Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಸ್ಥಾಾನ, ಮಧ್ಯಪ್ರದೇಶದಲ್ಲಿ 11 ಮಕ್ಕಳ ಸಾವು: ನಿಗಾ ವಹಿಸಲು ರಾಜ್ಯಗಳಿಗೆ ಸಲಹೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿಿನ ಸಿರಪ್ ನೀಡದಂತೆ ಸೂಚನೆ

ಸುದ್ದಿಮೂಲ ವಾರ್ತೆ ನವದೆಹಲಿ, ಅ.04:
ಕೆಮ್ಮಿಿನ ಸಿರಪ್ ಸೇವಿಸಿ ಮಧ್ಯಪ್ರದೇಶ ಮತ್ತು ರಾಜಸ್ಥಾಾನದಲ್ಲಿ 11 ಮಕ್ಕಳು ಮೃತಪಟ್ಟ ಬೆನ್ನಲ್ಲಿಯೇ ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿಿನ ಸಿರಪ್ ನೀಡದಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ.
ಕೇವಲ 15 ದಿನಗಳ ಅಂತರದಲ್ಲಿ ಮಧ್ಯಪ್ರದೇಶ ಮತ್ತು ರಾಜಸ್ಥಾಾನದಲ್ಲಿ 11 ಮಕ್ಕಳು ಮೃತಪಟ್ಟ ಘಟನೆ ದೇಶದಾದ್ಯಂತ ಆಘಾತ ಮೂಡಿಸಿದೆ. ಸಿರಪ್ ಸೇವಿಸಿದ ಮಕ್ಕಳಿಗೆ ಮೂತ್ರ ಬಾರದೆ ಹೊಟ್ಟೆೆ ಊದಿಕೊಂಡು ಬಳಿಕ ಅದು ಕಿಡ್ನಿಿ ವೈಲ್ಯಕ್ಕೆೆ ತಿರುಗಿ ಮಕ್ಕಳು ಸಾವನ್ನಪ್ಪಿಿದ್ದಾರೆ. ವಿಷಕಾರಿ ಡೈಥಿಲೀನ್ ಗ್ಲೈಕೋಲ್ ಬೆರೆಸಿದ ಕಲುಷಿತ ಕೆಮ್ಮಿಿನ ಸಿರಪ್ ಸಾವುಗಳಿಗೆ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಈ ಹಿನ್ನೆೆಲೆಯಲ್ಲಿ ಕೇಂದ್ರ ಸರ್ಕಾರವು ಮಕ್ಕಳಿಗೆ ಕೆಮ್ಮಿಿನ ಸಿರಪ್ ನೀಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆಯನ್ನು ಹೊರಡಿಸಿದ್ದು, ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಅಥವಾ ಶೀತ ಔಷಧಿಗಳನ್ನು ಶಿಾರಸ್ಸು ಮಾಡಬಾರದು ಹಾಗೂ ನೀಡಬಾರದು ಎಂದು ಸೂಚಿಸಿದೆ.
ಅಲ್ಲದೇ, ಐದು ವರ್ಷದೊಳಗಿನ ಮಕ್ಕಳಿಗೆ ಸಾಮಾನ್ಯವಾಗಿ ಕೆಮ್ಮಿಿನ ಸಿರಪ್ಗಳನ್ನು ಶಿಾರಸ್ಸು ಮಾಡುವುದಿಲ್ಲ. ಐದಕ್ಕಿಿಂತ ಮೇಲ್ಪಟ್ಟ ಮಕ್ಕಳಿಗೆ ನೀಡುವಾಗ ಎಚ್ಚರಿಕೆ ವಹಿಸಬೇಕು. ವೈದ್ಯಕೀಯ ಮಾನದಂಡಗಳನ್ನು ಅನುಸರಿಸಬೇಕು. ನಿಕಟ ಮೇಲ್ವಿಿಚಾರಣೆ ಮತ್ತು ಸೂಕ್ತ ಡೋಸ್ ಗಳನ್ನು ಪಾಲನೆ ಮಾಡಬೇಕು ಎಂದು ಸಚಿವಾಲಯ ತಿಳಿಸಿದೆ.
ಕೇಂದ್ರ ಆರೋಗ್ಯ ಇಲಾಖೆ ಶಿಾರಸ್ಸು ಏನು?
* ಮಕ್ಕಳ ಆರೈಕೆಯಲ್ಲಿ ಔಷಧ ಬಗ್ಗೆೆ ತೀವ್ರ ಎಚ್ಚರಿಕೆಯಿಂದ ಇರಬೇಕು
* 2 ವರ್ಷಕ್ಕಿಿಂತ ಕೆಳಗಿನ ಮಕ್ಕಳಿಗೆ ಕೆಮ್ಮು, ಶೀತಕ್ಕೆೆ ಸಿರಪ್ ಬೇಡ
* ವೈದ್ಯರು ಸಿರಪ್ ಶಿಾರಸು ಮಾಡದಂತೆ ಆರೋಗ್ಯ ಇಲಾಖೆ ಸೂಚನೆ
* ಕೆಮ್ಮು ಹೆಚ್ಚಿಿದ್ರೆೆ ವೈದ್ಯರ ಮಾರ್ಗದರ್ಶನದಲ್ಲಿ ಡೊಸೇಜ್ ಮೀರದಂತೆ ಬಳಕೆ
* ಮಾಮೂಲಿ ಶೀತ ಜ್ವರಗಳಿಗೆ ಸಿರಪ್ ಬಳಕೆ ಬೇಡ
* 5 ವರ್ಷಕ್ಕಿಿಂತ ಕಡಿಮೆ ವಯಸ್ಸಿಿನವರಿಗೆ ಶಿಾರಸು ಮಾಡುವಂತಿಲ್ಲ
* ಶೀತ, ಕೆಮ್ಮು ವೇಳೆ ಮಕ್ಕಳು ನಿರ್ಜಲೀಕರಣ (ಡಿಹೈಡ್ರೇೇಟ್) ಆಗದಂತೆ ನೋಡಿಕೊಳ್ಳಬೇಕು
* ಶೀತ, ಕೆಮ್ಮು ತೀವ್ರ ಇದ್ರೆೆ ಮಾತ್ರ ವೈದ್ಯರ ಸಲಹೆಯಂತೆ ಸಿರಪ್ ಬಳಸಬೇಕು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ