Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಾರಪಟ್ಟಣವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಪಣ : ಶಾಸಕ ಕೆ.ವೈ.ನಂಜೇಗೌಡ






ಸುದ್ದಿಮೂಲ ವಾರ್ತೆ


ಮಾಲೂರು, ಜೂ 28 : ಚುನಾಯಿತ ಪ್ರತಿನಿಧಿಗಳು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಾದರೆ ಅಧಿಕಾರಿಗಳ ಸಹಕಾರ ಅತಿ ಮುಖ್ಯ. ಅಭಿವೃದ್ಧಿಯಲ್ಲಿ ಮಾದರಿ ತಾಲ್ಲೂಕ್ಕಾನ್ನಾಗಿ ಮಾಡಲು ಅಧಿಕಾರಿಗಳು ಸಹಕರಿಸಬೇಕೆಂದು ಶಾಸಕ ಕೆ. ವೈ ನoಜೇಗೌಡ ಹೇಳಿದರು.


ತಾಲ್ಲೂಕಿನ ಶಿವಾರಪಟ್ಟಣ ಗ್ರಾಮದಲ್ಲಿ ಹಮ್ಮಿಕೊoಡಿದ್ದ ಶುದ್ಧಕುಡಿಯುವ ನೀರಿನ ಘಟಕದ ಕಾಮಗಾರಿಗೆ ಗುದ್ದಲಿ ಪೂಜೆ, ನೂತನ ಸಮುದಾಯಭವನ ಉದ್ಘಾಟನೆ ಹಾಗೂ ಎರಡನೇ ಬಾರಿಗೆ ಶಾಸಕರಾದ ಹಿನ್ನಲೆಯಲ್ಲಿ ಗ್ರಾಮಸ್ಥರು ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.


ಮಾಲೂರು ತಾಲ್ಲೂಕಿನಲ್ಲಿ ಹೆಚ್ಚು ಕಂದಾಯ ಬರುವ ಗ್ರಾಮಪಂಚಾಯತಿ ಇದ್ದು ಆದಾಯಕ್ಕೆ ತಕ್ಕಂತೆ ಅಭಿವೃದ್ಧಿಯಾಗಿರುವ ಗ್ರಾಮ ಪಂಚಾಯತಿ ಶಿವಾರಪಟ್ಟಣ ಗ್ರಾಮ ಪಂಚಾಯತಿಯಾಗಿದೆ. ಈ ಪಂಚಾಯಿತಿಯಲ್ಲಿ ಚುನಾಯಿತ ಅಧ್ಯಕ್ಷ, ಉಪಾಧ್ಯಕ್ಷ ಸದ್ಯಸರ ಜತೆಗೆ ಅಧಿಕಾರಿಗಳು ಒಳ್ಳೆ ಸಹಕಾರ ಕೊಡುತ್ತಿದ್ದಾರೆ. ಅದರಂತೆ ಎಲ್ಲಾ ಸದ್ಯಸರು ಒಗ್ಗಟ್ಟಿನಿಂದ ಅಭಿವೃದ್ಧಿ ಕೆಲಸಗಳಲ್ಲಿ ಮುಂದಾಗಿ ನನ್ನ ಸಲಹೆ ಸಹಕಾರವನ್ನು ಪಡೆದುಕೊಂಡಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಜನಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ತಿಳಿಸಿದರು.


 ಹಿಂದೆ ನಾನು ಶಾಸಕನಾಗಿದ್ದಾಗ ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತ ನಡೆಸುತ್ತಿದ್ದರಿಂದ ನಾನು ಏನು ಮಾಡಲು ಆಗಲಿಲ್ಲ. ಈಗ ರಾಜ್ಯದಲ್ಲಿ ನಮ್ಮದೇ ಆದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವುದರಿಂದ ತಾಲ್ಲೂಕನ್ನು ಹೆಚ್ಚು ಅಭಿವೃದ್ಧಿ ಮಾಡುತ್ತೇನೆ. ನಾನು ಎರಡನೇ ಬಾರಿಗೆ ಶಾಸಕನಾಗಲು ಶಿವಾರಪಟ್ಟಣದ ನಮ್ಮ ಮುಖಂಡರು ತುಂಬಾ ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಶಿಲ್ಪ ಕಲೆಗಳ ತವರೂರಾದ ಶಿವಾರಪಟ್ಟಣದ ಅಭಿವೃದ್ಧಿಗೆ 10ಕೋಟಿ ಅನುದಾನ ತರಲಾಗಿತ್ತು ಎಂದರು.


ಮಾಸ್ತಿ ವೆಂಕಟೇಶ್ ಅಯ್ಯoಗಾರ್ ರವರು ಮಾಸ್ತಿಯಲ್ಲಿ ಜನಿಸಿ, ವಿದ್ಯಾಬ್ಯಾಸ ಮಾಡಿದ್ದು ಶಿವಾರ ಪಟ್ಟಣದಲ್ಲಿ. ಆದ್ದರಿಂದ ಮಾಸ್ತಿ ಮತ್ತು ಶಿವಾರಪಟ್ಟಣವನ್ನು ಹೆಚ್ಚು ಅಭಿವೃದ್ಧಿ ಮಾಡುವುದಾಗಿ ತಿಳಿಸಿದರು.


ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮುನೇಗೌಡ, ಗ್ರಾ. ಪಂ. ಅಧ್ಯಕ್ಷ ಮುನಿರತ್ನಮ್ಮ, ಉಪಾಧ್ಯಕ್ಷೆ ಉಷಾ ರಘುನಾಥ್ , ಸದ್ಯಸರಾದ ಜಗನಾಥಚಾರಿ, ನಾರಾಯಣಸ್ವಾಮಿ, ಮುನೇಗೌಡ, ರಾಧಮ್ಮ, ತಿಮ್ಮಯ್ಯ, ಅನಂತ್ ನಾಯಕ್, ಲೋಕೇಶ್, ಮಹಾದೇವ್ ಪಾಂಚಾಲ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ