Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ- ಆರ್.ಅಶೋಕ್

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ಪಕ್ಷ ನೇರ ಕಾರಣ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ “ಭಾರತ ವಿಭಜನೆಯ ದುರಂತ ಕಥೆಗೆ ಸಂಬಂಧಿಸಿದ ಪ್ರದರ್ಶಿನಿ”ಯ ಉದ್ಘಾಟನೆ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ 76ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, 14ರ ದೇಶ ಇಬ್ಭಾಗದ ಘಟನೆ ಮೂಲಕ ಸ್ವಾತಂತ್ರ್ಯ ಯೋಧರಿಗೆ ಅಪಮಾನ ಆಗಿದೆ ಎಂದರು.

ನೆಹರೂರವರ ನೇತೃತ್ವದ ಕಾಂಗ್ರೆಸ್ ಹುನ್ನಾರದ ಪರಿಣಾಮವಾಗಿ ಜಿನ್ನಾ ಅವರ ಮೂಲಕ ಈ ಆಟ ಮಾಡಲಾಯಿತು. ಕಾಂಗ್ರೆಸ್ ಸಂಸ್ಕøತಿಯೇ ಇದು. ಕಾಶ್ಮೀರವು ನಮ್ಮದೇ ಎನ್ನುವ ಎದೆಗಾರಿಕೆ ಅವರಿಗೆ ಇರಲಿಲ್ಲ. 370ನೇ ವಿಧಿಯನ್ನು ರದ್ದು ಮಾಡಿದ ಬಳಿಕ ಲೂಟಿ, ದಂಗೆ ಕಡಿಮೆ ಆಗಿದೆ. ಕಾಂಗ್ರೆಸ್ ದೇಶವನ್ನು ತುಂಡರಿಸಿದೆ ಎಂದು ಎಐಸಿಸಿ ಅಧ್ಯಕ್ಷ ಖರ್ಗೆಯವರಿಗೆ ತಿಳಿಸಬಯಸುವುದಾಗಿ ಹೇಳಿದರು. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ ಇಂದಿಗೂ ಮುಂದುವರಿದಿದೆ ಎಂದು ಟೀಕಿಸಿದರು. ವಿಭಜನೆ ವೇಳೆ ಹಿಂದೂ, ಸಿಕ್ಖರನ್ನು ಹೊಡೆದು ಓಡಿಸಿದ್ದಲ್ಲದೆ, ಮಾರಣ ಹೋಮ ನಡೆದಿತ್ತು ಎಂದು ವಿವರಿಸಿದರು.

ಮೋದಿಜಿ ಅವರು ದೇಶವನ್ನು ಒಟ್ಟಾಗಿ ಒಯ್ಯುತ್ತಿದ್ದಾರೆ. ಕಾಶ್ಮೀರ, ಮಣಿಪುರ ಮತ್ತಿತರ ಕಡೆಗಣಿತ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಅವರು ಶ್ರಮಿಸುತ್ತಿದ್ದಾರೆ ಎಂದು ನುಡಿದರು.

ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮಾತನಾಡಿ, ದೇಶ ವಿಭಜನೆ ಸಂದರ್ಭದಲ್ಲಿ ಅತ್ಯಂತ ಅದನ್ನು ಕಠೋರವಾಗಿ ವಿರೋಧಿಸಿದವರು ಖಾನ್ ಅಬ್ದುಲ್ ಗಫಾರ್ ಖಾನ್. ಸ್ವಾರ್ಥಕ್ಕಾಗಿ ದೇಶ ವಿಭಜನೆ ಮಾಡದಿರಿ. ದೇಶ ವಿಭಜನೆ ಮಾಡಿದರೆ, ನಮ್ಮನ್ನು ನೀವು ಲಾಹೋರ್‍ನ ಪಠಾಣರ ಕೈಗೆ ಕೊಡುತ್ತೀರಿ. ಅದಕ್ಕಾಗಿ ದೇಶ ವಿಭಜಿಸದಿರಿ ಎಂದು ‘ಗಡಿನಾಡ ಗಾಂದಿ’ü ಖಾನ್ ಅಬ್ದುಲ್ ಗಫಾರ್ ಖಾನ್ ಹೇಳಿದ್ದರು. ಇವತ್ತೂ ಆ ಮಾತು ಪ್ರಸ್ತುತವಾಗಿದೆ ಎಂದರು.

ಪಾಕಿಸ್ತಾನ ಆರ್ಥಿಕವಾಗಿ ದಿವಾಳಿ ಆಗಿದೆ. ದೇಶ ವಿಭಜನೆ ಬಳಿಕ ಅಲ್ಲಿನ ಜನರ ಜೀವನ ನರಕ ಆಗಿದೆ. ಮೋದಿಜಿ ಅವರ ನೇತೃತ್ವದಲ್ಲಿ ಭಾರತದ ಕೀರ್ತಿ ಪ್ರಪಂಚಕ್ಕೆ ಪಸರಿಸಿದೆ ಎಂದು ಅವರು ವಿವರಿಸಿದರು.

ಮಾಜಿ ಸಚಿವ ಡಾ|| ಸಿ.ಎನ್. ಅಶ್ವತ್ಥನಾರಾಯಣ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಶಾಸಕ ಪ್ರೀತಂ ಗೌಡ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ ಮಂಜುನಾಥ್ ಅವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ