Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ: ಫೆಬ್ರವರಿ 2ನೇ ವಾರದೊಳಗೆ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು, ಜ.20: ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಯನ್ನು ಫೆಬ್ರವರಿ 2ನೇ ವಾರದೊಳಗೆ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣ ಹಂತದ ಕಾಮಗಾರಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಂತಿಮಸ್ತರದ ಮತ್ತು ಮುಕ್ತಾಯ ಹಂತದ ಕಾಮಗಾರಿ ಮತ್ತು ಇತರೆ ಪ್ರಕ್ರಿಯೆಗಳ ಕುರಿತು ಸಚಿವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಇತರೆ ಅಧಿಕಾರಿಗಳೊಂದಿಗೆ ವಿಸ್ತೃತವಾದ ಚರ್ಚೆ ನಡೆಸಿದರು.

ಫೆಬ್ರವರಿ 2ನೇ ವಾರದಲ್ಲಿ ಈ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಸಿದ್ಧವಿರುವಂತೆ ಕಾಮಗಾರಿಯನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಲು ಸಚಿವರು ಸೂಚನೆ ನೀಡಿದರು.

ಇಂಡಿಗೋ, ಸ್ಟಾರ್ ಏರ್, ಅಲಯನ್ಸ್ ಏರ್ ಮತ್ತು ವಿಸ್ತಾರ ವಿಮಾನಯಾನ ಸಂಸ್ಥೆಗಳೊಂದಿಗೆ ವಿಮಾನಯಾನ ಪ್ರಾರಂಭಿಸುವ ಕುರಿತು ಆ ವಿಮಾನ ನಿಲ್ದಾಣದಲ್ಲಿ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಸಂಸ್ಥೆಗಳಿಗೆ ವಿವರ ನೀಡಲು ಕ್ರಮ ಕೈಗೊಳ್ಳಲು ಸಹ ನಿರ್ದೇಶಕರಿಗೆ ಸೂಚಿಸಲಾಯಿತು.

ಅಗ್ನಿಶಾಮಕ ಉಪಕರಣಗಳನ್ನು ಮತ್ತು ನ್ಯಾವಿಗೇಷನ್ ಸಲಕರಣೆಗಳನ್ನು ಪಡೆಯಲು ಮತ್ತು ಸ್ಥಾಪಿಸಲು ತ್ವರಿತ ಗತಿಯಲ್ಲಿ ಕ್ರಮಕೈಗೊಳ್ಳಲು ಸೂಚಿಸಲಾಯಿತು. ವಿಮಾನ ನಿಲ್ದಾಣ ಪರವಾನಿಗೆ ಪ್ರಕ್ರಿಯೆಗೆ ದಾಖಲಾತಿಗಳನ್ನು ಸಿದ್ಧಪಡಿಸಿ ಮುಂದಿನ ಕ್ರಮವಹಿಸಲು ಸೂಚಿಸಲಾಯಿತು.

ಪ್ಯಾಕೇಜ್1, 2, 3ರ ಪ್ರಗತಿ ಮತ್ತು ವಿಮಾನನಿಲ್ದಾಣ ಪ್ರಾಧಿಕಾರ ಜೊತೆಗಿನ ಒಪ್ಪಂದಗಳು ಅಂತಿಮಗೊಳಿಸುವುದನ್ನು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಬಂಡವಾಳ ಅಭಿವೃದ್ಧಿ ನಿಗಮ ಇವರಿಗೆ ವಹಿಸಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ