Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಉಪೇಂದ್ರರನ್ನು ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ ಅ.18: ಸಾಮಾಜಿಕ ಜಾಲತಾಣಗಳಲ್ಲಿ ದಲಿತರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪದ ಬಳಕೆ ಮಾಡಿರುವ ನಟ ಉಪೇಂದ್ರ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಕಾರ್ಯಕರ್ತರು ವೈಟ್ ಫೀಲ್ಡ್ ಸಮೀಪದ ಹೋ ಪಾರಂ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದ, ರಾಜ್ಯಾಧ್ಯಕ್ಷ ಸೋರುಣೆಸೆ ವೆಂಕಟೇಶ್, ಚಿತ್ರ ನಟರಿಗೆ ಜಾತಿ, ಮತ ಧರ್ಮ ಯಾವುದಕ್ಕೆ ಅಂಟಿಕೊಂಡಿರುವುದಿಲ್ಲ ಎಂಬ ಮಾತಿದೆ, ಸಮಾಜಕ್ಕೆ ಮಾದರಿಯಾಗಬೇಕಾದ ಒಬ್ಬ ಹೆಸರಾಂತ ನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ದಲಿತರನ್ನು ಹೊಲೆಯ ಎಂಬ ಪದ ಬಳಕೆ ಮಾಡಿರುವುದು ಖಂಡಾನೀಯ, ಸಾರ್ವಜನಿಕರ ಜೀವನದಲ್ಲಿ ಇರುವ ನಟ ದಲಿತ ಭಾವನೆಗಳಿಗೆ ಘಾಸಿ ಉಂಟು ಮಾಡುವ ಪದ ಬಳಕೆ ಮಾಡಿರುವುದು ಅವರ ಮನುವಾದಿ ಸಂಸ್ಕೃತಿ ಎಂಬುದನ್ನು ಎತ್ತಿ ತೋರಿಸುತ್ತದೆ. ಊರೆಂದರೆ ಹೊಲಗೇರಿ ಇರುತ್ತದೆ ಪದ ಬಳಿಸಿದ್ದಾರೆ. ಉಪೇಂದ್ರ ಅವರ ದೃಷ್ಟಿಯಲ್ಲಿ ದಲಿತರು ಕೊಳಕು ಮನಸ್ಥಿಯವರಾ? ಕೆಟ್ಟವರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೊಡ್ಡ ಸಮುದಾಯ ದಲಿತ ಸಮಾಜವನ್ನು ಕೆರಳಿಸುವ ಕೆಲಸ ಮಾಡಿದ್ದಾರೆ, ಉಪೇಂದ್ರ ಬಂಧನ ಆಗುವವರೆಗೂ ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲಾ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ ನಡೆಸುತ್ತೇವೆ. ಈ ವಿಚಾರದಲ್ಲಿ ಜೈಲಿಗೆ ಹೋದರು ನಮ್ಮ ಹೋರಾಟ ಕೈಬಿಡುವುದಿಲ್ಲ,ಮುಂದೆ ಅವರು ನಟಿಸಿ ಪ್ರದರ್ಶನವಾಗುವ ಚಲನ ಚಿತ್ರಗಳಿಗೆ ಮಸಿ ಬಳಿಯುವ ಕೆಲಸ ಮಾಡಿಯೇ ತೀರುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ. ದಲಿತ ವಿರೋಧಿ ಹೇಳಿಕೆ ನೀಡಿರುವ ಉಪೇಂದ್ರ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಜ್ಯ ಯುವ ಅದ್ಯಕ್ಷ ವಿಜಯಕುಮಾರ್, ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಸತ್ಯವತಿ, ಬೀಮ್ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್ ಪದಾಧಿಕಾರಿಗಳಾದ ಭಾಗ್ಯ, ಜಯ ಕುಮಾರ್, ಬಿ.ಟಿ.ರಘು, ಸುರೇಶ್‌ ಸೇರಿದಂತೆ ಇತರರು ಪಾಲ್ಗೊಂಡರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ