Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಪ್ರಿಯಾ ಕೃಷ್ಣ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.20: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾ ಕೃಷ್ಣ ಅವರು ಇಂದು ಅಪಾರ ಸಂಖ್ಯೆಯ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ವಿಜಯನಗರದ ಕಾಂಗ್ರೆಸ್ ಅಭ್ಯರ್ಥಿ ಎಂ ಕೃಷ್ಣಪ್ಪ ಅವರು ಮಂಗಳವಾರ ಅಪಾರ ಸಂಖ್ಯೆಯ ಜನಸಮೂಹದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದರು . ಇಂದು ಅವರ ಪುತ್ರ ಗೋವಿಂದರಾಜನಗರದ ಕೈ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ಅದಕ್ಕೂ ಮುನ್ನ ಪ್ರಿಯಾ ಕೃಷ್ಣ ಅವರು, ರಾಜಾಜಿನಗರದ 6ನೇ ಬ್ಲಾಕ್ ನಲ್ಲಿರುವ ಶ್ರೀ ಗಣೇಶನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ವಿನಾಯಕನ ಆಶೀರ್ವಾದ ಪಡೆದರು. ನಂತರ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆಯ ಮೂಲಕ ಗೋವಿಂದರಾಜನಗರದ ಚುನಾವಣಾ ಅಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ರಾಜಾಜಿನಗರದ 6ನೇ ಬ್ಲಾಕ್ ನಿಂದ ಆರಂಭವಾದ ಮೆರವಣಿಗೆಯು, ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರ, ಟೋಲ್ ಗೇಟ್, ದಾಸರಹಳ್ಳಿಯ ನವೀನ್ ಪಾರ್ಕ್, ಗೋವಿಂದರಾಜನಗರ, ಶೋಭಾ ಆಸ್ಪತ್ರೆ, ಮೂಡಲಪಾಳ್ಯ ವೃತ್ತ, ನಾಗರಭಾವಿ ವೃತ್ತ, ಚಂದ್ರಲೇಔಟ್ ನ 80 ಅಡಿ ರಸ್ತೆ ಮಾರ್ಗವಾಗಿ, ಗೋವಿಂದರಾಜನಗರದ ಚುನಾವಣಾ ಅಧಿಕಾರಿಗಳ ಕಛೇರಿ ತಲುಪಿತು.

ಮೆರವಣಿಗೆ ಆರಂಭಕ್ಕೂ ಮುನ್ನ, ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು, ದಾರಿಯುದ್ದಕ್ಕೂ

ಪಕ್ಷದ ಬಾವುಟ ಹಿಡಿದು, ನೆಚ್ಚಿನ ನಾಯಕನಿಗೆ ಜೈಕಾರ ಹಾಕುತ್ತ ಸಾಗಿದರು.

ಮಹಿಳೆಯರು, ಪುರುಷರು, ಯುವಕರು ಸೇರಿದಂತೆ 15ಸಾವಿರಕ್ಕೂ ಅಧಿಕ ಜನ ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಮೂಲಕ, ಪ್ರಿಯಾ ಕೃಷ್ಣ ಅವರಿಗೆ ಸಾಥ್ ನೀಡಿದರು. ಈ ವೇಳೆ ಡೋಲು, ವೀರಗಾಸೆ, ಕೀಲುಗೊಂಬೆ ಕುಣಿತ ಸೇರಿದಂತೆ ಹಲವು ಜನಪದ ಕಲಾತಂಡಗಳು ಮೆರವಣಿಗೆಯ ಮೆರುಗು ಮತ್ತಷ್ಟು ಹೆಚ್ಚಿಸಿದವು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ