಟೆಗೆ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಆಪ್ ಅಭ್ಯರ್ಥಿ ಶಾಂತಲಾ ದಾಮ್ಲೆ ಸೇರಿದಂತೆ ಅಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಇರುವ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಪೂಜೆಯನ್ನ ಸಲ್ಲಿಸಿದ್ದಾರೆ. ಬಳಿಕ ಎಲ್ಲಾರಿಗೂ ಸಿಹಿಯನ್ನ ಹಂಚಿ ದೇವಸ್ಥಾನದಿಂದ ನೂರಾರು ಕಾರ್ಯಕರ್ತರೆಲ್ಲಾ ಸೇರಿ ರ‍್ಯಾಲಿ ಹಾಗೂ ಕಾಲ್ನಡಿಗೆ ಮೂಲಕ ಮಹಾಲಕ್ಷ್ಮೀಪುರ 2ನೇ ಅಡ್ಡರಸ್ತೆ, ಪೈಪ್‌ಲೈನ್ ರೋಡ್‌ನಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರವನ್ನ ಸಲ್ಲಿಸಿದ್ದಾರೆ.


ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಶಾಂತಲಾ ದಾಮ್ಲೆ. ಇಂದು ನಾಮಪತ್ರವನ್ನ ಸಲ್ಲಿಸುತ್ತಿದ್ದೇನೆ. ಕಳೆದ ಎರೆಡುವರೆ ವರ್ಷದಿಂದ ನಾವು ಈ ಕ್ಷೇತ್ರದಲ್ಲಿ ಪ್ರತಿಯೊಂದು ಮನೆಗೂ ಸತತ 5 ಬಾರೀ ಹೋಗಿ ಅವರ ಸಮಸ್ಯೆಗಳಿಗೆ ಆಲಿಸಿದ್ದೇವೆ. ಎಲ್ಲಾರ ಹೇಳುತ್ತಿರುವುದು ಒಂದು ನಿಮಗೆ ಈ ಬಾರೀ ನಮ್ಮ ಬೆಂಬಲವನ್ನ ನೀಡಿ ಅವಕಾಶವನ್ನ ನೀಡುತ್ತೇವೆ. ನಮಗೂ ಬದಲಾವಣೆ ಬೇಕಾಗಿದೆ. ಹಾಗಾಗಿ ಚುನಾವಣೆಯಲ್ಲಿ ಪೊರಕೆ ಗುರುತಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ