Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದುರ್ಬಲ ವರ್ಗದ ಜನರ ಹಿತಾಸಕ್ತಿ ಕಾಪಾಡಿ- ಬಿ.ಚನ್ನಕೃಷ್ಣಪ್ಪ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ, ಅ.30;ಸಾಮಾಜಿಕ ನ್ಯಾಯ ಹಾಗೂ ದುರ್ಬಲ ವರ್ಗದ ಜನರ ಹಿತಾಸಕ್ತಿಯನ್ನು ಕಾಪಾಡುವ ಮೂಲಕ ಸಂಘಟನೆಯ ಉದ್ದೇಶಗಳನ್ನು ಸಾಧಿಸಬೇಕಾಗಿದೆ ಎಂದು ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ ಹೇಳಿದರು.

ಕೆ.ಆರ್.ಪುರ ಸಮೀಪದ ಬೆನ್ನಿಗಾನಹಳ್ಳಿಯ ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯ ಕಚೇರಿಯಲ್ಲಿ ಆಯೋಜಿಸಿದ್ದ ಯುವ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸಮಾಜದಲ್ಲಿ ಬೇರೂರಿರುವ ಸಮಾನತೆಯನ್ನು ತೊಡೆದು ಹಾಕಲು ಸಂಘಟನೆ ಮುಖ್ಯವಾಗುತ್ತದೆ. ಎಲ್ಲಾ ವರ್ಗದ ಜನರು ಸಂಘಟಿತರಾಗಿ ನಮಗೆ ಬೇಕಾದ ಮೂಲಭೂತ ಹಕ್ಕುಗಳನ್ನು ಪಡೆಯಲು ಸಂಘಟನೆ ಪ್ರಬಲವಾದ ಅಸ್ತ್ರವಾಗಿದೆ. ಹೋರಾಟದ ಮೂಲಕ ಜನರನ್ನು ಶಿಕ್ಷಿತರನ್ನು ಮಾಡಬೇಕಿದೆ ಎಂದರು.

ಸಮಾನತೆ ಮತ್ತು ತುಳಿತಕ್ಕೆ ಒಳಗಾದವರ ರಕ್ಷಿಸುವ ಉದ್ದೇಶ ಹೊಂದಿರುವ ಕರ್ನಾಟಕ ಸಮತಾ ಸೈನಿಕ ದಳ ರಾಜ್ಯದಲ್ಲಿ ಪ್ರಬಲ ಸಂಘಟನೆಯಾಗಿ ಹೊರಹೊಮ್ಮಿದೆ. ಪ್ರಮುಖ ಸಂಘಟನೆಯಾಗಿರುವ ಕರ್ನಾಟಕ ಸಮತಾ ಸೈನಿಕ ದಳ ರಾಜ್ಯದ ಜ್ವಲಂತ ಸಮಸ್ಯೆಗಳ ಮೇಲೆ ಸರ್ಕಾರದ ಗಮನ ಸೆಳೆಯುವ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

ಕರ್ನಾಟಕ ಸಮತಾ ಸೈನಿಕ ದಳದ ಯುವ ಘಟಕಕ್ಕೆ ಗೌರವ ಅಧ್ಯಕ್ಷರಾಗಿ ಪುನೀತ್, ಅಧ್ಯಕ್ಷರಾಗಿ ರೇವಂತ್, ಕಾರ್ಯಾಧ್ಯಕ್ಷರಾಗಿ ಅಭಿಲಾಷ್, ಉಪಾಧ್ಯಕ್ಷರಾಗಿ ಸಂತೋಷ್, ಮಂಜು, ಅಲ್ಫಾನ್ ಜೊತೆಗೆ ಇನ್ನೂ ನೂರಾರು ಯುವಕರು ಆಯ್ಕೆಯಾದರು.

ಈ ಸಂಧರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ರಘುಪತಿ, ಕನ್ನಹಳ್ಳಿ ಕೃಷ್ಣಪ್ಪ, ಯುವಶಕ್ತಿ ಸೂರಿ ಇದ್ದರು

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ