Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಣ್ಣು ಮಗು ರಕ್ಷಿಸಿ, ಓದಿಸಿ ಕಾರ್ಯಕ್ರಮ

ಸುದ್ದಿಮೂಲ ವಾರ್ತೆ ಮಸ್ಕಿ, ಜ.21:
ಕೇಂದ್ರ ಸರಕಾರದ ಭೇಟಿ ಬಚಾವೋ ,ಭೇಟಿ ಪಡಾವೋ ಯೋಜನೆಗೆ ಇಡೀ ಸಮಾಜವನ್ನೇ ಮುನ್ನಡೆಸುವ ಶಕ್ತಿಿಯಿದೆ ಎಂದು ಮಸ್ಕಿಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಪಂಪಾಪತಿ ಹೂಗಾರ ಅಭಿಪ್ರಾಾಯ ವ್ಯಕ್ತಪಡಿಸಿದರು.
ಮಸ್ಕಿಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆಯಿಂದ ಬುಧವಾರ ನಡೆದ ಹೆಣ್ಣು ಮಕ್ಕಳನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಎಂಬ ಕಾರ್ಯಕ್ರಮದ ಲ್ಲಿ ಅವರು ಮಾತನಾಡಿದರು.
ಹೆಣ್ಣು ಸಂತಾನದ ಪ್ರಮಾಣ ಗಣನೀಯವಾಗಿ ಕಡಿಮೆಯಿದೆ. 1961 ರಲ್ಲಿ 1000 ಗಂಡುಗಳಿಗೆ 961 ಹೆಣ್ಣು ಮಕ್ಕಳಿದ್ದರು. ಆದರೆ, 2011 ರಲ್ಲಿ 1000 ಗಂಡುಗಳಿಗೆ 918 ಹೆಣ್ಣು ಮಕ್ಕಳಿದ್ದಾರೆಂಬ ಮಾಹಿತಿ ತಲ್ಲಣಗೊಳಿಸುತ್ತದೆ. ಹೀಗಾಗಿ ಗಂಡು, ಹೆಣ್ಣು ಸಂತಾನದ ಅನುಪಾತ ಸಾಕಷ್ಟು ವ್ಯತ್ಯಾಾಸ ಕಂಡು ಬರುತ್ತಿಿದ್ದು, ಇದರಿಂದ ಸಾಮಾಜಿಕವಾಗಿ, ಕೌಟುಂಬಿಕವಾಗಿ ಆಗುತ್ತಿಿರುವ ತೊಂದರೆ ತಪ್ಪಿಿಸಲು ಪ್ರಧಾನಿ ಇಂತಹ ಮಹತ್ವದ ಯೋಜನೆಯನ್ನು ಅನುಷ್ಠಾಾನಕ್ಕೆೆ ತಂದಿದ್ದಾರೆ. ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮಾಜಕ್ಕೆೆ ಜಾಗೃತಿ ಮೂಡಿಸಬೇಕು. ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆಯ ಮೇಲ್ವಿಿಚಾರಕಿ ಶಿವಲೀಲಾ ಹಿರೇಮಠ. ಮಾತನಾಡಿ, ಗಂಡು, ಹೆಣ್ಣಿಿನ ಅನುಪಾತ ಅವಲೋಕಿಸಿಯಾದರೂ ನಾವು ಎಚ್ಚೆೆತ್ತುಕೊಳ್ಳಬೇಕಿದೆ. ಹೆಣ್ಣಿಿಗೆ ಹೆಣ್ಣೆೆ ಶತ್ರು ಆಗಬಾರದು. ತನಗೆ ಗಂಡು ಮಗುವೇ ಬೇಕು ಎನ್ನುವ ಆಸೆ ಬಿಡಬೇಕು. ಮನೆಯಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳನ್ನು ಸಮಾನವಾಗಿ ನೋಡುವ ಮನೋಭಾವ ಎಲ್ಲರಲ್ಲೂ ಮೂಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುರೇಶ್ ಹರಸೂರು,ಮು ಗು ಮೋಹನ್ ಬಾವಿಮನಿ, ಜಿ ವೆಂಕಟೇಶ್,ಅಮರೇಶ ಪತ್ತಾಾರ,ಡಾ. ಅಮರೇಶ, ಶಶಿರೇಖಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ವಿದ್ಯಾಾರ್ಥಿನಿಯರು ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ