Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಳವೆ ಬಾವಿ ಕೊರೆಯುತ್ತಿರುವವರಿಗೆ ಬ್ರೇಕ್‌ ಹಾಕಲಿ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ ಜೂ 22 : ಕಾಡುಗುಡಿ ಮತ್ತು ಹಗದೂರು ವಾರ್ಡ್ ಗಳಲ್ಲಿ ಅನಧಿಕೃತವಾಗಿ ಕೊರೆಯುತ್ತಿರುವ ಕೊಳವೆ ಬಾವಿಗಳನ್ನು ತಡೆಯುವಂತೆ ಭೀಮ್ ಪ್ರಜಾ ಸಂಘದ ಕಾರ್ಯಕರ್ತರು ವೈಟ್ ಫೀಲ್ಡ್ ನ ವಿಜಯನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಭೀಮ್ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್ ಮಾತನಾಡಿ, ಸರ್ಕಾರ ನಿಯಮದ ಪ್ರಕಾರ 250 ಮೀಟರ್ ಅಂತರದಲ್ಲಿ ಕೊಳವೆ ಬಾವಿ ಕೊರೆಯಬೇಕು. ಆದರೆ ಬಿಲ್ಡರ್ ಗಳು ತಮಗೆ ಇಷ್ಟ ಬಂದಂತೆ 250 ಮೀಟರ್ ಒಳಗೆ ಅಕ್ರಮವಾಗಿ ಕೊಳವೆ ಬಾವಿ ಕೊರೆಸುತ್ತಿದ್ದಾರೆ. ಸಾರ್ವಜನಿಕರಿಗಾಗಿ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಗುಟ್ಟದಲ್ಲಿ ಸರ್ಕಾರದ ಕೊಳವೆ ಬಾವಿ ಕೊರೆಯಲಾಗಿದೆ. ಈ ಕೊಳವೆ ಬಾವಿ ಪಕ್ಕದಲ್ಲಿಯೇ ಬಿಲ್ಡರ್ ಗಳು ಮೂರು ಕೊಳವೆ ಬಾವಿ ಕೊರೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಕ್ರಮವಾಗಿ ಕೊಳವೆ ಬಾವಿ ಕೊರೆಯುತ್ತಿದ್ದರೂ ಬಿಬಿಎಂಪಿಯ ಅಧಿಕಾರಿಗಳು ಬಿಲ್ಡರ್ ಗಳಿಗೆ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿದ್ದಾರೆ. ಕಾಡುಗುಡಿ ಹಾಗೂ ಹಗದೂರು ವಾರ್ಡ್ ಹಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಈ ಬಗ್ಗೆ ಲೋಕಯುಕ್ತರಿಗೆ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ದೂರು ನೀಡಲಾಗಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ