Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ ಬಿಜೆಪಿ ಟಿಕೆಟ್‌ ಗಾಗಿ ಪಂಚಮಸಾಲಿ ಲಾಭಿ

ಸುದ್ದಿಮೂಲವಾರ್ತೆ
ಕೊಪ್ಪಳ ಏ ೦೭: ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಸಂಸದ ಸಂಗಣ್ಣ ಕರಡಿ ಟಿಕೆಟ್ ಗಾಗಿ ಪಂಚಮಸಾಲಿ ದಾಳ ಉರುಳಿಸುತ್ತಿದ್ದಾರೆ. ಜಿಲ್ಲೆಯ ಪಂಚಮಸಾಲಿ ಮುಖಂಡರೊಂದಿಗೆ ಕೂಡಲ ಸಂಗಮದ ಶ್ರೀಜಯಮೃತ್ಯುಂಜಯ ಸ್ವಾಮಿಗಳನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಒಬ್ಬರು ಪಂಚಮಸಾಲಿಗಳಿಗೆ ಟಿಕೆಟ್ ಗಾಗಿ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

ಕೊಪ್ಪಳ ಸಂಸದ ಸಂಗಣ್ಣ ಕರಡಿಯಿಂದ ಈಗ ಕೊಪ್ಪಳ ವಿಧಾನಸಭೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಸಂಸದರಿಗೆ ಟಿಕೆಟ್ ಇಲ್ಲ ಎಂಬ ಬಿಜೆಪಿ ಹೈಕಮಾಂಡ ಸಂದೇಶದಿಂದ ಟೆನ್ಸನ್ ಗೆ ಒಳಗಾಗಿರುವ ಸಂಗಣ್ಣ ಕರಡಿ ಈ ತೀವ್ರ ಯತ್ನ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಜಿಲ್ಲೆಯ ಪಂಚಮಸಾಲಿ ಮುಖಂಡರಾದ ಮಾಜಿ ಶಾಸಕ ಕೆ ಶರಣಪ್ಪ. ಯಲಬುರ್ಗಾದ ಬಸಲಿಂಗಪ್ಪ ಭೂತೆ ಸೇರಿ ಹಲವು ಮುಖಂಡರೊಂದಿಗೆ ರಾಜ್ಯ ಮುಖಂಡರನ್ನು ಭೇಟಿ ಮಾಡಿಸಿದ್ದಾರೆ, ಈ ಮಧ್ಯೆ ಪಂಚಮಸಾಲಿ ಸಮಾಜದ ಕೂಡಲ ಸಂಗಮದ ಶ್ರೀಜಯಮೃತ್ಯಂಜಯ ಸ್ವಾಮೀಜಿ ಭೇಟಿ ಮಾಡಿ ಒತ್ತಡ ಹಾಕಿಸುವ ತಂತ್ರ ಹಾಕಿಸುತ್ತಿದ್ದಾರೆ.

ಈ ಮಧ್ಯೆ ಕೊಪ್ಪಳ, ಯಲಬುರ್ಗಾ ಹಾಗು ಕುಷ್ಟಗಿಯಲ್ಲಿ ಪಂಚಮಸಾಲಿ ಸಮಾಜದ ಮತದಾರರು ಗಣನೀಯವಾಗಿದ್ದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಂಚಮಸಾಲಿಗಳಿಗೆ ಒಬ್ಬರಿಗೆ ಟಿಕೆಟ್ ಕೊಡಬೇಕು. ಅದರಲ್ಲಿ ಕೊಪ್ಪಳದಿಂದ ಸಂಗಣ್ಣ ಕರಡಿಯವರಿಗೆ ನೀಡಬೇಕು. ಒಂದು ವೇಳೆ ಸಂಗಣ್ಣನವರಿಗೆ ಟಿಕೆಟ್ ಕೊಡದಿದ್ದರೆ ಕುಷ್ಟಗಿಯಿಂದ ಬಸವರಾಜ ಹಳ್ಳೂರಿಗೆ ನೀಡುವಂತೆ ಜಿಲ್ಲೆ ಪಂಚಮಸಾಲಿ ಮುಖಂಡರ ಒತ್ತಡ ಹಾಕಿದ್ದಾರೆ. ಇದೇ ಉದ್ದೇಶಕ್ಕಾಗಿ ಕಳೆದ ತಿಂಗಳ ಓಜನಳ್ಳಿಯಲ್ಲಿ ಸಂಗಣ್ಣ ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿದ್ದರು ಎಂಬ ಚರ್ಚೆಯೂ ಆರಂಭವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ