Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಕೆ.ವೈ. ನಂಜೇಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

 

ಸುದ್ದಿಮೂಲ ವಾರ್ತೆ

ಮಾಲೂರು, ಜೂ.15: ಬೆಂಗಳೂರು ನಿರ್ಮಾತ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡುವುದಾಗಿ ಶಾಸಕ ಕೆ.ವೈ. ನಂಜೇಗೌಡ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಗುರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರು ನಿರ್ಮಾತರಾಗಿ ಎಲ್ಲಾ ಜಾತಿ ಧರ್ಮಗಳನ್ನು ಒಗ್ಗಟ್ಟಿ ನಿಂದ ಕೊಂಡೊಯ್ಯುವ ಮೂಲಕ ಈ ನಾಡಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೆಂಪೇಗೌಡರನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಸರ್ಕಾರ ಜೂನ್ 22 ರಂದು ಜಯಂತಿಯನ್ನು ಆಚರಣೆ ಮಾಡಲಾಗುತಿದೆ. ಅದರಂತೆ ತಾಲೂಕಿನಲ್ಲಿ ಸರ್ಕಾರಿ ಸುತ್ತೋಲೆಯಂತೆ ಇದೇ 22ರಂದು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದರು.

ಅಂದು ತಾಲೂಕು ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ರ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪ ನಮನ ಅರ್ಪಿಸಿ ನಂತರ ವಿವಿಧ ಕಲಾತಂಡಗಳ ಮೂಲಕಮೆರವಣಿಗೆ ಹೋಗಿ ಕೆಂಪೇಗೌಡ ವೃತ್ತದಲ್ಲಿನ ಕೆಂಪೇಗೌಡ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿನಂತರ ಕೆಂಪೇಗೌಡ ಭಾವ ಚಿತ್ರ ಗಳಿರುವ ಪಲ್ಲಕ್ಕಿ ಗಳು ವಿವಿಧ ಜಾನಪದ ಕಲಾತಂಡಗಳು ಪಟ್ಟಣದ ರಾಜಭೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು.

ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿ ಮೆರವಣಿಗೆಯಲ್ಲಿ 28 ಗ್ರಾಮ ಪಂಚಾಯಿತಿಗಳಿಂದ 14 ಪಲ್ಲಕ್ಕಿಗಳು ಭಾಗವಹಿಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು. ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ವಿವಿಧ ಜಾತಿ ಜನಾಂಗಗಳ ಸಂಘ ಸಂಸ್ಥೆಗಳು ಒಕ್ಕಲಿಗ ಮತ್ತು ಎಲ್ಲಾ ಸಮುದಾಯದ ಸಂಘ ಸಂಸ್ಥೆಗಳು ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಕೆ.ರಮೇಶ್, ತಾಪಂ ಇಒ ಮುನಿರಾಜು, ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಧರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವಿ ಮುನೇಗೌಡ, ಪುರಸಭಾ ಸದಸ್ಯರುಗಳಾದ ಎ ರಾಜಪ್ಪ, ಪರಮೇಶ್, ಮುಖಂಡರಾದ ರಾಮೇಗೌಡ ಕೆ ಎಸ್ ವೆಂಕಟೇಶಗೌಡ, ಬೈಯಣ್ಣ ತಿಮ್ಮೇಗೌಡ ದಿನೇಶ್ ಗೌಡ ಹರೀಶ್ ಗೌಡ ಅನಂತರಾಜು ಶ್ರೀನಿವಾಸ್ ಮಿಂಡಳ್ಳಿ ಮುನೇಗೌಡ,ದೇವರಾಜ್ ಸೋಮಣ್ಣ ನಾಗೇಶ್ ಮುನಿರಾಜು ಲಕ್ಷ್ಮೀನಾರಾಯಣ್ ರಾಘವೇಂದ್ರ ಅಧಿಕಾರಿಗಳಾದ ಯೋಜನಾ ಪ್ರಧಿಕಾರದ ಕೃಷ್ಣಪ್ಪ ಬೆಸ್ಕಾo ಎಇ ಇಒ ಅನ್ಸರ್ ಬಾಷಾ ಪೊಲೀಸ್ ಪಿ ಎಸ್ ಐ ಧನಲಕ್ಷ್ಮಿ, ಜೆ ಇ ವಿಶ್ವನಾಥ್ ಪುರಸಭೆ ಸಿ ಎ ಓ ಮಂಜುನಾಥ್ ಖಜಾನೆ ಅಧಿಕಾರಿ ವರದರಾಜ್ ಇತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ