Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಯಾಲಸನಹಳ್ಳಿ‌ಯ ಪೂರ್ವ ಫಾಮ್ ಬೀಚ್ ಸಮುಚ್ಚಯದಲ್ಲಿ ಓಣಂ ಹಬ್ಬ ಆಚರಣೆ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ ಸೆ.10:ಕ್ಯಾಲಸನಹಳ್ಳಿ‌ ಪೂರ್ವ ಫಾಮ್ ಬೀಚ್ ವಸತಿ ಸಮುಚ್ಚಯದ ನಿವಾಸಿಗಳು ಸಾಂಪ್ರದಾಯಿಕ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಪೂರ್ವ ಫಾಮ್ ಬೀಚ್ ಕೇರಳ ಸಾಂಸ್ಕೃತಿಕ ಸಮಿತಿ ವತಿಯಿಂದ ವಸತಿ ಸಮುಚ್ಚಯ ಆವರಣದಲ್ಲಿ ಆಯೋಜಿಸಲಾಗಿದ್ದ ಓಣಂ ಹಬ್ಬ ಪ್ರಯುಕ್ತ ಚಂಡೆ ಮೇಳ, ಮನರಂಜನೆ, ಸಂಗೀತ, ಗೀತೆ ಗಾಯನ, ಮೇಗಾ ತಿರುವಾತೀರಾ ನೃತ್ಯ ಪ್ರದರ್ಶನ, ವಿವಿಧ ಕ್ರೀಡಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಬಿಡುವಿಲ್ಲದೆ ಸದಾ ಕೆಲಸದ ಒತ್ತಡದ ನಡುವೆ ಬ್ಯುಸಿಯಾಗಿರುತ್ತಿದ್ದ ವಸತಿ ಸಮುಚ್ಚಯ ನಿವಾಸಿಗಳಲ್ಲಿ ಓಣಂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಸಣ್ಣ ಮಕ್ಕಳಿಂದ ಹಿಡಿದು, ಮಹಿಳೆಯರು ಸೇರಿದಂತೆ ಹಿರಿಯ ನಾಗರೀಕರು ಹಬ್ಬದ ಪ್ರಯುಕ್ತ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಮಹಿಳೆಯರು ಸಾಂಪ್ರದಾಯಿಕ ಉಡುಗೆ ಗಮನ ಸೆಳೆಯಿತು. ಪೂರ್ವ ಫಾಮ್ ಬೀಚ್ ನಿವಾಸಿ ಮತ್ತು ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ್ ಘನಶ್ಯಾಮ್ ಮಾತನಾಡಿ, ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಹೊಂದಿರುವ ಓಣಂ ಹಬ್ಬವನ್ನು ಪ್ರತಿವರ್ಷ ಧಾರ್ಮಿಕವಾಗಿ ಹಬ್ಬವಾಗಿ ಆಚರಣೆ ಮಾಡುವ ಪಧ್ಧತಿ ರೂಢಿಯಲ್ಲಿದೆ. ನೆಲದ ಸಂಸ್ಕೃತಿ ಬೆಳಸಿ ಉಳಿಸುವ ನಿಟ್ಟಿನಲ್ಲಿ ಅನಾದಿಕಾಲದಿಂದಲೂ ನಮ್ಮ ಪೂರ್ವಿಕರು ಆಚರಣೆ ಮಾಡಿಕೊಂಡಿರುವ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತೇವೆ. ಎಲ್ಲಾ ಭಾಷೆ ಧರ್ಮದವರು ಒಂದಾಗಿ ಈ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಾಂಸ್ಕೃತಿಕ ಚಟುವಟಿಕೆ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಅಯೋಜನೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ್ ಘನಶ್ಯಾಮ್, ಪಿಪಿಬಿ ಕೇರಳ ಸಾಂಸ್ಕೃತಿಕ ಸಮಿತಿಯ ಶಿಜು ಥಾಮಸ್, ದಿಲೀಪ್ ಮೋಹನ್, ಖ್ಯಾತ ಯೂಟ್ಯೂಬರ್ ಜೋರ್ಡಿಂಡಿಯನ್ ಹಾಗೂ ವಸತಿ ಸಮುಚ್ಚಯದ ನಿವಾಸಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ