Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾಹುಲ್ ನೇತೃತ್ವದಲ್ಲಿ ಪ್ರತಿಭಟನೆ ರಾಮಲೀಲಾ ಮೈದಾನದ ಮತಗಳವು ವಿರುದ್ಧದ ಹೋರಾಟದಲ್ಲಿ ಭಾಗಿ: ಡಿಕೆಶಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.13
ಚುನಾವಣಾ ಆಯೋಗ ನಡೆಸುತ್ತಿರುವ ಮತಗಳವು ವಿರುದ್ಧ ಭಾನುವಾರ ಎಐಸಿಸಿ ಹಮ್ಮಿಕೊಂಡಿರುವ ಮತಗಳವು ವಿರುದ್ಧದ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಉಪ ಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆೆಗಳಿಗೆ ಉತ್ತರಿಸಿದರು.
ಮತದಾರರ ಹಕ್ಕಿಿನ ರಕ್ಷಣೆಗಾಗಿ ಮತ ಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೇವೆ. ಮತ ಕಳ್ಳತನ ವಿರುದ್ಧದ ಹೋರಾಟ ನಮ್ಮ ರಾಜ್ಯದಿಂದಲೇ ಆರಂಭವಾಗಿದ್ದು, ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ನಮ್ಮ ರಾಜ್ಯದಲ್ಲಿ ಚಿಲುಮೆ ಸಂಸ್ಥೆೆ ಮೂಲಕ ಈ ಹಿಂದೆ ಸಾವಿರಾರು ಬಿಎಲ್ಓಗಳನ್ನು ನೇಮಕ ಮಾಡಿ ಅಕ್ರಮ ಎಸಗಲಾಗಿತ್ತು ಎಂದು ತಿಳಿಸಿದರು.
ಕಾಂಗ್ರೆೆಸ್ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆೆ ಹಾಗೂ ಸಂವಿಧಾನ ಬದ್ಧವಾಗಿ ನಡೆದುಕೊಂಡು ಬಂದಿದೆ. ಈಗಾಗಲೇ ನಮ್ಮ ರಾಜ್ಯದ ಎಲ್ಲಾ ಮೂಲೆಗಳಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ದೆಹಲಿಗೆ ರೈಲು ಹಾಗೂ ಇತರೆ ಸಾರಿಗೆ ವ್ಯವಸ್ಥೆೆ ಮೂಲಕ ತೆರಳಿದ್ದಾರೆ. ಈ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
ನಾವು ಚುನಾವಣೆ ಸೋತಿರಬಹುದು ಆದರೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಹೀಗಾಗಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಈ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಿಕೊಂಡಿದ್ದಾರೆ ಎಂದರು.
ನೋಟೀಸ್‌ಗೆ ಉತ್ತರ ನೀಡುವೆ
ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, ನಾನು ಶನಿವಾರ ದೆಹಲಿ ತಲುಪುವುದೇ ತಡವಾಗುತ್ತದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆೆ ಸಂಬಂಧಿಸಿದಂತೆ ನನಗೆ ನೋಟೀಸ್ ಬಂದಿದ್ದು ಅದಕ್ಕೆೆ ನಾನು ಉತ್ತರ ನೀಡಬೇಕಿದೆ. ಎಲ್ಲಾ ದಾಖಲೆ ತೆಗೆದುಕೊಂಡು ಹೋಗಿ ಅವರಿಗೆ ಉತ್ತರ ನೀಡುತ್ತೇನೆ ಎಂದರು.
ಡ್ರಗ್ ಪೆಡ್ಲರ್ ಮನೆಗಳ ಮೇಲೆ ಬುಲ್ಡೋೋಜರ್ ಹತ್ತಿಿಸಬೇಕು ಎಂಬ ಗೃಹ ಸಚಿವರ ಹೇಳಿಕೆ ಬಗ್ಗೆೆ ಕೇಳಿದಾಗ, ಇದರ ಬಗ್ಗೆೆ ಆನಂತರ ಮಾತನಾಡುತ್ತೇನೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ