Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಕ್ರೀದ್ ಹಬ್ಬ: ಶಾಂತಿ ಪಾಲನೆಗೆ ಕ್ರಮವಹಿಸಲು ಸೂಚನೆ

ಬಕ್ರೀದ್ ಹಬ್ಬ: ಶಾಂತಿ ಪಾಲನೆಗೆ ಕ್ರಮವಹಿಸಲು ಸೂಚನೆ

ಸುದ್ದಿಮೂಲವಾರ್ತೆ

ಕೊಪ್ಪಳ ಜೂನ್ 27 : ಜುಲೈ 29ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ವೇಳೆಯಲ್ಲಿ ಪ್ರಾಣಿವಧೆ, ಜಾನುವಾರು ಸಾಗಣೆ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಕಾಯ್ದೆಯನ್ವಯ ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಹೇಳಿದರು.

ಜೂನ್ 26ರಂದು ಜಿಲ್ಲಾಡಳಿತ ಭವನದಲ್ಲಿನ ಕೇಸ್ವಾನ್ ಹಾಲನಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾದ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ತೆರೆಯಬೇಕು. ಚೆಕ್‌ಪೋಸ್ಟಗಳಲ್ಲಿ ಪೊಲೀಸ್ ಹಾಗೂ ಪಶು ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಜಾನುವಾರು ಸಾಗಾಣಿಕೆ ಅಕ್ರಮವಾಗಿ ಪ್ರಾಣಿಗಳ ಸಾಗಾಣಿಕೆ ನಿಯಮ ಬಾಹಿರವಾಗಿದ್ದು, ಎಲ್ಲ ವಯಸ್ಸಿನ ಆಕಳು, ಆಕಳು ಕರು, ಹೋರಿ, ಎತ್ತು ಅಲ್ಲದೆ 13 ವರ್ಷದೊಳಗಿನ ಎಮ್ಮೆ, ಕೋಣ ಹಾಗೂ ಉಚ್ಚ ನ್ಯಾಯಾಲಯದ ಆದೇಶದನ್ವಯ ಒಂಟೆಗಳನ್ನು ಹತ್ಯೆ ಮಾಡುವಂತಿಲ್ಲ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಅತ್ಯವಶ್ಯಕತೆ ಇದ್ದು, ಈ ಕುರಿತು ಸಂಬಂಧಿಸಿದ ತಂಡಗಳು ಸೂಕ್ತ ನಿಗಾ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬಕ್ರೀದ್ ಹಬ್ಬದ ಹಿನ್ನೆಲೆ ಎಲ್ಲ ತಾಲೂಕುಗಳಲ್ಲಿ ವಿವಿಧ ಸಮುದಾಯ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಬೇಕು ಎಂದು ಹೇಳಿದರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ ಪಿ.ಎಂ.ಮಲ್ಲಯ್ಯ ಅವರು ಮಾತನಾಡಿ, ಪ್ರಾಣಿ ಹಿಂಸೆ ಪ್ರತಿಬಂಧಕ ಕಾಯ್ದೆ ಪ್ರಕಾರ ಯಾವುದೇ ಪ್ರಾಣಿಯನ್ನು ಹೊಡೆಯುವುದು, ಒದೆಯುವುದು, ಸವಾರಿ ಮಾಡುವುದು, ಅತೀಭಾರ ಹೇರುವುದು, ಚಿತ್ರಹಿಂಸೆ ನೀಡುವುದು, ನಿಗದಿತ ಸಮಯಕ್ಕಿಂತ ಮೀರಿ ಬಂಧಿಸುವುದು, ಮಾಲೀಕನಾಗಿ ಅವಶ್ಯಕ ನೀರು, ಆಹಾರ, ನೆಲೆ ಸಕಾಲದಲ್ಲಿ ನೀಡದೇ ಇರುವುದು, ಪ್ರಾಣಿಗಳನ್ನು ಗಾಯಗೊಳಿಸುವುದು, ಕೊಲ್ಲುವುದು, ಪ್ರಾಣಿಗಳ ಕಾದಾಟ ಮಾಡಿಸುವುದು ಇನ್ನಿತರೆ ಪ್ರಾಣಿ ಹಿಂಸೆ ಕೃತ್ಯಗಳನ್ನು ಈ ಕಾಯ್ದೆಯನ್ವಯ ನಿಷೇಧಿಸಲಾಗಿದೆ. ಇಂತಹ ಕೃತ್ಯದಲ್ಲಿ ಭಾಗಿಯಾದಲ್ಲಿ ದಂಡ ಸಹಿತ 3 ತಿಂಗಳವರೆಗೆ ಕಾರಾಗೃಹ ವಾಸದ ಸಜೆ ಇದೆ. ಕೊಂಬು ಸುಡುವುದು, ಕಸಿಮಾಡುವುದು, ಸಾಮಾಜಿಕ ಕಾರಣಗಳಿಗಾಗಿ ಬೀದಿ ನಾಯಿಗಳನ್ನು ಸೆರೆಹಿಡಿಯುವುದು/ಕೊಲ್ಲುವುದು ಇದಕ್ಕೆ ವಿನಾಯಿತಿ ಇದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕೊಪ್ಪಳ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ, ಡಿವೈಎಸ್ಪಿ ಶರಣಪ್ಪ ಸುಬೇದಾರ ಸೇರಿದಂತೆ ಪಶು ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ