Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಸಿಯೂಟ‌ ತಯಾರಕರ ಪ್ರತಿಭಟನೆ

ಸುದ್ದಿಮೂಲವಾರ್ತೆ

ಕೊಪ್ಪಳ, ಸೆ.16:ಕೊಪ್ಪಳ ತಾಲೂಕಿನ ಬಿಸಿಯೂಟ ತಯಾರಕರು ಇಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಬಿಸಿಯೂಟ ತಯಾರಕರ ಒಕ್ಕೂಟದಿಂದ ಪ್ರತಿಭಟನೆಯನ್ನು ನಡೆಸಿದರು.

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಬಿಸಿಯೂಟ ನೌಕರರಿಗೆ ನೀಡಿದ ಭರವಸೆಗಳನ್ನು ಜಾರಿಮಾಡದಿರುವ ಶಿಕ್ಷಣ ಸಚಿವರ ಧೋರಣೆಗಳನ್ನು ಖಂಡಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟ ರಾಜ್ಯ ಮಂಡಳಿಯು ಕರೆ ನೀಡಿರುವ ಚಳುವಳಿಗೆ ಬೆಂಬಲಿಸಿ ಇಂದು ಕೊಪ್ಪಳ ಜಿಲ್ಲೆಯ ಬಿಸಿಯೂಟ ತಯಾರಕರು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿ, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕೊಪ್ಪಳ ತಾಲೂಕಿನ ಬೋಚನಳ್ಳಿ ಗ್ರಾಮದ ಬಿಸಿಯೂಟ ಮಹಿಳೆ ದೇವಮ್ಮ ಇವರು ಅಡುಗೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟು ಒಂದು ವರ್ಷವಾಗಿದ್ದು, ಅವರಿಗೂ ಸರಕಾರ ತಕ್ಷಣ ಪರಿಹಾರವನ್ನು ಘೋಷಿಸಬೇಕು.

ಚುಣಾವಣೆಯ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿಯವರು ಘೋಷಣೆ ಮಾಡಿದ್ದ 6ನೇ ಗ್ಯಾರಂಟಿಯನ್ನು ಜಾರಿ ಮಾಡಬೇಕು ಅಂದರೆ ಬಿಸಿಯೂಟ ವೇತನವನ್ನು 6ಸಾವಿರ ರೂಪಾಯಿಗೆ ಹೆಚ್ಚಿಸಬೇಕು. ಶಾಲಾ ಮುಖ್ಯೋಪಾಧ್ಯಾಯರ ಮತ್ತು ಎಸ್ಡಿಎಂಸಿ ಅಧ್ಯಕ್ಷರ ಹೆಸರಲ್ಲಿ ಬ್ಯಾಂಕಿನ ಖಾತೆಯನ್ನು ತೆರೆಯಬೇಕೆನ್ನುವ ಹೊಸ ಆದೇಶವನ್ನು ಸರಕಾರ ಕೈಬಿಡಬೇಕು. ಕನಿಷ್ಟ ವೇತನವನ್ನು ಜಾರಿಗೆ ತರಬೇಕು. ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಹಿಂದಿನ ಸರಕಾರ ಹೆಚ್ಚಿಸಿದ ಒಂದು ಸಾವಿರ ರೂಪಾಯಿ ಗೌರವಧನವನ್ನು ತಕ್ಷಣ ಬಿಡುಗಡೆಯನ್ನು ಮಾಡಬೇಕು. ಹೀಗೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸಿದರು.

ಈ ಸಂದರ್ಭದಲ್ಲಿ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ್, ಬಸವರಾಜ ಶೀಲವಂತರ, ಗಾಳೆಪ್ಪ ಮುಂಗೋಲಿ, ಸಿದ್ಲಿಂಗಪ್ಪ ಹಡಪದ, ಮಕಬೂಲ ರಾಯಚೂರು, ಪುಷ್ಪಾ ಮೇಸ್ತ್ರಿ, ಶರಣಮ್ಮ ಹೊಸಬಂಡಿ ಹರ್ಲಾಪುರ, ನಿರ್ಮಲ, ವಿಮಲಾ, ಪದ್ಮಾ ಹುಲಗಿ ವಹಿಸಿಕೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ