Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಕಾಣಿಸಿಕೊಂಡ ಶಾಲೆಯ ಗೋಡೆಯ ಮೇಲೆ ಅಶ್ಲೀಲ ಬರಹ

ಸುದ್ದಿಮೂಲವಾರ್ತೆ

ಕೊಪ್ಪಳ ಜು 15: ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಗೋಡೆ ಬರಹ ಇಂದು ಮತ್ತೆ ಕಾಣಿಸಿಕೊಂಡಿದೆ. ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಇಲ್ಲಿ ಅವಮಾನಕರ ಘಟನೆ ನಡೆದಿದೆ. ಇಲ್ಲಿ ಒಂದೇ ಕೋಮಿನ ವಿದ್ಯಾರ್ಥಿನಿಯರ ಹೆಸರಗಳನ್ನು ಅಶ್ಲೀಲವಾಗಿ ಬರೆಯುವದರಿಂದ ಇಲ್ಲಿ ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇದೆ.

ಇಂದು ಕನಕಗಿರಿಯ ಕರ್ನಾಟಕ ಪಬ್ಲಿಕ್ ಶಾಲೆಯ ಗೋಡೆಯ ಮೇಲೆ ಕೆಲವು ವಿದ್ಯಾರ್ಥಿನಿಯರನ್ನು ಉದ್ದೇಶವಿಟ್ಟುಕೊಂಡು ಗೋಡೆಯ ಮೇಲೆ ಬರೆದಿದ್ದಾರೆ.

ಒಂದೇ ತಿಂಗಳಲ್ಲಿ ಕನಕಗಿರಿ ಪಟ್ಟಣದಲ್ಲಿ ಮೂರನೇ ಬಾರಿ ಬಾಲ ಬಿಚ್ಚಿದ ಕಿಡಿಗೇಡಿಗಳು ಬರಹ ಬರೆದಿದ್ದಾರೆ. ಶಾಲೆಯ ಗೋಡೆಗಳ ಮೇಲೆ ಪುಂಡರಿಂದ ಬರಹ ಬರೆಯಲಾಗಿದೆ.

ಸರಕಾರಿ ಪದವಿ ಪೂರ್ವ ಕಾಲೇಜು ಆವರಣದ ಪ್ರಾಥಮಿಕ ಶಾಲೆ ಹಾಗು ಪಬ್ಲಿಕ್ ಶಾಲೆಯಲ್ಲಿ ಬರಹ ಕಾಣಿಸಿಕೊಂಡಿದೆ.

ಗೋಡೆ ಬರಹದಿಂದ ವಿದ್ಯಾರ್ಥಿನಿಯರು ಮುಜುಗರಕ್ಕೊಳಗಾಗುತ್ತಿದ್ದು ಇದರಿಂದ ಹಲವು ವಿದ್ಯಾರ್ಥಿನಿಯರು ಶಾಲಾ ಕಾಲೇಜಿಗೆ ಬರಲು ಹಿಂಜರಿಯುತ್ತಾ ಶಾಲೆ ಬಿಡುತ್ತಿದ್ದಾರೆ.

ಈ ಘಟನೆಯ ಕುರಿತು ಪೊಲೀಸ್ ಇಲಾಖೆಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸುತ್ತಿರುವ ಆರೋಪ ಕೇಳಿ ಬರುತ್ತಿದೆ.

ಈ ಮಧ್ಯೆ ಈ ಕುರಿತು ಒಂದು ತಂಡ ರಚಿಸಲಾಗಿದೆ. ಅನುಮಾನ ಬಂದ ವ್ಯಕ್ತಿಯನ್ನು ಕರೆದು ವಿಚಾರಣೆ ಮಾಡಲಾಗಿದೆ. ಇಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವದಕ್ಕಿಂತ ಇಲ್ಲಿ ಬೇರೆ ಯಾವುದೊ ಉದ್ದೇಶದಿಂದ ಈ ಘಟನೆ ನಡೆಯುತ್ತದೆ. ಈ ಘಟನೆಯಲ್ಲಿ ಪಾಲ್ಗೊಂಡವರ ಪತ್ತೆ ಮಾಡಲಾಗುವುದು ಎಂದು ಎಸ್ಪಿ ಯಶೋದಾ ವಂಟಿಗೋಡ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ