Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ. 8 ರಂದು  ʻಭಕ್ತಿ ಗೀತಾಂಜಲಿʼ  ಕಾರ್ಯಕ್ರಮ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.೨೮: ಭಾರತೀಯ ವಿದ್ಯಾಭವನದ ಬೆಂಗಳೂರು ಕೇಂದ್ರವು ಕಳೆದ ಆರು ದಶಕಗಳಿಂದಲೂ ಸಾಂಸ್ಕೃತಿಕ ಲೋಕದಲ್ಲಿ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದ್ದು ಅನೇಕ ಮಹತ್ವದ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿದೆ. ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದ ಹೃದಯರೋಗ ತಜ್ಞರು ಮತ್ತು ಭಾರತೀಯ ವಿದ್ಯಾ ಭವನದ ಬೆಂಗಳೂರು ಕೇಂದ್ರದ ಉಪಾಧ್ಯಕ್ಷರಾಗಿದ್ದ ಡಾ.ವಿ.ಪರಮೇಶ್ವರ ಅವರ ನೆನಪಿನ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಅವರ ಕುಟುಂಬದವರ ಸಹಕಾರದೊಂದಿಗೆ ಏರ್ಪಡಿಸುತ್ತಾ ಬಂದಿದ್ದು ಈ ವರ್ಷ ʼಭಕ್ತಿ ಗೀತಾಂಜಲಿʼ ಎನ್ನುವ ಹೆಸರಿನಲ್ಲಿ ವಿಶಿಷ್ಟವಾಗಿ ಅದನ್ನು ರೂಪಿಸಲಾಗಿದೆ.

ಮೇ. 8 ಸೋಮವಾರ ಬೆಳಗ್ಗೆ 10.30ಕ್ಕೆ ಭಾರತೀಯ ವಿದ್ಯಾಭವನದ ಕೆ.ಆರ್.ಜೆ ಸಭಾಗಂಣದಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು ಪ್ರಖ್ಯಾತ ವಿಧ್ವಾಂಸರಾದ ಶತವಧಾನಿ ಡಾ. ಆರ್. ಗಣೇಶ್ ಅದನ್ನು ವಿಭಿನ್ನವಾದ ರೀತಿಯಲ್ಲಿ ವಿನ್ಯಾಸಗೊಳಿಸಿ ಪ್ರಸ್ತುತ ಪಡಿಸಲಿದ್ದಾರೆ. ಇದರೊಂದಿಗೆ ಶ್ರೀ ರಾಜಗೋಪಾಲ ಶರ್ಮಾ ಅವರಿಂದ ವೇದ ಪಾರಾಯಣ ಕಾರ್ಯಕ್ರಮವು ನಡೆಯಲಿದೆ. ಇನ್ನೊಂದು ವಿಶೇಷ ಆಕರ್ಷಣೆ ಎಂದರೆ ಡಾ. ರಂಜನಿ ವಾಸುಕಿ ಅವರ ಹಾಡುಗಾರಿಕೆಯ ಕಾರ್ಯಕ್ರಮವು ಆಯೋಜನೆಗೊಂಡಿದ್ದು ವಿದ್ವಾನ್ ವಿಶ್ವಜಿತ್ ಮತ್ತೂರ ವಾಯಲಿನಲ್ಲಿ ಮತ್ತು ವಿದ್ವಾನ್ ಸಾಯಿವಂಶಿ ಮೃದಂಗದಲ್ಲಿ ಹಾಡುಗಾರಿಕೆಗೆ ಸಾತ್ ನೀಡಲಿದ್ದಾರೆ.

ಭಾರತೀಯ ವಿದ್ಯಾಭವನದ ನಿರ್ದೇಶಕರಾದ ಶ್ರೀ ಎಚ್.ಎನ್ ಸುರೇಶ್ ಅವರು ಈ ವಿಶೇಷ ಭಕ್ತಿ ಗೀತಾಂಜಲಿ ಕಾರ್ಯಕ್ರಮವೂ ಭಾರತೀಯ ಸಂಸ್ಕೃತಿ ಮತ್ತು ಭಕ್ತಿ ಸಂಗೀತದ ಪರಂಪರೆಯನ್ನು ಪ್ರಚುರ ಪಡಿಸುವ ಮಹತ್ವದ ಕಾರ್ಯಕ್ರಮ ವಾಗಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಅದನ್ನು ಯಶಸ್ವಿಗೊಳಿಸ ಬೇಕೆಂದು ಅಹ್ವಾನ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ