ಬೆಂಗಳೂರು: ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೬ನೇ ಜಯಂತಿ ಅಂಗವಾಗಿ ಪ್ರಧಾನಿ ಮೋದಿಯವರು ಕನ್ನಡದಲ್ಲೇ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ನನ್ನ ನಮನ. ಅವರು ಲಕ್ಷಾಂತರ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಸಮಾಜಸೇವೆಗೆ ಉನ್ನತ ಸ್ಥಾನ ಮತ್ತು ಜನರನ್ನು ಸಶಕ್ತಗೊಳಿಸುವುದಕ್ಕೆ ಅವರು ಪ್ರಾಮುಖ್ಯ ನೀಡಿದ್ದರು. ಅವರ ಕನಸುಗಳನ್ನು ಪೂರೈಸಲು ನಾವು ಸದಾ ಶ್ರಮಿಸುತ್ತೇವೆ. pic.twitter.com/Ksam3jSiJm
— Narendra Modi (@narendramodi) April 1, 2023
‘ಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬದ ಈ ವಿಶೇಷ ಸಂರ್ಭದಲ್ಲಿ ಅವರಿಗೆ ನನ್ನ ನಮನ. ಅವರು ಲಕ್ಷಾಂತರ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಸಮಾಜಸೇವೆಗೆ ಉನ್ನತ ಸ್ಥಾನ ಮತ್ತು ಜನರನ್ನು ಸಶಕ್ತಗೊಳಿಸುವುದಕ್ಕೆ ಅವರು ಪ್ರಾಮುಖ್ಯ ನೀಡಿದ್ದರು. ಅವರ ಕನಸುಗಳನ್ನು ಪೂರೈಸಲು ನಾವು ಸದಾ ಶ್ರಮಿಸುತ್ತೇವೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.